AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Vegetable Price: ಟೊಮೆಟೋ ಬೆಲೆ ಭಾರಿ ಹೆಚ್ಚಳ, ಬೆಂಗಳೂರಿನಲ್ಲಿ ತರಕಾರಿ ಬೆಲೆ ಏರಿಕೆ

ಬೆಂಗಳೂರು ತರಕಾರಿ ಬೆಲೆ: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಬೇಸತ್ತು ಹೋಗಿದ್ದಾರೆ. ನಿತ್ಯ ಅತ್ಯಗತ್ಯವಾಗಿ ಬೇಕಾದ ತರಕಾರಿಗಳ ಬೆಲೆ ಕೇಳಿ ಗ್ರಾಹಕರು ಬೇಸರ ಹೊರಹಾಕುವಂತಾಗಿದೆ. ಅದರಲ್ಲೂ ಅಡುಗೆಗೆ ಅನಿವಾರ್ಯವಾದ ಟೊಮೆಟೋ ಬೆಲೆ ಕೆಜಿಗೆ 70-80 ರೂಪಾಯಿಗೆ ಬಂದು ನಿಂತಿದ್ದು ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Bangalore Vegetable Price: ಟೊಮೆಟೋ ಬೆಲೆ ಭಾರಿ ಹೆಚ್ಚಳ, ಬೆಂಗಳೂರಿನಲ್ಲಿ ತರಕಾರಿ ಬೆಲೆ ಏರಿಕೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 26, 2025 | 8:14 AM

Share

ಬೆಂಗಳೂರು, ನವೆಂಬರ್ 26: ಅಗತ್ಯ ವಸ್ತುಗಳ ಬೆಲೆ ಮೇಲಿಂದ ಮೇಲೆ ಏರಿಕೆಯಾಗುತ್ತಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಗಾಯದ ಮೇಲೆ ಬರೆ ಎಳೆಯುವಂತೆ ಪರಿಸ್ಥಿತಿ ಸೃಷ್ಟಿಸಿದೆ. ಅದರಲ್ಲೂ ನಿತ್ಯ ಅನಿವಾರ್ಯವಾದ ತರಕಾರಿಗಳು ಕೂಡ ಜನರ ಕೈಗೆಟುಕದಷ್ಟು (Vegetable Price) ದುಬಾರಿಯಾಗುತ್ತಿವೆ. ಅದರಲ್ಲೂ ಅಡುಗೆಗೆ ಕಡ್ಡಾಯವಾಗಿ ಬೇಕಾದ ಟೊಮೆಟೋ ಬೆಲೆ ಕೇಳಿ ಗ್ರಾಹಕರು ಆಘಾತಕ್ಕೆ ಒಳಗಾಗುತ್ತಿದ್ದಾರೆ. ಬೆಂಗಳೂರಿನಲ್ಲಿ (Bengaluru) ಕಳೆದ ವಾರ ಕೆಜಿಗೆ 30-40 ರೂಪಾಯಿಗೆ ಮಾರಾಟವಾಗುತ್ತಿದ್ದ ಟೊಮೆಟೋ ಪ್ರಸ್ತುತ 70-80 ರೂಪಾಯಿಗೆ ಮಾರಾಟವಾಗುತ್ತಿದೆ. ಇದು ಗ್ರಾಹಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಟೊಮೆಟೋ ಬೆಲೆ ಏರಿಕೆಗೆ ಕಾರಣವೇನು?

ಬೇಡಿಕೆಗೆ ತಕ್ಕಂತೆ ಟೊಮೆಟೋ ವಿತರಣೆಯಾಗದ ಹಿನ್ನೆಲೆ ಈ ಬಿಕ್ಕಟ್ಟು ಉದ್ಭವವಾಗಿದೆ ಎಂದು ಕೆಲವು ವ್ಯಾಪಾರಿಗಳು ಹೇಳಿದ್ದಾರೆ. ನಮ್ಮ ಬೇಡಿಕೆಗೆ ತಕ್ಕಷ್ಟು ಟೊಮೆಟೋ ಪೂರೈಕೆ ಆಗುತ್ತಿಲ್ಲ. ಇದರಿಂದ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ವ್ಯಾಪಾರಿ ಅಹಮದ್ ಎಂಬವರು ತಿಳಿಸಿದ್ದಾರೆ.

ಟೊಮೆಟೋ ಮಾತ್ರವಲ್ಲದೆ ಇನ್ನೂ ಹಲವು ತರಕಾರಿಗಳ ಬೆಲೆಯೂ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಬಟಾಣಿ, ಬೀನ್ಸ್, ಕ್ಯಾರೆಟ್, ನೌಕಲ್, ಬದನೇಕಾಯಿ, ಮೆಣಸಿನಕಾಯಿ ಸೇರಿ ಹತ್ತು ಹಲವು ತರಕಾರಿಗಳ ಬೆಲೆ ಕಳೆದ ವಾರಕ್ಕಿಂತ ಹೆಚ್ಚಿದೆ.

ತರಕಾರಿ – ಕಳೆದ ವಾರದ ಬೆಲೆ – ಪ್ರಸ್ತುತ ಬೆಲೆ (ರೂ.ಗಳಲ್ಲಿ)

  • ಟೊಮೆಟೋ – 40 – 70
  • ಬಟಾಣಿ – 60 – 100
  • ಬೀನ್ಸ್ – 50 – 60
  • ನೌಕಲ್ – 30 – 40
  • ಬದನೇಕಾಯಿ – 40 – 50
  • ಮೆಣಸಿನಕಾಯಿ – 60 – 80
  • ಮೂಲಂಗಿ- 60 – 80
  • ತೊಂಡೆಕಾಯಿ- 50 – 60
  • ಬೆಂಡೆಕಾಯಿ- 50 – 60
  • ಬೆಳ್ಳುಳ್ಳಿ- 100 – 120

ಇದನ್ನೂ ಓದಿ: ಇನ್ಮುಂದೆ ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲೂ ‘KMF ನಂದಿನಿ’ ಹವಾ

ಒಟ್ಟಾರೆ ತರಕಾರಿಗಳ ಖರೀದಿಗೆ ಅಂತ ಇಂತಿಷ್ಟು ಎಂದು ಬಜೆಟ್ ಫಿಕ್ಸ್ ಮಾಡಿಕೊಂಡು ಬರುವ ಗ್ರಾಹಕರು ಕೊಳ್ಳಲು ಹಿಂದೆ ಮುಂದೆ ನೋಡುವಂತೆ ಆಗಿದೆ. 2 ಕೆಜಿ ಕೊಳ್ಳಲು ಬಂದವರು 1 ಕೆಜಿ ಅಥವಾ ಅರ್ಧ ಕೆಜಿ ಕೊಂಡು ಹೋಗುತ್ತಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ನಟ ಸುಂದರ್ ರಾಜ್