AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೈಕ್ಲೋನ್ ಪರಿಣಾಮವಾಗಿ ಅಕಾಲಿಕ ಮಳೆ; ಗಗನಕ್ಕೇರಿದ ತರಕಾರಿ ಬೆಲೆ

Vegetable Price Hike: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ ಅಪ್ಪಳಿಸಿ ಅವಾಂತರ ಸೃಷ್ಟಿಸಿದ್ದಲ್ಲದೇ ಕರ್ನಾಟಕದ ಮೇಲು ಪರಿಣಾಮ ಬೀರಿತ್ತು. ಈ ಹಿನ್ನೆಲೆ ರಾಜ್ಯದ ಹಲವೆಡೆ ವರುಣಾರ್ಭಟ ಜೋರಾಗಿತ್ತು. ಇದೀಗ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತರಕಾರಿ ಬೆಳೆ ಹಾಳಾಗಿದ್ದು, ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಗ್ರಾಹಕರು ಕೊಳ್ಳಲು ಹಿಂದೇಟು ಹಾಕುತ್ತಿದ್ದು, ವ್ಯಾಪಾರಿಗಳು ನಷ್ಟದಲ್ಲಿದ್ದಾರೆ.

ಬೆಂಗಳೂರು: ಸೈಕ್ಲೋನ್ ಪರಿಣಾಮವಾಗಿ ಅಕಾಲಿಕ ಮಳೆ;  ಗಗನಕ್ಕೇರಿದ ತರಕಾರಿ ಬೆಲೆ
ಸೈಕ್ಲೋನ್ ಎಫೆಕ್ಟ್ ಅಕಾಲಿಕ ಮಳೆ, ನಗರದಲ್ಲಿ ವೆಜಿಟೇಬಲ್ ರೇಟ್ ಹೈಕ್!
Kiran Surya
| Edited By: |

Updated on:Oct 31, 2025 | 9:43 AM

Share

ಬೆಂಗಳೂರು, ಅಕ್ಟೋಬರ್ 31: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ (Cyclone Montha) ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿದ್ದವು. ಈ ಹಿನ್ನೆಲೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಹೆಚ್ಚಾಗಿರುವ ತರಕಾರಿ ಬೆಲೆ (Vegetable Rate) ಕೇಳಿದ ಗ್ರಾಹಕರು ಖರೀದಿ ಮಾಡಲು ಹಿಂದೇಟು ಹಾಕುತ್ತಿದ್ದು, ವ್ಯಾಪಾರಿಗಳು ಖರೀದಿದಾರರಿಲ್ಲದೇ ನಷ್ಟವಾಗುತ್ತಿದೆಯೆಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ತರಕಾರಿ ಕೊಳ್ಳಲು ಹಿಂಜರಿಯುತ್ತಿರುವ ಗೃಹಿಣಿಯರು

ಸೈಕ್ಲೋನ್ ಎಫೆಕ್ಟ್ನಿಂದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ಕೆಲ ಭಾಗದಲ್ಲೂ ಭಾರೀ ಮಳೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಅಕಾಲಿಕ ಮಳೆಯಾಗಿತ್ತು. ಇದರಿಂದ ತರಕಾರಿ ಬೆಳೆ ಹಾಳಾಗಿದ್ದು, ಸರಿಯಾಗಿ ಬೆಳೆ ಬಂದಿಲ್ಲ. ಬೆಳೆದ ಬೆಳೆ ಕೈಗೆ ಬರದ ಕಾರಣ ತರಕಾರಿಗಳ ಬೆಲೆ ಗಗನಕ್ಕೇರಿದೆ.ಯಾವ ತರಕಾರಿ ಬೆಲೆ ಕೇಳಿದರೂ ಗ್ರಾಹಕರು ಕಂಗಾಲಾಗುತ್ತಿದ್ದಾರೆ. ಇದರಿಂದ ಯಾರು ತರಕಾರಿ ಕೊಳ್ಳಲು ಬರುತ್ತಿಲ್ಲ, ವ್ಯಾಪಾರ ಸರಿಯಾಗಿ ನಡೆಯದೇ ಇದ್ದರೆ ಜೀವನ ಸಾಗಿಸುವುದು ಕಷ್ಟ ಎಂದು ತರಕಾರಿ ವ್ಯಾಪಾರಿಗಳು ತನ್ನ ನೋವು ತೋಡಿಕೊಂಡಿದ್ದಾರೆ.

ತರಕಾರಿ ಬೆಲೆ ಕೇಳಿ ಗೃಹಿಣಿಯರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಒಂದು ಕೆಜಿ ತರಕಾರಿ ಕೊಂಡುಕೊಳ್ಳುವ ಮಹಿಳೆಯರು ಅರ್ಧ, ಕಾಲು ಕೆಜಿ ಕೊಳ್ಳಲು ಮುಂದಾಗುತ್ತಿದ್ದಾರೆ. ಈ ಬೆಲೆಯೇರಿಕೆಯ ಸಮಯದಲ್ಲಿ ತರಕಾರಿ ಕೊಂಡು ಅಡುಗೆ ಮಾಡುವುದು ಕಷ್ಟ ಎಂದು ಹೇಳಿದ್ದಾರೆ.

ಬೆಂಳೂರಿನಲ್ಲಿ ಇವತ್ತಿನ ತರಕಾರಿ ಬೆಲೆ ( ರೂಪಾಯಿಗಳಲ್ಲಿ)

  • ನುಗ್ಗೆಕಾಯಿ-ಕೆಜಿ- 140 ರಿಂದ 150
  • ಬಟಾಣಿ ಫಾರಂ- 260 ರಿಂದ 270
  • ಬೀನ್ಸ್- 90 ರಿಂದ 100
  • ಈರುಳ್ಳಿ- 40 ರಿಂದ 50
  • ಜವಳಿಕಾಯಿ- 100 ರಿಂದ 120
  • ಶುಂಠಿ- 100 ರಿಂದ 110
  • ಕ್ಯಾರೆಟ್- 90 ರಿಂದ 100
  • ತೊಗರಿಕಾಯಿ-80 ರಿಂದ 100
  • ಹಸಿ ಮೆಣಸಿನಕಾಯಿ- 80 ರಿಂದ 100
  • ಟೊಮೊಟೋ- 30 ರಿಂದ 40
  • ಆಲೂಗಡ್ಡೆ- 50 ರಿಂದ 60
  • ಹೀರೇಕಾಯಿ- 50 ರುಪಾಯಿ 60
  • ಬದನೆಕಾಯಿ- 60 ರಿಂದ 70
  • ಬೆಂಡೆಕಾಯಿ- 70 ರಿಂದ 80
  • ಬಿಟ್ರೂಟ್- 70 ರಿಂದ 80
  • ಹೂಕೋಸು- 80 ರಿಂದ 90
  • ಕ್ಯಾಪ್ಸಿಕಂ- 80 ರಿಂದ 90

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:50 am, Fri, 31 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್