Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆ ಹೆಚ್ಚಳ; ಸರಸ್ವತಿ ನಗರಕ್ಕೆ ಹೊಸ ಪೊಲೀಸ್ ಠಾಣೆ ಮಂಜೂರು

ಜಯನಗರದಲ್ಲಿ A ಪಟ್ಟಿ ರೌಡಿಶೀಟರ್ 42 ಜನ, ಬಿ ಪಟ್ಟಿ ರೌಡಿಶೀಟರ್ 51, ಒಟ್ಟು 93 ರೌಡಿಶೀಟರ್​ಗಳಿದ್ದಾರೆ.

ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆ ಹೆಚ್ಚಳ; ಸರಸ್ವತಿ ನಗರಕ್ಕೆ ಹೊಸ ಪೊಲೀಸ್ ಠಾಣೆ ಮಂಜೂರು
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
Follow us
TV9 Web
| Updated By: guruganesh bhat

Updated on: Sep 01, 2021 | 5:59 PM

ಬೆಂಗಳೂರು: ನಗರದ ಪಶ್ಚಿಮ ವಿಭಾಗ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕಾರಣ ಗೋವಿಂದರಾಜ ನಗರದ ಸರಸ್ವತಿ ನಗರದಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪಿಸಲು ಸರ್ಕಾರ ಅನುಮತಿ ನೀಡಿ ಆದೇಶ ಪ್ರಕಟಿಸಿದೆ. ಅಪರಾಧ ಪ್ರಕರಣಗಳಾದ ಮೊಬೈಲ್ ಅಪಹರಣ, ಸರಗಳ್ಳತನ, ವಾಹನ ಕಳವು ಪ್ರಕರಣಗಳು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿವೆ. ವಿಜಯನಗರದಲ್ಲಿ A ಪಟ್ಟಿ ರೌಡಿಶೀಟರ್ 42 ಜನ, ಬಿ ಪಟ್ಟಿ ರೌಡಿಶೀಟರ್ 51, ಒಟ್ಟು 93 ರೌಡಿಶೀಟರ್​ಗಳಿದ್ದಾರೆ. ಹಾಗಾಗಿ ವಿಜಯನಗರ ಠಾಣೆಯನ್ನ ವಿಭಜಿಸಿ ನೂತನ ಪೊಲೀಸ್ ಠಾಣೆ ತೆರೆಯಲು ಮನವಿ ಮಾಡಲಾಗಿತ್ತು. ಮನವಿಯನ್ನು ಪುರಸ್ಕರಿಸಿದ ಸರ್ಕಾರ ಅಪರಾಧ ಪ್ರಕರಣಗಳನ್ನು ತಡೆಯುವ ಕಾರಣದಿಂದ ಹೊಸ ಪೊಲೀಸ್ ಠಾಣೆ ತೆರೆಯಲು ಆದೇಶ ನೀಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆಯ ಗೋಡೆಯಲ್ಲಿ ಬಿರುಕು ಮೆಟ್ರೋ ಕಾಮಗಾರಿಯ ಕಾರಣದಿಂದ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆಯ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕಾಮಗಾರಿ ನಡೆಸುತ್ತಿರುವ ಬಿಎಂಆರ್​ಸಿಎಲ್ ಈಗಾಗಲೇ ಪೊಲೀಸ್ ಠಾಣೆಯನ್ನು ತೆರವುಗೊಳಿಸುವಂತೆ ಸೂಚಿಸಿದೆ. ಆದರೆ ಪೊಲೀಸ್ ಠಾಣೆಯ ಬಳಿಯ ಕಾಮಗಾರಿಯನ್ನು ಮುಂಚಿತವಾಗಿ ಮುಗಿಸಿಕೊಡಲು ಪೊಲೀಸ್ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೆಟ್ರೋ ಪಿಲ್ಲರ್ ಮಧ್ಯೆಯೇ ಹೆಬ್ಬಗೋಡಿ ಉಪ ವಿಭಾಗ ಪೊಲೀಸ್ ಠಾಣೆಯಿದ್ದು, ಶಬ್ದ ಮಾಲಿನ್ಯದ ಮಧ್ಯೆ ಕೆಲಸ ಮಾಡಲು ಪೊಲೀಸರಿಗೆ ಕಿರಿಕಿರಿಯಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: 

ವರ್ಷಪೂರ್ತಿ ಆಗುವ ಮಾಲಿನ್ಯ ಗಣೇಶ ಹಬ್ಬದಂದೇ ನೆನಪಾಗುವುದೇಕೆ? ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶ್ನೆ

ಅಪರಾಧ ಸುದ್ದಿ: ಹುಡುಗಾಟಿಕೆಗೆ ವಿದ್ಯುತ್ ಕಂಬ ಹತ್ತಿದ ಯುವಕ ಕರೆಂಟ್ ಹೊಡೆದು ಅಲ್ಲೆ ನೇತಾಡಿದ

(Bengaluru Vijayanagar area crime rate increased Saraswathi Nagar gets new police station)

ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು
ಘಟನೆ ವಿವರಿಸಿದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು