AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!

ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ಸಂಚಾರ ಸ್ಥಗಿತಗೊಳಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಐಪಿ ಸಂಸ್ಕೃತಿಯಿಂದ ಸಾಮಾನ್ಯ ಜನರ ಜೀವದ ಜೊತೆ ಚೆಲ್ಲಾಟವಾಡುವ ಘಟನೆ ಇದು. ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿ ನರಳಿದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ವಿಐಪಿ ಸಂಚಾರ ನಿರ್ವಹಣೆ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರಕ್ಕೆ 30 ನಿಮಿಷ ರಸ್ತೆ ಬ್ಲಾಕ್; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ; ಸಾರ್ವಜನಿಕರ ಆಕ್ರೋಶ!
ವಿಐಪಿ ಸಂಸ್ಕೃತಿ , ರಾಜ್ಯಪಾಲರ ಸಂಚಾರ
ಅಕ್ಷಯ್​ ಪಲ್ಲಮಜಲು​​
|

Updated on:May 31, 2026 | 9:56 PM

Share

ಬೆಂಗಳೂರು, ಮೇ.31: ರಾಜಧಾನಿ ಬೆಂಗಳೂರಿನಲ್ಲಿ ವಿಐಪಿ ಸಂಸ್ಕೃತಿ ಮತ್ತು ಅಧಿಕಾರಿಗಳ ಭದ್ರತೆಯ ಹೆಸರಿನಲ್ಲಿ ಸಾಮಾನ್ಯ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವ ಘಟನೆಗಳು ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಅಂಡರ್‌ಪಾಸ್ ನಿರ್ಮಾಣ ಕಾರ್ಯದಿಂದಾಗಿ ಉಸಿರುಗಟ್ಟುತ್ತಿರುವ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಇಂದು ರಾಜ್ಯಪಾಲರ (Governor) ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ನರಕಸದೃಶ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಚಾರ ದಟ್ಟಣೆಯ ನಡುವೆ ತನ್ನ ಗರ್ಭಿಣಿ ಪತ್ನಿಯನ್ನು ತುರ್ತಾಗಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿಕೊಂಡಿದ್ದು, ಸಾರ್ವಜನಿಕರ ಕಣ್ಣು ತೇವವಾಗುವಂತೆ ಮಾಡಿದೆ. ಅಂಡರ್‌ಪಾಸ್ ಕಾಮಗಾರಿಯಿಂದಾಗಿ ಮೊದಲೇ ಕಿರಿದಾಗಿದ್ದ ರಸ್ತೆಯಲ್ಲಿ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ಏಕಾಏಕಿ ರಸ್ತೆ ನಿರ್ಬಂಧಿಸಿದ್ದರಿಂದ, ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ತಲುಪಿಸಲಾಗದೆ ಆ ವ್ಯಕ್ತಿ ನಡುರಸ್ತೆಯಲ್ಲೇ ತೀವ್ರ ಕಂಗಾಲಾಗಿದ್ದರು.

ಇದನ್ನೂ ಓದಿ: ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಇಲ್ಲಿದೆ ನೋಡಿ ಸ್ಟೋರಿ:

“ಸಾಮಾನ್ಯ ಸಾರ್ವಜನಿಕರ ಹಾಗೂ ರೋಗಿಗಳ ಅನುಕೂಲ ಮತ್ತು ಜೀವವು ವಿಐಪಿಗಳ ಸೌಕರ್ಯದಷ್ಟೇ ಮುಖ್ಯವಾಗುವುದು ಯಾವಾಗ?” ಎಂದು ಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ಕಟುವಾಗಿ ಪ್ರಶ್ನಿಸಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಹಂತದಲ್ಲಿರುವ ಇಂತಹ ಸೂಕ್ಷ್ಮ ರಸ್ತೆಗಳಲ್ಲಿ ಗಣ್ಯರ ಸಂಚಾರಕ್ಕೆ ಗಂಟೆಗಟ್ಟಲೆ ಸಾರ್ವಜನಿಕರನ್ನು ತಡೆಯುವುದು ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಬೆಂಗಳೂರು ಟ್ರಾಫಿಕ್ ಪೊಲೀಸ್ (BTP) ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 pm, Sun, 31 May 26

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ