AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ!

ಬೆಂಗಳೂರಿನಲ್ಲಿ ರಾಜ್ಯಪಾಲರ ಸಂಚಾರದ ವೇಳೆ ವಿಐಪಿ ಟ್ರಾಫಿಕ್ ತಡೆದಿದ್ದಕ್ಕೆ ಆಕ್ರೋಶಗೊಂಡು, ಕಾರಿನಲ್ಲಿ ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಪ್ರತಿಭಟಿಸಿದ್ದ ಮೋಹಿತ್ ಎಂಬ ಯುವಕನ ಅಸಲಿ ಸತ್ಯ ಬಯಲಾಗಿದೆ. ಹೆಚ್‌ಎಎಲ್ ಪೊಲೀಸರ ವಿಚಾರಣೆ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ, ಒತ್ತಡದಲ್ಲಿ ಸುಳ್ಳು ಹೇಳಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಸದ್ಯ ಪೊಲೀಸರು ಆತನಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ!
ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ!
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jun 02, 2026 | 11:56 AM

Share

ಬೆಂಗಳೂರು, ಜೂನ್ 02: ನಗರದಲ್ಲಿ ರಾಜ್ಯಪಾಲರ (Governor) ಸಂಚಾರದ ವೇಳೆ ವಿಐಪಿ ಟ್ರಾಫಿಕ್ ತಡೆದಿದ್ದಕ್ಕೆ ಆಕ್ರೋಶಗೊಂಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದ ಯುವಕನ ಪ್ರಕರಣ ಇದೀಗ ಭಾರಿ ಟ್ವಿಸ್ಟ್ ಪಡೆದುಕೊಂಡಿದೆ. ಪೊಲೀಸರ ಪ್ರಾಥಮಿಕ ತನಿಖೆ ಮತ್ತು ವಿಚಾರಣೆಯ ವೇಳೆ ಪ್ರತಿಭಟನೆ ನಡೆಸಿದ ವ್ಯಕ್ತಿ ಸಾರ್ವಜನಿಕವಾಗಿ ಹೈಡ್ರಾಮಾ ಮಾಡಿರುವುದು ಬೆಳಕಿಗೆ ಬಂದಿದೆ. ಆತನ ಕಾರಿನಲ್ಲಿ ಆ ಸಮಯದಲ್ಲಿ ಯಾವ ಗರ್ಭಿಣಿಯೂ ಇರಲಿಲ್ಲ ಎಂಬ ಸತ್ಯವನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.

ಮುಖ್ಯಾಂಶಗಳು

  • ರಾಜ್ಯಪಾಲರ ಸಂಚಾರ ವೇಳೆ ನಡುರಸ್ತೆಯಲ್ಲಿ ಪ್ರತಿಭಟಿಸಿದ್ದ ಯುವಕನ ಹೈಡ್ರಾಮಾ ಬಯಲಾಗಿದೆ.
  • ಕಾರಿನಲ್ಲಿ ಗರ್ಭಿಣಿ ಪತ್ನಿ ಇರಲಿಲ್ಲ ಎಂದು ಒಪ್ಪಿಕೊಂಡ ಯುವಕ ಮೋಹಿತ್.
  • ಹೆಚ್‌ಎಎಲ್ ಪೊಲೀಸರು ಯುವಕನ ಹೇಳಿಕೆ ದಾಖಲಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಹೆಚ್‌ಎಎಲ್ (HAL) ಠಾಣೆಯ ಪೊಲೀಸರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದ ಮೋಹಿತ್ ಎಂಬ ಯುವಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾನು ಸುಳ್ಳು ಹೇಳಿದ್ದಾಗಿ ಮೋಹಿತ್ ಒಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಮೋಹಿತ್ ಹೇಳಿದ್ದೇನು?

ಪ್ರತಿಭಟನೆಯ ಸಮಯದಲ್ಲಿ ಮೋಹಿತ್ ಜೊತೆ ಕಾರಿನಲ್ಲಿ ಆತನ ಪತ್ನಿ ಇರಲಿಲ್ಲ. ಆತ ಒಂಟಿಯಾಗಿಯೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂದು ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ. ನಾನು ಹೆಚ್‌ಎಎಲ್ ಇಸ್ರೋ (ISRO) ಜಂಕ್ಷನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ಟ್ರಾಫಿಕ್‌ನಲ್ಲಿ ಕಾಯುತ್ತಿದ್ದೆ. ವಿಐಪಿ ಮೂವ್‌ಮೆಂಟ್‌ನಿಂದಾಗಿ ವಾಹನಗಳನ್ನು ತಡೆ ಹಿಡಿಯಲಾಗಿತ್ತು. ನನಗೆ ಮನೆಗೆ ಹೋಗಲು ತಡವಾಗುತ್ತಿತ್ತು ಮತ್ತು ಮನೆಯಲ್ಲಿದ್ದ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದ ತುರ್ತು ಪರಿಸ್ಥಿತಿ ಇತ್ತು. ಆ ಒತ್ತಡದಲ್ಲಿ ಸಿಟ್ಟು ಬಂದು, ಪೊಲೀಸರು ದಾರಿ ಬಿಡಲಿ ಎಂಬ ಕಾರಣಕ್ಕೆ ಕಾರಿನಲ್ಲೇ ಪತ್ನಿ ಇದ್ದಾಳೆ ಎಂದು ಸುಳ್ಳು ಹೇಳಿ ವಾಗ್ವಾದ ನಡೆಸಿದೆ ಎಂದು ಮೋಹಿತ್ ತಿಳಿಸಿದ್ದಾನೆ. ಪೊಲೀಸರ ಮೇಲೆ ತನಗೆ ಯಾವುದೇ ವೈಯಕ್ತಿಕ ಟಾರ್ಗೆಟ್ ಇರಲಿಲ್ಲ ಎಂದು ಆತ ಸ್ಪಷ್ಟಪಡಿಸಿದ್ದಾನೆ.

ಇದನ್ನೂ ಓದಿ ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಸದ್ಯಕ್ಕೆ ಪ್ರಕರಣ ದಾಖಲಾಗಿಲ್ಲ

ಯುವಕನ ಹೈಡ್ರಾಮಾದಿಂದಾಗಿ ಇಡೀ ಪೊಲೀಸ್ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುವಂತಾಗಿತ್ತು. ಆದರೆ ಸದ್ಯಕ್ಕೆ ಪೊಲೀಸರು ಮೋಹಿತ್ ವಿರುದ್ಧ ಯಾವುದೇ ಅಧಿಕೃತ ಪ್ರಕರಣ ದಾಖಲಿಸಿಲ್ಲ. ಆತನ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡು, ಇನ್ನು ಮುಂದೆ ಇಂತಹ ಕೃತ್ಯಗಳನ್ನು ಎಸಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಹೆಚ್‌ಎಎಲ್ ಪೊಲೀಸರು ಆತನನ್ನು ಕಳುಹಿಸಿಕೊಟ್ಟಿದ್ದಾರೆ. ವಿಐಪಿ ಟ್ರಾಫಿಕ್ ಕಿರಿಕಿರಿಯ ನಡುವೆಯೂ ಸಾರ್ವಜನಿಕರು ಸುಳ್ಳು ವದಂತಿಗಳನ್ನು ನಂಬಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ