AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರೇ ಎಚ್ಚರ! ಮಕ್ಕಳ ಜೀವದ ಜೊತೆ ಆಟವಾಡಬೇಡಿ: ಬೆಂಗಳೂರಿನಲ್ಲಿ ಆರು ಮಕ್ಕಳ ಕಿಕ್ಕಿರಿದ ಸ್ಕೂಟರ್ ಜರ್ನಿ

ಬೆಂಗಳೂರಿನಲ್ಲಿ 6 ಮಕ್ಕಳು ಹೆಲ್ಮೆಟ್‌ ಇಲ್ಲದೆ ಒಂದೇ ಸ್ಕೂಟರ್‌ನಲ್ಲಿ ಸಂಚರಿಸಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದು ಮೋಟಾರು ವಾಹನ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ, ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುತ್ತದೆ. ಬೆಂಗಳೂರು ಸಂಚಾರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಂತಹ ಘಟನೆಗಳು ಅಪಘಾತಗಳನ್ನು ಹೆಚ್ಚಿಸುತ್ತವೆ ಎಂದು ನೆಟ್ಟಿಗರು ಟೀಕಿಸಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ ಅತ್ಯಗತ್ಯ.

ಪೋಷಕರೇ ಎಚ್ಚರ! ಮಕ್ಕಳ ಜೀವದ ಜೊತೆ ಆಟವಾಡಬೇಡಿ: ಬೆಂಗಳೂರಿನಲ್ಲಿ ಆರು ಮಕ್ಕಳ ಕಿಕ್ಕಿರಿದ ಸ್ಕೂಟರ್ ಜರ್ನಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 30, 2026 | 10:57 AM

Share

ಬೆಂಗಳೂರು, ಏ.30: ಪೋಷಕರ ಇಂತಹ ತಪ್ಪಿನಿಂದಲ್ಲೇ ಅಪಘಾತಗಳು ಹೆಚ್ಚಾಗಿರುವುದು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತ ಇರುತ್ತದೆ. ಅದರೂ ಈ ಪೋಷಕರಿಗೆ ಬುದ್ಧಿ ಬರುವುದಿಲ್ಲ. ಸಣ್ಣ ವಯಸ್ಸಿನಲ್ಲೇ ಈ ಎಚ್ಚರಿಕೆ ವಹಿಸಿದರೆ ಯಾವುದೇ ಅಪಾಯಗಳು ಆಗುವುದಿಲ್ಲ. ಇದೀಗ ಎಕ್ಸ್​​ ಖಾತೆಯಲ್ಲಿ ಇಂತಹದೇ ಘಟನೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಅಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆದ ಈ ಘಟನೆ ಬಗ್ಗೆ ಏಪ್ರಿಲ್ 26ರಂದು 6 ಜನ ಚಿಕ್ಕ ಮಕ್ಕಳು ಒಂದೇ ಸ್ಕೂಟರ್‌ನಲ್ಲಿ ಕುಳಿತಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆ 10:45 ರ ಸುಮಾರಿಗೆ ಈ ಫೋಟೋವನ್ನು ಕ್ಲಿಕ್ ಮಾಡಲಾಗಿದೆ. ಈ ಮಕ್ಕಳು ಪಾದರಾಯನಪುರ ಮುಖ್ಯ ರಸ್ತೆ ಬಳಿ ಒಂದೇ ಸ್ಕೂಟರ್​​ನಲ್ಲಿ ಹೋಗುವುದು ನೋಡಿದ್ದಾರೆ. ನಂತರ ಈ ಫೋಟೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಅಲ್ಲಿಂದ ನೆಟ್ಟಿಗರು ಈ ಫೋಟೋಗೆ ಕಾಮೆಂಟ್​ ಮಾಡಲು ಶುರು ಮಾಡಿದ್ದಾರೆ. ಇದೀಗ ಇದು ಭಾರೀ ಚರ್ಚೆಗೆ ಕಾರಣವಾಗಿದೆ.

ಇಲ್ಲಿದೆ ನೋಡಿ ಪೋಸ್ಟ್​​;

Parental Negligence (1)

ಈ ಫೋಟೋವನ್ನು ಆಧಾರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಭಾರತದಲ್ಲಿ, 50 ಸಿಸಿಗಿಂತ ಕಡಿಮೆ ಸಾಮರ್ಥ್ಯದ ಮೋಟಾರ್ ಸೈಕಲ್ ಓಡಿಸಲು ಕಾನೂನುಬದ್ಧ ವಯಸ್ಸು 16 ವರ್ಷಗಳು ಮತ್ತು ಕಾರುಗಳು ಮತ್ತು ಗೇರ್ ಹೊಂದಿರುವ ಮೋಟಾರ್ ಸೈಕಲ್‌ಗಳಿಗೆ 18 ವರ್ಷಗಳು ಎಂಬ ಕಾನೂನು ಇದೆ. ಭಾರತದಲ್ಲಿ ಎರಡಕ್ಕಿಂತ ಹೆಚ್ಚು ಜನರು ದ್ವಿಚಕ್ರ ವಾಹನ ಓಡಿಸುವುದು ಕಾನೂನುಬಾಹಿರವಾಗಿದೆ. ಆದರೆ ಇಲ್ಲಿ 1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 128 ರ ಉಲ್ಲಂಘನೆಯಾಗಿದೆ. ಇದರ ಜತೆಗೆ ಒಬ್ಬರೂ ಕೂಡ ಹೆಲ್ಮೆಟ್​​​ ಹಾಕಿಲ್ಲ, ಇದು ಕೂಡ ಭಾರತ ಕಾನೂನು ವಿರೋಧಿ ಸಂಚಾರ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ?

ಇನ್ನು ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಬೆಂಗಳೂರು ಸಂಚಾರ ಪೊಲೀಸರ ಈ ಪ್ರಕರಣವನ್ನು ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆ ಟ್ಯಾಗ್​ ಮಾಡಿದ್ದಾರೆ. ಈ ಪೋಸ್ಟ್ ಅನ್ನು ‘Shreyas35240282’ ಎಂಬ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನು 2 ದಿನಗಳ ಹಿಂದೆ ಹಂಚಿಕೊಳ್ಳಲಾಗಿತ್ತು. ಈವರೆಗೆ ಈ ಪೋಸ್ಟ್​​ 291K ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಮೆಂಟ್ ಕೂಡ ಮಾಡಿದ್ದಾರೆ. ಇಲ್ಲಿ ಧೈರ್ಯಕ್ಕಿಂತ ಮಕ್ಕಳ ಜೀವದ ಜತೆಗೆ ಆಟವಾಡಿದ್ದಾರೆ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಮಯಗಳ ಉಲ್ಲಂಘನೆ ಹೆಚ್ಚಾಗಿದೆ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್