AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ಕೂಟಿಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

ಬೆಂಗಳೂರಿನ ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ಕುದುರೆಯನ್ನು ತನ್ನ ಸ್ಕೂಟರ್​ಗೆ ಕಟ್ಟಿ ಎಳೆದುಕೊಂಡು ಹೋಗುತ್ತಿರುವ ಅಮಾನವೀಯ ವೀಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುದುರೆ ಭಯಭೀತವಾಗಿರುವಂತೆ ಕಂಡುಬಂದಿದ್ದು, ಸವಾರನ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪ್ರಾಣಿ ಹಿಂಸೆಯ ಈ ಘಟನೆ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಬೆಂಗಳೂರು: ಸ್ಕೂಟಿಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್
ರಸ್ತೆಯಲ್ಲಿ ಬೈಕ್​ಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ
ಭಾವನಾ ಹೆಗಡೆ
|

Updated on:Nov 03, 2025 | 2:43 PM

Share

ಬೆಂಗಳೂರು, ನವೆಂಬರ್ 3: ಬೆಂಗಳೂರಿನ (Bengaluru) ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ತನ್ನ ಗಾಡಿಗೆ ಕುದುರೆಯೊಂದನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ. ಈ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಸಹನೆ ವ್ಯಕ್ತಪಡಿಸಿದ್ದಾರೆ.

ಸ್ಕೂಟರ್​ಗೆ ಸವಾರನ ಅನಾಗರಿಕತೆ

ಸವಾರನೊಬ್ಬ ತನ್ನ ಸ್ಕೂಟರ್​ಗೆ ಅಸಹಾಯಕ ಕುದುರೆಯನ್ನು ಕಟ್ಟಿ, ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ತನ್ನ ಸುತ್ತ ಮುತ್ತಲೂ ಓಡಾಡುತ್ತಿರುವ ವಾಹನಗಳನ್ನು ನೋಡಿ ಕುದುರೆ ಭಯಭೀತವಾದಂತೆ ಈ ವೀಡಿಯೋದಲ್ಲಿ ಕಂಡುಬಂದಿದೆ. ಸ್ಕೂಟರ್​ಗೆ ಓಡಿಸುತ್ತಿದ್ದ ವ್ಯಕ್ತಿ ಹೆಲ್ಮೆಟ್ ಧರಿಸದೆ ಕೈಯಲ್ಲಿ ಫೋನ್ ಹಿಡಿದು ಪುಂಡಾಟ ಮೆರೆದಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದೆ. ಈತನ ಬೇಜವಾಬ್ದಾರಿತನ ಮತ್ತು ಅನಾಗರಿಕತೆಗೆ ಅಸಹನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.

ವೈರಲ್ ವೀಡಿಯೋ ಹೊಂದಿರುವ ಎಕ್ಸ್ ಪೋಸ್ಟ್ ಇಲ್ಲಿದೆ

ಈ ಕುರಿತು ಕರ್ನಾಟಕ ಪೋರ್ಟ್​ಫೋಲಿಯೋ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಪ್ರಾಣಿಗಳು ಮನರಂಜನಾ ಸಾಧನಗಳಲ್ಲ; ಅವು ನಮ್ಮಂತೆಯೇ ನೋವು, ಭಯ ಮತ್ತು ಆಯಾಸವನ್ನು ಅನುಭವಿಸುತ್ತವೆ. ಅಧಿಕಾರಿಗಳು ಈ  ಕ್ರೌರ್ಯದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವನಂತಹ ಜನರು ಕಠಿಣ ಶಿಕ್ಷೆಯನ್ನು ಎದುರಿಸುವಂತೆ ನೋಡಿಕೊಳ್ಳಬೇಕು ಎಂದು ಬರೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:36 pm, Mon, 3 November 25

Follow Us
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?