AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ಕೂಟಿಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

ಬೆಂಗಳೂರಿನ ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ಕುದುರೆಯನ್ನು ತನ್ನ ಸ್ಕೂಟರ್​ಗೆ ಕಟ್ಟಿ ಎಳೆದುಕೊಂಡು ಹೋಗುತ್ತಿರುವ ಅಮಾನವೀಯ ವೀಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುದುರೆ ಭಯಭೀತವಾಗಿರುವಂತೆ ಕಂಡುಬಂದಿದ್ದು, ಸವಾರನ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪ್ರಾಣಿ ಹಿಂಸೆಯ ಈ ಘಟನೆ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಬೆಂಗಳೂರು: ಸ್ಕೂಟಿಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್
ರಸ್ತೆಯಲ್ಲಿ ಬೈಕ್​ಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ
ಭಾವನಾ ಹೆಗಡೆ
|

Updated on:Nov 03, 2025 | 2:43 PM

Share

ಬೆಂಗಳೂರು, ನವೆಂಬರ್ 3: ಬೆಂಗಳೂರಿನ (Bengaluru) ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ತನ್ನ ಗಾಡಿಗೆ ಕುದುರೆಯೊಂದನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ. ಈ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಸಹನೆ ವ್ಯಕ್ತಪಡಿಸಿದ್ದಾರೆ.

ಸ್ಕೂಟರ್​ಗೆ ಸವಾರನ ಅನಾಗರಿಕತೆ

ಸವಾರನೊಬ್ಬ ತನ್ನ ಸ್ಕೂಟರ್​ಗೆ ಅಸಹಾಯಕ ಕುದುರೆಯನ್ನು ಕಟ್ಟಿ, ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ತನ್ನ ಸುತ್ತ ಮುತ್ತಲೂ ಓಡಾಡುತ್ತಿರುವ ವಾಹನಗಳನ್ನು ನೋಡಿ ಕುದುರೆ ಭಯಭೀತವಾದಂತೆ ಈ ವೀಡಿಯೋದಲ್ಲಿ ಕಂಡುಬಂದಿದೆ. ಸ್ಕೂಟರ್​ಗೆ ಓಡಿಸುತ್ತಿದ್ದ ವ್ಯಕ್ತಿ ಹೆಲ್ಮೆಟ್ ಧರಿಸದೆ ಕೈಯಲ್ಲಿ ಫೋನ್ ಹಿಡಿದು ಪುಂಡಾಟ ಮೆರೆದಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದೆ. ಈತನ ಬೇಜವಾಬ್ದಾರಿತನ ಮತ್ತು ಅನಾಗರಿಕತೆಗೆ ಅಸಹನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.

ವೈರಲ್ ವೀಡಿಯೋ ಹೊಂದಿರುವ ಎಕ್ಸ್ ಪೋಸ್ಟ್ ಇಲ್ಲಿದೆ

ಈ ಕುರಿತು ಕರ್ನಾಟಕ ಪೋರ್ಟ್​ಫೋಲಿಯೋ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಪ್ರಾಣಿಗಳು ಮನರಂಜನಾ ಸಾಧನಗಳಲ್ಲ; ಅವು ನಮ್ಮಂತೆಯೇ ನೋವು, ಭಯ ಮತ್ತು ಆಯಾಸವನ್ನು ಅನುಭವಿಸುತ್ತವೆ. ಅಧಿಕಾರಿಗಳು ಈ  ಕ್ರೌರ್ಯದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವನಂತಹ ಜನರು ಕಠಿಣ ಶಿಕ್ಷೆಯನ್ನು ಎದುರಿಸುವಂತೆ ನೋಡಿಕೊಳ್ಳಬೇಕು ಎಂದು ಬರೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:36 pm, Mon, 3 November 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ