AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ಕೂಟಿಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

ಬೆಂಗಳೂರಿನ ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ಕುದುರೆಯನ್ನು ತನ್ನ ಸ್ಕೂಟರ್​ಗೆ ಕಟ್ಟಿ ಎಳೆದುಕೊಂಡು ಹೋಗುತ್ತಿರುವ ಅಮಾನವೀಯ ವೀಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುದುರೆ ಭಯಭೀತವಾಗಿರುವಂತೆ ಕಂಡುಬಂದಿದ್ದು, ಸವಾರನ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪ್ರಾಣಿ ಹಿಂಸೆಯ ಈ ಘಟನೆ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.

ಬೆಂಗಳೂರು: ಸ್ಕೂಟಿಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್
ರಸ್ತೆಯಲ್ಲಿ ಬೈಕ್​ಗೆ ಕುದುರೆ ಕಟ್ಟಿ ಎಳೆದ ವ್ಯಕ್ತಿ
ಭಾವನಾ ಹೆಗಡೆ
|

Updated on:Nov 03, 2025 | 2:43 PM

Share

ಬೆಂಗಳೂರು, ನವೆಂಬರ್ 3: ಬೆಂಗಳೂರಿನ (Bengaluru) ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ತನ್ನ ಗಾಡಿಗೆ ಕುದುರೆಯೊಂದನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ. ಈ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಸಹನೆ ವ್ಯಕ್ತಪಡಿಸಿದ್ದಾರೆ.

ಸ್ಕೂಟರ್​ಗೆ ಸವಾರನ ಅನಾಗರಿಕತೆ

ಸವಾರನೊಬ್ಬ ತನ್ನ ಸ್ಕೂಟರ್​ಗೆ ಅಸಹಾಯಕ ಕುದುರೆಯನ್ನು ಕಟ್ಟಿ, ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ತನ್ನ ಸುತ್ತ ಮುತ್ತಲೂ ಓಡಾಡುತ್ತಿರುವ ವಾಹನಗಳನ್ನು ನೋಡಿ ಕುದುರೆ ಭಯಭೀತವಾದಂತೆ ಈ ವೀಡಿಯೋದಲ್ಲಿ ಕಂಡುಬಂದಿದೆ. ಸ್ಕೂಟರ್​ಗೆ ಓಡಿಸುತ್ತಿದ್ದ ವ್ಯಕ್ತಿ ಹೆಲ್ಮೆಟ್ ಧರಿಸದೆ ಕೈಯಲ್ಲಿ ಫೋನ್ ಹಿಡಿದು ಪುಂಡಾಟ ಮೆರೆದಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದೆ. ಈತನ ಬೇಜವಾಬ್ದಾರಿತನ ಮತ್ತು ಅನಾಗರಿಕತೆಗೆ ಅಸಹನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.

ವೈರಲ್ ವೀಡಿಯೋ ಹೊಂದಿರುವ ಎಕ್ಸ್ ಪೋಸ್ಟ್ ಇಲ್ಲಿದೆ

ಈ ಕುರಿತು ಕರ್ನಾಟಕ ಪೋರ್ಟ್​ಫೋಲಿಯೋ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಪ್ರಾಣಿಗಳು ಮನರಂಜನಾ ಸಾಧನಗಳಲ್ಲ; ಅವು ನಮ್ಮಂತೆಯೇ ನೋವು, ಭಯ ಮತ್ತು ಆಯಾಸವನ್ನು ಅನುಭವಿಸುತ್ತವೆ. ಅಧಿಕಾರಿಗಳು ಈ  ಕ್ರೌರ್ಯದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವನಂತಹ ಜನರು ಕಠಿಣ ಶಿಕ್ಷೆಯನ್ನು ಎದುರಿಸುವಂತೆ ನೋಡಿಕೊಳ್ಳಬೇಕು ಎಂದು ಬರೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:36 pm, Mon, 3 November 25

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ