Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವೋಟರ್ ಲಿಸ್ಟ್ ಹಗರಣ: ಮತದಾರರ ಪಟ್ಟಿಯಲ್ಲಿ ಡಿಲೀಟ್​ ಆದ ಹೆಸರು ಸೇರ್ಪಡೆ, ತಿದ್ದುಪಡಿಗೆ ಬಿಬಿಎಂಪಿ ಅಭಿಯಾನ

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್​​ ಹಿನ್ನೆಲೆ ವೋಟರ್​ ಐಡಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ ನೀಡಿ ಡಿಸೆಂಬರ್​ 8ರವರೆಗೆ ಬಿಬಿಎಂಪಿ ವಿಶೇಷ ಅಭಿಯಾನ ಕೈಗೊಂಡಿದೆ.

ಬೆಂಗಳೂರು ವೋಟರ್ ಲಿಸ್ಟ್ ಹಗರಣ: ಮತದಾರರ ಪಟ್ಟಿಯಲ್ಲಿ ಡಿಲೀಟ್​ ಆದ ಹೆಸರು ಸೇರ್ಪಡೆ, ತಿದ್ದುಪಡಿಗೆ ಬಿಬಿಎಂಪಿ ಅಭಿಯಾನ
ಬಿಬಿಎಂಪಿ
Follow us
TV9 Web
| Updated By: ಆಯೇಷಾ ಬಾನು

Updated on:Nov 20, 2022 | 12:01 PM

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಲಿಸ್ಟ್ ಹಗರಣಕ್ಕೆ(Bengaluru Voter Data Theft Case) ಸಂಬಂಧಿಸಿ ಈಗಾಗಲೇ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಾಗಿದ್ದು, ಖಾಕಿ ಚಿಲುಮೆಯ ಜಾತಕ ಜಾಲಾಡುತ್ತಿದೆ. ಪ್ರಕರಣ ಸಂಬಂಧ ಡಿಜಿಟಲ್ ಸಮೀಕ್ಷಾ ಆ್ಯಪ್​​ ಅಭಿವೃದ್ಧಿ ಪಡಿಸಿದ್ದ ಸಂಜೀವ್ ಶೆಟ್ಟಿ ಎಂಬ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಹಲವು ಕ್ಷೇತ್ರಗಳಲ್ಲಿ ಮತದಾರರು ವೋಟರ್ ಲಿಸ್ಟ್​ನಲ್ಲಿ ತಮ್ಮ ಹೆಸರು ಡಿಲೀಟ್ ಆಗಿದೆ ಅಂತಾ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವೆಡೆ ವೋಟರ್ ಹೆಸರು ಡಿಲೀಟ್ ಆಗಿರೋ ಮಾಹಿತಿ ಸಿಕ್ತಿದೆ. ಹೀಗಾಗಿ ಬಿಬಿಎಂಪಿ(BBMP) ವಿಶೇಷ ಅಭಿಯಾನ ಕೈಕೊಂಡಿದೆ.

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್​​ ಹಿನ್ನೆಲೆ ವೋಟರ್​ ಐಡಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆಗೆ ಅವಕಾಶ ನೀಡಿ ಡಿಸೆಂಬರ್​ 8ರವರೆಗೆ ಬಿಬಿಎಂಪಿ ವಿಶೇಷ ಅಭಿಯಾನ ಕೈಗೊಂಡಿದೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು, ಹಾಗೂ ತಿದ್ದುಪಡಿ, ಸ್ಥಳಾಂತರಗೊಂಡಿದ್ದಲ್ಲಿ ನಮೂನೆ 6, 6ಎ,7, 8 ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 20ರಿಂದ ಡಿಸೆಂಬರ್​ 03ರವೆರೆಗೆ ಹಾಗೂ ಡಿಸೆಂಬರ್ 08 ರಂದು ವಿಶೇಷ ಅಭಿಯಾನ ಕೈಗೊಂಡಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ‌‌ ಸುತ್ತೊಲೆ ಹೊರಡಿಸಲಾಗಿದೆ.

ದೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರನ್ನೂ ಸೇರಿಸಿದ್ದೇವೆ

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್​ ನಾಯಕರು ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಈ ಸಂಬಂಧ ಚುನಾವಣಾಧಿಕಾರಿಗೆ ನಾವು ದೂರು ನೀಡಿದ್ದೇವೆ. ದೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರನ್ನೂ ಸೇರಿಸಿದ್ದೇವೆ. 2013ರಿಂದಲೂ ನಡೆದ ಅಕ್ರಮ ಬಗ್ಗೆ ತನಿಖೆಗೆ ಮನವಿ ಮಾಡಿದ್ದೇವೆ. ದೊಡ್ಡ ಹಗರಣ ಸಿಕ್ಕಿದೆ ಅಂತಾ ಕಾಂಗ್ರೆಸ್​ನವರು ಅಂದುಕೊಂಡಿದ್ದಾರೆ. ಈ ಪ್ರಕರಣ ಕಾಂಗ್ರೆಸ್​ನವರಿಗೇ ತಿರುಗುಬಾಣ ಆಗುತ್ತೆ. ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದೇ ಕಾಂಗ್ರೆಸ್. ಕಾಂಗ್ರೆಸ್ಸಿಗರು ಚಿಲುಮೆ ಸಂಸ್ಥೆಯನ್ನ ಏಜೆನ್ಸಿಯಾಗಿ ಬಳಸಿಕೊಂಡಿದ್ದಾರೆ. ಕಾಂಗ್ರೆಸ್ಸಿಗರು ನಮ್ಮ ಮೇಲೆ ರಾಜಕೀಯ ಪ್ರೇರಿತ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್​ನವರು ಕೂಡ ಚಿಲುಮೆ ಸಂಸ್ಥೆಯಿಂದ ಸರ್ವೆ ಮಾಡಿಸಿದ್ದಾರೆ. 27 ಲಕ್ಷ ಮತದಾರರ ಹೆಸರು ಡಿಲೀಟ್ ಆಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್​​ಗಿಂತ ಬಿಜೆಪಿ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರ ಹೆಸರು ಡಿಲೀಟ್ ಆಗಿದೆ. ಮತದಾರರ ಹೆಸರು ಡಿಲೀಟ್​ ಮಾಡಿರುವುದು ಚುನಾವಣಾ ಆಯೋಗ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಡಿಸಿಎಂ ಪರಮೇಶ್ವರ್​ ತಿರುಗೇಟು

ಚಿಲುಮೆ ಸಂಸ್ಥೆಗೆ ಕಾಂಗ್ರೆಸ್​ ಅನುಮತಿ ಕೊಟ್ಟಿದ್ದು ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಡಿಸಿಎಂ ಪರಮೇಶ್ವರ್​ ತಿರುಗೇಟು ಕೊಟ್ಟಿದ್ದಾರೆ. ಏನೇ ಆರೋಪ ಮಾಡಿದ್ರೂ ಕಾಂಗ್ರೆಸ್ ಮಾಡಿಲ್ವಾ ಎಂದು ಹೇಳ್ತಾರೆ. ಬಿಜೆಪಿಯವರಿಗೆ ಇದೊಂದು ಕಾಯಿಲೆ. ಯಾವಾಗ ಅನುಮತಿ ಕೊಟ್ಟಿದ್ರು, ಯಾವ ನಿಯಮ ಹಾಕಲಾಗಿತ್ತು. ತನಿಖೆ ನಡೆಸಿದರೆ ಎಲ್ಲಾ ಸತ್ಯಾಂಶ ಹೊರಬರಲಿದೆ. ರಾಜ್ಯ ಚುನಾವಣಾ ಆಯೋಗಕ್ಕೂ ನಾವು ದೂರು ನೀಡಿದ್ದೇವ ಎಂದಿದ್ದಾರೆ.

ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅನುಮತಿ ನೀಡಿದ್ದ ಬಿಬಿಎಂಪಿ

ಇನ್ನು ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯಗಳಿಗೆ ನೀಡಲಾದ ಆಧಾರ್ ಲಿಂಕ್ ರೀತಿ ನೀತಿಗಳ ಬಗೆಗಿನ ಗೈಡ್ ಲೈನ್ಸ್​ ಅನ್ನು ಬಿಬಿಎಂಪಿ ಚಿಲುಮೆ ಸಂಸ್ಥೆಗೆ ನೀಡಿದೆ. ಆಧಾರ್ ಲಿಂಕ್ ಮಾಡುವ ವಿಧಾನದ ಮಾಹಿತಿಯನ್ನು ನೀಡಿದೆ. 20-08-2022 ರಲ್ಲಿ ಚಿಲುಮೆ ಸಂಸ್ಥೆಗೆ ಬಿಬಿಎಂಪಿ ಪತ್ರ ಬರೆದಿದೆ. ಅದರಲ್ಲಿ ಬೆಂಗಳೂರಿನ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅನುಮತಿ ನೀಡಿ ಆದೇಶ ನೀಡಿದೆ.

ಸಂಸ್ಥೆಗೆ ಚುನಾವಣಾಧಿಕಾರಿಗಳು ಜೊತೆ ಸೇರಿ ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಹಾಗೂ ಆಧಾರ್ ಲಿಂಕ್ ಜೋಡಣೆ ಕಾರ್ಯಕ್ಕೆ ಚಿಲುಮೆ ಸಂಸ್ಥೆಗೆ ಷರತ್ತು ಬದ್ದ ಅನುಮತಿ ನೀಡಿ ಪಾಲಿಕೆ ಬಿಬಿಎಂಪಿ ಚುನಾವಣಾಧಿಕಾರಿ ಆದೇಶ ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿ ವಿಧಿಸಿರುವ ಷರತ್ತುಗಳು

  • ಯಾವುದೇ ರಾಜಕೀಯ ಪಕ್ಷಗಳ ಜೊತೆ ಸಂಪರ್ಕ ಇರಬಾರದು
  • ಯಾವುದೇ ರಾಜಕೀಯ ಪಕ್ಷಗಳಿಂದ ದೇಣಿಗೆ ಸ್ವೀಕರಿಸುವಂತಿಲ್ಲ
  • ಸಂಸ್ಥೆ ವಿರುದ್ದ ದೂರು ಬಂದರೆ ಆದೇಶ ಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವ ಅಧಿಕಾರ ಎಲ್ಲಾ ಚುನಾವಣಾಧಿಕಾರಿಗಳಿಗೆ ಇರಲಿದೆ
  • ಎಲ್ಲಡೆ ಬಿಎಲ್ ಓ ಗಳು ಹಾಗೂ ನೊಂದಣಿ ಅಧಿಕಾರಿಗಳೊಂದಿಗೆ ಕಾರ್ಯ ನಿರ್ವಹಿಸತಕ್ಕದ್ದು
  • 2022ರ ಜನವರಿ 1 ರಿಂದ ನವೆಂಬರ್ 11 ರ ವರೆಗಿನ ಮತದಾರರ ಪಟ್ಟಿ ಪರಿಷ್ಕರಣೆ, ಬಿಬಿಎಂಪಿ ವ್ಯಾಪ್ತಿಯ ವಿಧಾಮ ಸಭಾ ಕ್ಷೇತ್ರಗಳಲ್ಲಿ ನಡೆದ ಪರಿಷ್ಕರಣೆ ಮಾಹಿತಿ ಪಡೆಯತಕ್ಕದ್ದು

Published On - 11:57 am, Sun, 20 November 22

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ