AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್ ಐಡಿ ಹಗರಣ: ವಕೀಲರ ಭೇಟಿಗೆ ಬಂದು ಸಿಕ್ಕಿಬಿದ್ದ ಚಿಲುಮೆ ಮುಖ್ಯಸ್ಥ ರವಿಕುಮಾರ್, ತನಿಖೆ ಚುರುಕು

ಡಿಜಿಟಲ್ ಌಪ್‌ ಡೆವಲಪ್‌ ಮಾಡಿದವರ ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಇಂದಿನಿಂದ ಬಿಬಿಎಂಪಿಯ ಆರ್‌ಒಗಳ ವಿಚಾರಣೆ ಮಾಡಲಾಗುತ್ತೆ

ವೋಟರ್ ಐಡಿ ಹಗರಣ: ವಕೀಲರ ಭೇಟಿಗೆ ಬಂದು ಸಿಕ್ಕಿಬಿದ್ದ ಚಿಲುಮೆ ಮುಖ್ಯಸ್ಥ ರವಿಕುಮಾರ್, ತನಿಖೆ ಚುರುಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 21, 2022 | 7:30 AM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡ್ತಿರುವ ವೋಟರ್ ಐಡಿ ಪಕರಣಕ್ಕೆ ಸಂಬಂಧಿಸಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್, ಸಹೋದರ ಕೆಂಪೇಗೌಡ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್​ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ವಿಚಾರಣೆ ಸಂಬಂಧ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ.

ವಕೀಲರ ಭೇಟಿಗೆ ಬಂದಿದ್ದಾಗ ಲಾಲ್‌ಬಾಗ್‌ ಬಳಿ ಪ್ರಮುಖ ಆರೋಪಿ ರವಿಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ ಐವರನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್, ಸಹೋದರ, ಸಂಸ್ಥೆಯ ಮೇಲ್ವಿಚಾರಕ ಕೆಂಪೇಗೌಡ. ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಧರ್ಮೇಶ್, ರೇಣುಕಾ ಪ್ರಸಾದ್ ಹಾಗೂ ಇ-ಪ್ರಕ್ಯೂರ್ಮೆಂಟ್ ಮೇಲ್ವಿಚಾರಕ ಪ್ರಜ್ವಲ್‌ ಬಂಧಿತ ಆರೋಪಿಗಳು.

ಇದನ್ನೂ ಓದಿ: ವೋಟರ್ ಐಡಿ ‘ಚಿಲುಮೆ’: ಚಿಲುಮೆ ಸಂಸ್ಥೆ ಹೇಗೆ ಮತದಾರರ ಮಾಹಿತಿ ಕಲೆಹಾಕುತ್ತಿತ್ತು ಗೊತ್ತಾ? ಇಲ್ಲಿದೆ ಮಾಹಿತಿ

ಇನ್ನು ಕೇಸ್ ಸಂಬಂಧ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಮಾಹಿತಿ ನೀಡಿದ್ದಾರೆ. ಇಂದಿನಿಂದ ಬಿಬಿಎಂಪಿಯ ಆರ್‌ಒಗಳ ವಿಚಾರಣೆ ಮಾಡಲಾಗುತ್ತೆ ಎಂದರು. ಮೊದಲಿಗೆ ಕೆಂಪೇಗೌಡ ಌಪ್ ಮೂಲಕ ಮಾಹಿತಿಯನ್ನ ಸಂಗ್ರಹಿಸಿ ರವಿಕುಮಾರ್‌ಗೆ ನೀಡುತ್ತಿದ್ದ. ಆದ್ರೆ ಈ ಮಾಹಿತಿಯನ್ನು ಬೇರೆ ರೀತಿಯಲ್ಲಿ ಬಳಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ವಿಚಾರಣೆ ವೇಳೆ ಆರೋಪಿ ಕೆಂಪೇಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾನೆ. ಪ್ರಕರಣ ಸಂಬಂಧ ಈವರೆಗೆ 15 ಜನರನ್ನು ವಿಚಾರಣೆ ಮಾಡಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ತೀವ್ರಗೊಳಿಸಲಾಗಿದೆ.

ಡಿಜಿಟಲ್ ಌಪ್‌ ಡೆವಲಪ್‌ ಮಾಡಿದವರ ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಇಂದಿನಿಂದ ಬಿಬಿಎಂಪಿಯ ಆರ್‌ಒಗಳ ವಿಚಾರಣೆ ಮಾಡಲಾಗುತ್ತೆ. ವಿಚಾರಣೆಗೆ ಬರುವಂತೆ ಕೆಲ ಆರ್‌ಒಗಳಿಗೆ ನೋಟಿಸ್ ನೀಡಲಾಗಿದೆ. ಌಪ್‌ನಲ್ಲಿ ಸರ್ವರ್ ಡೌನ್ ಮಾಡಲಾಗಿದೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಆರೋಪಿ ಕೆಂಪೇಗೌಡ ದತ್ತಾಂಶಗಳ ಬಗ್ಗೆ ಕೆಲ ಮಾಹಿತಿ ನೀಡಿದ್ದಾನೆ. ಮತಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಸಂಗ್ರಹಿಸಿದ್ದು ಗೊತ್ತಾಗಿದೆ. ಜಾತಿ, ಉಪಜಾತಿ, ಲಿಂಗ ಸೇರಿ ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಡಿಸಿಪಿ ಶ್ರೀನಿವಾಸ ಗೌಡ ತಿಳಿಸಿದರು.

Published On - 7:30 am, Mon, 21 November 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ