AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್ ಐಡಿ ಅಕ್ರಮ: ಬಿಬಿಎಂಪಿ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲು, ನಾಲ್ವರು ಪೊಲೀಸ್ ವಶಕ್ಕೆ, ಆರ್​ಒ ಸಸ್ಪೆಂಡ್

ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ವೋಟರ್ ಐಡಿ ಅಕ್ರಮದ ಬಗ್ಗೆ ಬಿಬಿಎಂಪಿ ನೀಡಿದ ವರದಿಯಲ್ಲಿ ಸ್ಫೋಟಕ ಮಾಹಿತಿ ಬಯಲಾಗಿದೆ. ಇನ್ನು ಈ ಪ್ರಕರಣ ತನಿಖೆಯೂ ಚುರುಕುಗೊಂಡಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೋಟರ್ ಐಡಿ ಅಕ್ರಮ: ಬಿಬಿಎಂಪಿ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲು, ನಾಲ್ವರು ಪೊಲೀಸ್ ವಶಕ್ಕೆ, ಆರ್​ಒ ಸಸ್ಪೆಂಡ್
ಸಾಂರ್ಭಿಕ ಚಿತ್ರ
TV9 Web
| Edited By: |

Updated on:Nov 18, 2022 | 4:28 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ (Voter ID Scam) ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ದೂರು ಆಧರಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಬಿಎಂಪಿ ಸಲ್ಲಿಸಿದ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಇನ್ನು ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್​ ನೀಡಿದ್ದ ಆರ್​ಒ ಸಸ್ಪೆಂಡ್ ಆಗಿದ್ದಾರೆ. ಈ ಎಲ್ಲಾ ಸಮಗ್ರ ಮಾಹಿತಿ ಈ ಕೆಳಗಿನಂತಿದೆ.

ಬಿಬಿಎಂಪಿ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣೆಗೆ ಆಯೋಗ ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿಗೆ ಹೇಳಿತ್ತು. ಅದರಂತೆ ಇದೀಗ ಬಿಬಿಎಂಪಿ ಚುನಾವಣೆ ಆಯೋಗಕ್ಕೆ ವರದಿ ನೀಡಿದ್ದು, ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​

ಚಿಲುಮೆ ಸಂಸ್ಥೆಗೆ ವೋಟರ್​ ಐಡಿ, ಆಧಾರ್​ ಲಿಂಕ್​ ಮಾಡುವ ಹೊಣೆ ನೀಡಲಾಗಿತ್ತು. ಉಚಿತವಾಗಿ ಜೋಡಣೆ ಮಾಡುವುದಾಗಿ ‘ಚಿಲುಮೆ’ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಚಿಲುಮೆ ಸಂಸ್ಥೆಗೆ ವೋಟರ್ ಐಡಿ ಹಾಗೂ ಆಧಾರ್ ಲಿಂಕ್ ಮಾಡುವ ಜವಾಬ್ದಾರಿ ನೀಡಲಾಗಿತ್ತು ಎಂದು ಚುನಾವಣೆ ಆಯೋಗಕ್ಕೆ ಬಿಬಿಎಂಪಿ ನೀಡಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.

ಮಹದೇವಪುರ ವಲಯದ ಆರ್​ಒ ಸಸ್ಪೆಂಡ್​​

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಬಿಎಂಪಿ, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದೆ. ಅಲ್ಲದೇ ಇದೀಗ ಮಹದೇವಪುರ ವಲಯದ ಆರ್​ಒ ಚಂದ್ರಶೇಖರ್ ಅವರನ್ನು​ ಸಸ್ಪೆಂಡ್ ಮಾಡಲಾಗಿದೆ.​​ ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್​ ನೀಡಿದ್ದ ಆರೋಪ ಮೇರೆಗೆ ಆರ್​ಒ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.

ನಾಲ್ವರನ್ನು ವಶಕ್ಕೆ ಪಡೆದ ಪೊಲೀಸ್ರು

ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. BBMP ದೂರು ನೀಡಿದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಪೊಲೀಸರು, ಈಗ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿಲುಮೆ ಸಂಸ್ಥೆಯ ಸಿಬ್ಬಂದಿಗಳಾದ ರೇಣುಕಾಪ್ರಸಾದ್, ಧರ್ಮೇಶ್​, ಸುಧಾಕರ್​ ಮತ್ತು ರಕ್ಷಿತ್ ಎನ್ನುವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:14 pm, Fri, 18 November 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ