AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆರ್‌ಆರ್‌ನಗರದ ಒಬಿಸಿ ವಸತಿ ನಿಲಯದಲ್ಲಿ ಬಾಲಕಿಯರಿಂದಲೇ ಶೌಚಾಲಯ ಸ್ವಚ್ಛಗೊಳಿಸಿದ ವಾರ್ಡನ್​

ಬೆಂಗಳೂರಿನ ಆರ್‌ಆರ್‌ನಗರದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್‌ನ ವಾರ್ಡನ್‌ನಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿ ಅವರಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿದೆ.

ಬೆಂಗಳೂರು: ಆರ್‌ಆರ್‌ನಗರದ ಒಬಿಸಿ ವಸತಿ ನಿಲಯದಲ್ಲಿ ಬಾಲಕಿಯರಿಂದಲೇ ಶೌಚಾಲಯ ಸ್ವಚ್ಛಗೊಳಿಸಿದ ವಾರ್ಡನ್​
ಆರ್​ಆರ್​ನಗರ ಓಬಿಸಿ ಹಾಸ್ಟೆಲ್​ ವಿದ್ಯಾರ್ಥಿಗಳ ಪರಿಸ್ಥಿತಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 03, 2023 | 12:36 PM

Share

ಬೆಂಗಳೂರು:ಆರ್‌ಆರ್‌ನಗರದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಪರಿಸ್ಥಿತಿ ಹೇಳತೀರದು.ಹಾಸ್ಟೆಲ್​ ವಾರ್ಡ್​ನ್​ನಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿ ಅವರಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿದೆ ಈ ಕುರಿತು ಡಿಎಚ್‌ನೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು, ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಅವಾಚ್ಯವಾಗಿ ನಿಂದಿಸುತ್ತಾರೆ. ಅಧಿಕಾರಿಗಳು ಅಡುಗೆಗಾರರನ್ನು ನೇಮಿಸಿದ್ದರೂ ನಮ್ಮ ಆಹಾರವನ್ನು ನಾವೇ ಬೇಯಿಸಿಕೊಳ್ಳುವಂತೆ ಮಾಡಲಾಗಿದೆ. ವಾರ್ಡನ್ ಹುಡುಗಿಯರನ್ನು ಅವಮಾನಿಸುತ್ತಾನೆ, ಜೊತೆಗೆ ರಜೆಯಲ್ಲೂ ಮನೆಗೆ ತೆರಳಲು ಅನುಮತಿ ನಿರಾಕರಿಸಲಾಗಿದೆ. ತಮ್ಮ ಮಕ್ಕಳ ಯೋಗಕ್ಷೇಮ ವಿಚಾರಿಸಲು ವಾರ್ಡನ್‌ಗೆ ಕರೆ ಮಾಡುವ ಪಾಲಕರಿಗೆ ಅಸಭ್ಯವಾಗಿ ಮಾತನಾಡುತ್ತಾರೆ. ನಾವು ಮನೆಯಿಂದ ದೂರದಲ್ಲಿದ್ದು ನಮ್ಮ ಪೋಷಕರು ಚಿಂತಿತರಾಗಿದ್ದಾರೆ ಎಂದು  ವಿದ್ಯಾರ್ಥಿಗಳು ಅಳಲನ್ನ ತೋಡಿಕೊಂಡಿದ್ದಾರೆ.

ಇನ್ನು ಹೆಣ್ಣುಮಕ್ಕಳಿಗೆ ಸಹಾಯ ಮಾಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತಲುಪಿದ್ದೇವೆ. “ನಾವು ಅವರಿಗೆ ಪತ್ರವನ್ನು ಕೂಡ ಸಲ್ಲಿಸಿದ್ದೇವೆ, ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಹುಡುಗಿಯರಿಗೆ ಸಹಾಯ ಮಾಡುವ ಬದಲು, ಅವರ ಪ್ರವೇಶವನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದರು,” ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸದಸ್ಯ ನರೇಂದ್ರ ಎನ್ ಆರೋಪಿಸಿದರು.

ಇದನ್ನೂ ಓದಿ:ಬಳ್ಳಾರಿ: ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್​​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಇನ್ನು ಈ ಕುರಿತು ಟ್ವೀಟ್ ಮಾಡಿರುವ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರು ಹಾಸ್ಟೆಲ್‌ನ ದುಸ್ಥಿತಿ ಬಗ್ಗೆ ತಿಳಿದು ಆಘಾತವಾಯಿತು. ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ನಾನು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದೆ, ಆದರೆ ಯಾರೂ ಪ್ರತಿಕ್ರಿಯಿಸಲಿಲ್ಲ. ಇದರ ಕುರಿತು ಕ್ರಮ ಕೈಗೊಳ್ಳುವಂತೆ ಸಚಿವರನ್ನು ಸಂಪರ್ಕಿಸಿದ್ದೇನೆ,” ಎಂದು ಡಿಎಚ್‌ಗೆ ತಿಳಿಸಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Tue, 3 January 23

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ