Bengaluru Water Crisis: ವಾರಕ್ಕೊಮ್ಮೆ ಸ್ನಾನ, ಆರ್ಡರ್ ಮಾಡಿ ಊಟ; ಬೆಂಗಳೂರು ನಿವಾಸಿಗಳ ಗೋಳು ಒಂದಾ ಎರಡಾ!

ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ಬಗ್ಗೆ ಬೆಂಗಳೂರು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ. ತಿಂಗಳಿಗೆ ಐದು ಬಾರಿ ಮಾತ್ರ ಸ್ನಾನ, ಅಡುಗೆ ಮಾಡಿದರೆ ಪಾತ್ರೆ ತೊಳೆಯಲು ನೀರು ಬೇಕೆಂದು ಆರ್ಡರ್ ಮಾಡಿ ಊಟ-ತಿಂಡಿ, ಕುಡಿಯುವ ನೀರಿಲ್ಲವೆಂದು ಸಂಸ್ಕರಿಸಿದ ನೀರನ್ನೇ ಬಳಕೆ ಮಾಡುವಂತಹ ಸ್ಥಿತಿ ಬೆಂಗಳೂರಿನಲ್ಲಿದೆ.

Bengaluru Water Crisis: ವಾರಕ್ಕೊಮ್ಮೆ ಸ್ನಾನ, ಆರ್ಡರ್ ಮಾಡಿ ಊಟ; ಬೆಂಗಳೂರು ನಿವಾಸಿಗಳ ಗೋಳು ಒಂದಾ ಎರಡಾ!
ಸಾಂದರ್ಭಿಕ ಚಿತ್ರ
Follow us
|

Updated on: Mar 13, 2024 | 11:24 AM

ಬೆಂಗಳೂರು, ಮಾರ್ಚ್​.13: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಬರ ಆವರಿಸಿದೆ. ಹನಿ ನೀರಿಗಾಗಿಯೂ ಜನ ಪರದಾಡುತ್ತಿದ್ದಾರೆ (Drinking Water Crisis). ಕುಡಿಯಲು ಅಲ್ಲ ತೊಳೆಯಲು ಕೂಡ ನೀರಿಲ್ಲ. ದೈನಂದಿನ ಕಾರ್ಯಗಳಿಗೂ ಸಮಸ್ಯೆ ಎದುರಾಗಿದೆ. ಬೆಂಗಳೂರಿನ ಕೆಲ ನಿವಾಸಿಗಳು ನೀರಿಲ್ಲದೆ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮನ ಬಿಚ್ಚಿ ಅಳಲು ತೋಡಿಕೊಂಡಿದ್ದಾರೆ. ತಿಂಗಳಿಗೆ ಐದು ಬಾರಿ ಮಾತ್ರ ಸ್ನಾನ, ಅಡುಗೆ ಮಾಡಿದರೆ ಪಾತ್ರೆ ತೊಳೆಯಲು ನೀರು (Water) ಬೇಕೆಂದು ಆರ್ಡರ್ ಮಾಡಿ ಊಟ-ತಿಂಡಿ, ಕುಡಿಯುವ ನೀರಿಲ್ಲವೆಂದು ಸಂಸ್ಕರಿಸಿದ ನೀರನ್ನೇ ಬಳಕೆ, ಹೀಗೆ ಒಂದಾ ಎರಡಾ ನೀರಿಲ್ಲದ ಕಾರಣ ಬೆಂಗಳೂರಿನ ಬಹುತೇಕ ಏರಿಯಾದ ಜನರು ನರಕ ಅನುಭವಿಸುತ್ತಿದ್ದಾರೆ.

ಬಾಬುಸಾಪಾಳ್ಯದ ನಿವಾಸಿಗಳು ತಮ್ಮ ದೈನಂದಿನ ಬಳಕೆಗಾಗಿ ನೀರಿನ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಇದರಿಂದಾಗಿ ಕಳೆದೆರಡು ತಿಂಗಳಿಂದ ತೀವ್ರ ಆರ್ಥಿಕ ಹೊಡೆತ ಬಿದ್ದಿದೆ. “ನಮಗೆ ಪ್ರತಿನಿತ್ಯ ನಾಲ್ಕು ಟ್ಯಾಂಕರ್‌ ನೀರು ಬೇಕಾಗುತ್ತದೆ. ಆದರೆ ನಮಗೆ ಒಂದು ಅಥವಾ ಎರಡು ಟ್ಯಾಂಕರ್ ನೀರು ಮಾತ್ರ ಸಿಗುತ್ತಿದೆ. ಕಳೆದ ಎರಡು-ಮೂರು ತಿಂಗಳಿಂದ ನಾವು ದೊಡ್ಡ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ” ಎಂದು ನಿವಾಸಿಯೊಬ್ಬರು ಹೇಳಿದರು.

ಟ್ಯಾಂಕರ್​ಗಳ ಮೇಲೆ ಸರ್ಕಾರ ವಿಧಿಸಿರುವ ಆದೇಶ ಪ್ರಯೋಜನವಾಗಿದೆಯೇ ಎಂಬ ಪ್ರಶ್ನೆಗೆ ಇಲ್ಲಿನ ನಿವಾಸಿಯೊಬ್ಬರು, ‘ದರ ಸ್ಥಿರತೆ ಕಂಡರೂ ಸಮಸ್ಯೆ ದೊಡ್ಡದಾಗಿಯೇ ಉಳಿದಿದೆ, ಬೇಡಿಕೆ ಹೆಚ್ಚಿರುವುದರಿಂದ ಸಕಾಲಕ್ಕೆ ಟ್ಯಾಂಕರ್‌ಗಳು ಸಿಗುತ್ತಿಲ್ಲ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಒಂದೆಡೆ ನಲ್ಲಿ ನೀರು ಬರ್ತಿಲ್ಲ, ಮತ್ತೊಂದೆಡೆ ನೀರು ಬರುವ ಬೋರ್ ವೆಲ್ ಮೋಟಾರ್​ ಕದಿಯುತ್ತಿರುವ ಖದೀಮರು; ಜನ ಹೈರಾಣ

ಈ ಪ್ರದೇಶದ ಅಪಾರ್ಟ್‌ಮೆಂಟ್‌ನ ನಿವಾಸಿ ಮಹಿಳೆಯೊಬ್ಬರು ನೀರಿನ ಸಮಸ್ಯೆಯ ಬಗ್ಗೆ ಮಾತನಾಡಿದ್ದು “ನಮಗೆ ಮಗು ಇದೆ, ತುಂಬಾ ಕಷ್ಟ, ಟ್ಯಾಂಕರ್‌ಗಳು ಬರುತ್ತಿಲ್ಲ, ಸರ್ಕಾರವು ಬೆಲೆಗಳನ್ನು ಕಡಿಮೆ ಮಾಡಿದೆ, ಆದರೆ ಅವು ಬರುತ್ತಿಲ್ಲ, ಅವರು ಬಂದರೂ ನೀರು ಬರುತ್ತಿಲ್ಲ. ನೀರಿನ ಸಮಸ್ಯೆಗೆ ಯಾವಾಗ ಪರಿಹಾರ ಸಿಗುತ್ತದೆ, ನಾವು ಯಾವಾಗ ಸಾಮಾನ್ಯ ಜೀವನಕ್ಕೆ ಮರಳುತ್ತೇವೆ ಎಂದು ನನಗೆ ತಿಳಿದಿಲ್ಲ ಎಂದರು.”

ಮುಂಗಾರು ಮಳೆ ಬಂದ ನಂತರ ಈ ಪರಿಸ್ಥಿತಿ ಸರಿಯಾಗುವ ನಿರೀಕ್ಷೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ನಿವಾಸಿಯೊಬ್ಬರು, ಸರ್ಕಾರಗಳು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವುದರಲ್ಲಿ ಗಮನಹರಿಸುತ್ತಿವೆ “ಅವರು ಜನರ ಒಟ್ಟಾರೆ ಯೋಗಕ್ಷೇಮವನ್ನು ಪರಿಗಣಿಸಲಿಲ್ಲ. ಅಪಾರ್ಟ್‌ಮೆಂಟ್‌ಗಳು ಮತ್ತು ರಸ್ತೆಗಳನ್ನು ನಿರ್ಮಿಸುವತ್ತ ಗಮನ ಹರಿಸಲಾಗಿದೆ, ಆದರೆ ನಾವು ಅಂತರ್ಜಲ ಮಟ್ಟಕ್ಕೆ ಕೆಲಸ ಮಾಡಬೇಕಾಗಿದೆ. ಅದನ್ನು ಎಂದಿಗೂ ಮಾಡಲಾಗಿಲ್ಲ. ನಾನು 15 ವರ್ಷಗಳಿಂದ ಇಲ್ಲಿದ್ದೇನೆ. ನಾನು ಯಾವುದೇ ಸರ್ಕಾರದಿಂದ ಇಂತಹ ಕ್ರಮಗಳನ್ನು ನೋಡಿಲ್ಲ ಎಂದು ಅವರು ಹೇಳಿದರು, ಜನರು ಕುಡಿಯುವ ನೀರಿಗಾಗಿ ಕಿಲೋಮೀಟರ್ ಉದ್ದದ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು. ಇನ್ನು ಮತ್ತೋರ್ವ ನಿವಾಸಿ ಮಾತನಾಡಿ, ಕಳೆದ ಒಂದು ತಿಂಗಳಿನಿಂದ 5 ಬಾರಿ ಸ್ನಾನ ಮಾಡಿದ್ದೇನೆ ಎಂದು ಅಳಲು ತೋಡಿಕೊಂಡರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ