AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Crisis: ವಾರಕ್ಕೊಮ್ಮೆ ಸ್ನಾನ, ಆರ್ಡರ್ ಮಾಡಿ ಊಟ; ಬೆಂಗಳೂರು ನಿವಾಸಿಗಳ ಗೋಳು ಒಂದಾ ಎರಡಾ!

ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ಬಗ್ಗೆ ಬೆಂಗಳೂರು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ. ತಿಂಗಳಿಗೆ ಐದು ಬಾರಿ ಮಾತ್ರ ಸ್ನಾನ, ಅಡುಗೆ ಮಾಡಿದರೆ ಪಾತ್ರೆ ತೊಳೆಯಲು ನೀರು ಬೇಕೆಂದು ಆರ್ಡರ್ ಮಾಡಿ ಊಟ-ತಿಂಡಿ, ಕುಡಿಯುವ ನೀರಿಲ್ಲವೆಂದು ಸಂಸ್ಕರಿಸಿದ ನೀರನ್ನೇ ಬಳಕೆ ಮಾಡುವಂತಹ ಸ್ಥಿತಿ ಬೆಂಗಳೂರಿನಲ್ಲಿದೆ.

Bengaluru Water Crisis: ವಾರಕ್ಕೊಮ್ಮೆ ಸ್ನಾನ, ಆರ್ಡರ್ ಮಾಡಿ ಊಟ; ಬೆಂಗಳೂರು ನಿವಾಸಿಗಳ ಗೋಳು ಒಂದಾ ಎರಡಾ!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 13, 2024 | 11:24 AM

Share

ಬೆಂಗಳೂರು, ಮಾರ್ಚ್​.13: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಬರ ಆವರಿಸಿದೆ. ಹನಿ ನೀರಿಗಾಗಿಯೂ ಜನ ಪರದಾಡುತ್ತಿದ್ದಾರೆ (Drinking Water Crisis). ಕುಡಿಯಲು ಅಲ್ಲ ತೊಳೆಯಲು ಕೂಡ ನೀರಿಲ್ಲ. ದೈನಂದಿನ ಕಾರ್ಯಗಳಿಗೂ ಸಮಸ್ಯೆ ಎದುರಾಗಿದೆ. ಬೆಂಗಳೂರಿನ ಕೆಲ ನಿವಾಸಿಗಳು ನೀರಿಲ್ಲದೆ ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮನ ಬಿಚ್ಚಿ ಅಳಲು ತೋಡಿಕೊಂಡಿದ್ದಾರೆ. ತಿಂಗಳಿಗೆ ಐದು ಬಾರಿ ಮಾತ್ರ ಸ್ನಾನ, ಅಡುಗೆ ಮಾಡಿದರೆ ಪಾತ್ರೆ ತೊಳೆಯಲು ನೀರು (Water) ಬೇಕೆಂದು ಆರ್ಡರ್ ಮಾಡಿ ಊಟ-ತಿಂಡಿ, ಕುಡಿಯುವ ನೀರಿಲ್ಲವೆಂದು ಸಂಸ್ಕರಿಸಿದ ನೀರನ್ನೇ ಬಳಕೆ, ಹೀಗೆ ಒಂದಾ ಎರಡಾ ನೀರಿಲ್ಲದ ಕಾರಣ ಬೆಂಗಳೂರಿನ ಬಹುತೇಕ ಏರಿಯಾದ ಜನರು ನರಕ ಅನುಭವಿಸುತ್ತಿದ್ದಾರೆ.

ಬಾಬುಸಾಪಾಳ್ಯದ ನಿವಾಸಿಗಳು ತಮ್ಮ ದೈನಂದಿನ ಬಳಕೆಗಾಗಿ ನೀರಿನ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಇದರಿಂದಾಗಿ ಕಳೆದೆರಡು ತಿಂಗಳಿಂದ ತೀವ್ರ ಆರ್ಥಿಕ ಹೊಡೆತ ಬಿದ್ದಿದೆ. “ನಮಗೆ ಪ್ರತಿನಿತ್ಯ ನಾಲ್ಕು ಟ್ಯಾಂಕರ್‌ ನೀರು ಬೇಕಾಗುತ್ತದೆ. ಆದರೆ ನಮಗೆ ಒಂದು ಅಥವಾ ಎರಡು ಟ್ಯಾಂಕರ್ ನೀರು ಮಾತ್ರ ಸಿಗುತ್ತಿದೆ. ಕಳೆದ ಎರಡು-ಮೂರು ತಿಂಗಳಿಂದ ನಾವು ದೊಡ್ಡ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ” ಎಂದು ನಿವಾಸಿಯೊಬ್ಬರು ಹೇಳಿದರು.

ಟ್ಯಾಂಕರ್​ಗಳ ಮೇಲೆ ಸರ್ಕಾರ ವಿಧಿಸಿರುವ ಆದೇಶ ಪ್ರಯೋಜನವಾಗಿದೆಯೇ ಎಂಬ ಪ್ರಶ್ನೆಗೆ ಇಲ್ಲಿನ ನಿವಾಸಿಯೊಬ್ಬರು, ‘ದರ ಸ್ಥಿರತೆ ಕಂಡರೂ ಸಮಸ್ಯೆ ದೊಡ್ಡದಾಗಿಯೇ ಉಳಿದಿದೆ, ಬೇಡಿಕೆ ಹೆಚ್ಚಿರುವುದರಿಂದ ಸಕಾಲಕ್ಕೆ ಟ್ಯಾಂಕರ್‌ಗಳು ಸಿಗುತ್ತಿಲ್ಲ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಒಂದೆಡೆ ನಲ್ಲಿ ನೀರು ಬರ್ತಿಲ್ಲ, ಮತ್ತೊಂದೆಡೆ ನೀರು ಬರುವ ಬೋರ್ ವೆಲ್ ಮೋಟಾರ್​ ಕದಿಯುತ್ತಿರುವ ಖದೀಮರು; ಜನ ಹೈರಾಣ

ಈ ಪ್ರದೇಶದ ಅಪಾರ್ಟ್‌ಮೆಂಟ್‌ನ ನಿವಾಸಿ ಮಹಿಳೆಯೊಬ್ಬರು ನೀರಿನ ಸಮಸ್ಯೆಯ ಬಗ್ಗೆ ಮಾತನಾಡಿದ್ದು “ನಮಗೆ ಮಗು ಇದೆ, ತುಂಬಾ ಕಷ್ಟ, ಟ್ಯಾಂಕರ್‌ಗಳು ಬರುತ್ತಿಲ್ಲ, ಸರ್ಕಾರವು ಬೆಲೆಗಳನ್ನು ಕಡಿಮೆ ಮಾಡಿದೆ, ಆದರೆ ಅವು ಬರುತ್ತಿಲ್ಲ, ಅವರು ಬಂದರೂ ನೀರು ಬರುತ್ತಿಲ್ಲ. ನೀರಿನ ಸಮಸ್ಯೆಗೆ ಯಾವಾಗ ಪರಿಹಾರ ಸಿಗುತ್ತದೆ, ನಾವು ಯಾವಾಗ ಸಾಮಾನ್ಯ ಜೀವನಕ್ಕೆ ಮರಳುತ್ತೇವೆ ಎಂದು ನನಗೆ ತಿಳಿದಿಲ್ಲ ಎಂದರು.”

ಮುಂಗಾರು ಮಳೆ ಬಂದ ನಂತರ ಈ ಪರಿಸ್ಥಿತಿ ಸರಿಯಾಗುವ ನಿರೀಕ್ಷೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ನಿವಾಸಿಯೊಬ್ಬರು, ಸರ್ಕಾರಗಳು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವುದರಲ್ಲಿ ಗಮನಹರಿಸುತ್ತಿವೆ “ಅವರು ಜನರ ಒಟ್ಟಾರೆ ಯೋಗಕ್ಷೇಮವನ್ನು ಪರಿಗಣಿಸಲಿಲ್ಲ. ಅಪಾರ್ಟ್‌ಮೆಂಟ್‌ಗಳು ಮತ್ತು ರಸ್ತೆಗಳನ್ನು ನಿರ್ಮಿಸುವತ್ತ ಗಮನ ಹರಿಸಲಾಗಿದೆ, ಆದರೆ ನಾವು ಅಂತರ್ಜಲ ಮಟ್ಟಕ್ಕೆ ಕೆಲಸ ಮಾಡಬೇಕಾಗಿದೆ. ಅದನ್ನು ಎಂದಿಗೂ ಮಾಡಲಾಗಿಲ್ಲ. ನಾನು 15 ವರ್ಷಗಳಿಂದ ಇಲ್ಲಿದ್ದೇನೆ. ನಾನು ಯಾವುದೇ ಸರ್ಕಾರದಿಂದ ಇಂತಹ ಕ್ರಮಗಳನ್ನು ನೋಡಿಲ್ಲ ಎಂದು ಅವರು ಹೇಳಿದರು, ಜನರು ಕುಡಿಯುವ ನೀರಿಗಾಗಿ ಕಿಲೋಮೀಟರ್ ಉದ್ದದ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು. ಇನ್ನು ಮತ್ತೋರ್ವ ನಿವಾಸಿ ಮಾತನಾಡಿ, ಕಳೆದ ಒಂದು ತಿಂಗಳಿನಿಂದ 5 ಬಾರಿ ಸ್ನಾನ ಮಾಡಿದ್ದೇನೆ ಎಂದು ಅಳಲು ತೋಡಿಕೊಂಡರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ