AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹೊರ ವಲಯದ ನೀರಿನ ಅಭಾವ ತಪ್ಪಿಸಲು ಜಲಮಂಡಳಿಯಿಂದ ಹೊಸ ಪ್ಲ್ಯಾನ್​​

Bengaluru Water Crisis: ಬೆಂಗಳೂರು ನಗರ ಮತ್ತು ಹೊರವಲಯದಲ್ಲಿ ನೀರಿನ ಬಿಕ್ಕಟ್ಟು ತೀವ್ರಗೊಂಡಿದೆ. ಹೀಗಾಗಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮಂಡಳಿ ಕೆರೆಗಳ ಮೊರೆ ಹೋಗಿದೆ. ಐಐಎಸ್​ಸಿ ಸಹಯೋಗದಲ್ಲಿ ಬೆಂಗಳೂರಿನ ಎಂಟು ಕೆರೆಗಳಲ್ಲಿ ಫಿಲ್ಟರ್ ಬೋರ್ ವೆಲ್ ಅಳವಡಿಸಲು ತಯಾರಿ ನಡೆಸಿದೆ.

ಬೆಂಗಳೂರು ಹೊರ ವಲಯದ ನೀರಿನ ಅಭಾವ ತಪ್ಪಿಸಲು ಜಲಮಂಡಳಿಯಿಂದ ಹೊಸ ಪ್ಲ್ಯಾನ್​​
ಬೆಂಗಳೂರು ಜಲ ಮಂಡಳಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Mar 09, 2024 | 12:39 PM

ಬೆಂಗಳೂರು, ಮಾರ್ಚ್​ 09: ಬೆಂಗಳೂರು ನಗರ ಮತ್ತು ಹೊರವಲಯದಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿದೆ. ಇನ್ನೇನು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಈ ವರ್ಷ ಕುಡಿಯುವ ನೀರಿಗೂ ಹಲವೆಡೆ ಸಮಸ್ಯೆ ಎದುರಾಗಿದೆ. ಈ ನೀರಿನ ಸಮಸ್ಯೆಯನ್ನು ಬಗೆಹರಿಸಲು ಜಲಮಂಡಳಿ (Bangaluru Water Supply and Sewerage Board) ಕೆರೆಗಳ (Lake) ಮೊರೆ ಹೋಗಿದೆ. ಐಐಎಸ್​ಸಿ ಸಹಯೋಗದಲ್ಲಿ ಬೆಂಗಳೂರಿನ ಎಂಟು ಕೆರೆಗಳಲ್ಲಿ ಫಿಲ್ಟರ್ ಬೋರ್ ವೆಲ್ ಅಳವಡಿಸಲು ತಯಾರಿ ನಡೆಸಿದೆ. ಅದರಂತೆ ಮೊದಲಿಗೆ ನಾಯಂಡಹಳ್ಳಿ ಕೆರೆ, ಚಿಕ್ಕ ಬಾಣವಾರ ಕೆರೆ, ವರ್ತೂರು ಕೆರೆ ಸೇರಿದಂತೆ ಎಂಟು ಕೆರಳ ನೀರನ್ನು 10 ರಿಂದ 15 ದಿನಗಳಲ್ಲಿ ಸಂಗ್ರಹಿಸಲಾಗುತ್ತಾದೆ. ಬಳಿಕ ತಜ್ಞರು ನೀರಿನ ಗುಣಮಟ್ಟ ಪರಿಶೀಲಿಸಲಿದ್ದಾರೆ.

ತಜ್ಞರ ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವೆಂದು ವರದಿ ಬಂದರೇ, ಬಳಿಕ ಬೋರ್​​ವೆಲ್​ ಕೊರೆಯಲಾಗುತ್ತದೆ. ನಂತರ ನೀರು ಶುದ್ಧೀಕರಣ ಮಾಡಿ, ಬಳಿಕ ಮನೆ ಮನೆಗೆ ಸರಬರಾಜು ಮಾಡಲಾಗುತ್ತದೆ ಎಂದು ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟ್ಯಾಂಕರ್ ನೀರಿಗೆ ದರ ನಿಗದಿಪಡಿಸಿ ಜಿಲ್ಲಾಡಳಿತ ಆದೇಶ

ಟ್ಯಾಂಕರ್ ಮಾಲೀಕರ ಜೊತೆ ಮೂರ್ನಾಲ್ಕು ಬಾರಿ ಸಭೆ ನಡೆಸಿದ ನಂತರ ಜಿಲ್ಲಾಡಳಿತ ಬೆಲೆ ನಿಗದಿ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್​ನಲ್ಲಿ ನೀರು ಪೂರೈಕೆ

ಟ್ಯಾಂಕರ್ ನೀರಿನ ದರ ವಿವರ ಇಲ್ಲಿದೆ

  • 6 ಸಾವಿರ ಲೀಟರ್ ಟ್ಯಾಂಕರ್​ಗೆ 600 ರೂ. ದರ ನಿಗದಿ. ಇದು 5 ಕಿಲೋ ಮೀಟರ್ ಒಳಗಡೆಗೆ ಮಾತ್ರ ಅನ್ವಯವಾಗಲಿದೆ.
  • 6 ಸಾವಿರ ಲೀಟರ್ ಟ್ಯಾಂಕರ್ ಗೆ 750 ರೂ. ದರ ನಿಗದಿ. ಇದು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ.
  • 8 ಸಾವಿರ ಲೀಟರ್ ಟ್ಯಾಂಕರ್​ಗೆ 700 ರೂ. ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿಲೋ ಮೀಟರ್ ಒಳಗೆ ಅನ್ವಯವಾಗಲಿದೆ.
  • 8 ಸಾವಿರ ಲೀಟರ್​ಗೆ 850 ರೂ. ದರ ನಿಗದಿ ಮಾಡಲಾಗಿದ್ದು, 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ದರ ಪಡೆಯಬಹುದಾಗಿದೆ.
  • 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ 1000 ರೂ. ದರ ನಿಗದಿ ಮಾಡಲಾಗಿದೆ.
  • 1200 ಲೀಟರ್ ಟ್ಯಾಂಕರ್​​​ಗೆ 1200 ರೂ. ದರ ಫಿಕ್ಸ್ ಮಾಡಲಾಗಿದ್ದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.
  • ಜಿಎಸ್​​ಟಿ ಸೇರಿಸಿ ಈ ದರ ಫಿಕ್ಸ್ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ 510 ರೂ. ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ 650 ರೂ. ದರ ಫಿಕ್ಸ್ ಮಾಡಲಾಗಿದೆ.
  • ಜಿಎಸ್​​ಟಿ ಸೇರಿಸಿ ಈ ದರ ಫಿಕ್ಸ್ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ 510 ರೂ. ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ 650 ರೂ. ದರ ಫಿಕ್ಸ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ