Bengaluru Water Crisis: 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ

Bengaluru Tanker Water Rate: ಬೆಂಗಳೂರಿನಲ್ಲಿ ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುಲು ಬೆಂಗಳೂರು ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ದಿಟ್ಟ ಹೆಜ್ಜೆಯನ್ನಟ್ಟಿದೆ. ಈ ಹಿಂದೆ 600 ರಿಂದ 1,200 ಲೀಟರ್​ ವಾಟರ್​ ಟ್ಯಾಂಕರ್​ಗಳಿಗೆ ಮಾತ್ರ ದರ ನಿಗದಿ ಮಾಡಿದ್ದ ಜಲಮಂಡಳಿ ಇದೀಗ 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ ಮಾಡಿದೆ.

Bengaluru Water Crisis: 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ
ವಾಟರ್​ ಟ್ಯಾಂಕರ್​
Follow us
| Updated By: ವಿವೇಕ ಬಿರಾದಾರ

Updated on: Mar 23, 2024 | 9:36 PM

ಬೆಂಗಳೂರು, ಮಾರ್ಚ್​​ 23: ಬೆಂಗಳೂರು ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೆ (Water Tanker) ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ 200 ವಾಟರ್ ಟ್ಯಾಂಕರ್​​ಗಳನ್ನು ಮೂರು ತಿಂಗಳ ಅವಧಿಗೆ ಬಾಡಿಗೆಗೆ ಪಡೆದಿದೆ. ಸಾರ್ವಜನಿಕರು ಈ ವಾಟರ್​ ಟ್ಯಾಂಕರ್​ಗಳನ್ನು ಉಪಯೋಗಿಸಕೊಳ್ಳಬಹುದಾಗಿದೆ.

24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳ ದರ

  • 16 ಸಾವಿರ ಲೀಟರ್ ಟ್ಯಾಂಕರ್​ಗೆ 12,100 ರೂಪಾಯಿ
  • 23 ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕರ್​ಗೆ 15400 ರೂಪಾಯಿ
  • 30 ಸಾವಿರ ಲೀಟರ್ ಖಾಲಿ ಟ್ಯಾಂಕರ್​ಗೆ 17,900 ರೂಪಾಯಿ ನಿಗದಿ ಮಾಡಿದೆ.

600 ರಿಂದ 1,200 ಲೀಟರ್​ ವಾಟರ್​ ಟ್ಯಾಂಕರ್​ಗಳ ದರ

  • 6 ಸಾವಿರ ಲೀಟರ್ ಟ್ಯಾಂಕರ್​ಗೆ 600 ರೂ. ದರ ನಿಗದಿ. ಇದು 5 ಕಿಲೋ ಮೀಟರ್ ಒಳಗಡೆಗೆ ಮಾತ್ರ ಅನ್ವಯವಾಗಲಿದೆ.
  • 6 ಸಾವಿರ ಲೀಟರ್ ಟ್ಯಾಂಕರ್ ಗೆ 750 ರೂ. ದರ ನಿಗದಿ. ಇದು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ.
  • 8 ಸಾವಿರ ಲೀಟರ್ ಟ್ಯಾಂಕರ್​ಗೆ 700 ರೂ. ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿಲೋ ಮೀಟರ್ ಒಳಗೆ ಅನ್ವಯವಾಗಲಿದೆ.
  • 8 ಸಾವಿರ ಲೀಟರ್​ಗೆ 850 ರೂ. ದರ ನಿಗದಿ ಮಾಡಲಾಗಿದ್ದು, 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ದರ ಪಡೆಯಬಹುದಾಗಿದೆ.
  • 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ 1000 ರೂ. ದರ ನಿಗದಿ ಮಾಡಲಾಗಿದೆ.
  • 1200 ಲೀಟರ್ ಟ್ಯಾಂಕರ್​​​ಗೆ 1200 ರೂ. ದರ ಫಿಕ್ಸ್ ಮಾಡಲಾಗಿದ್ದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.

ಇದನ್ನೂ ಓದಿ: ಹೋಳಿ ಹಬ್ಬಕ್ಕೆ ಕಾವೇರಿ ನೀರು ಬಳಸದಂತೆ ಸೂಚನೆ ನೀಡಿದ ಜಲಮಂಡಳಿ

ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ 510 ರೂ. ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ 650 ರೂ. ದರ ಫಿಕ್ಸ್ ಮಾಡಲಾಗಿದೆ. ಜಲಮಂಡಳಿ ಈ ಹಿಂದೆ 600 ರಿಂದ 1,200 ಲೀಟರ್​ ವಾಟರ್​ ಟ್ಯಾಂಕರ್​ಗಳಿಗೂ ಮಾತ್ರ ದರ ನಿಗದಿ ಮಾಡಿತ್ತು. ಇದೀಗ 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೆ ದರ ನಿಗದಿ ಮಾಡಿದೆ. ಜಿಎಸ್​​ಟಿ ಸೇರಿಸಿ ಈ ದರ ನಿಗದಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುವ ಸಂಬಂಧ ಇತ್ತೀಚೆಗಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ, ನೀರಿನ ಟ್ಯಾಂಕರ್‌ಗಳ ಮಾಲೀಕರು ಮಾರ್ಚ್​ 7ರ ಗಡುವಿನ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ದರ ನಿಗದಿ ಸಂಬಂಧ ಈ ಸೂಚನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ