AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Crisis: 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ

Bengaluru Tanker Water Rate: ಬೆಂಗಳೂರಿನಲ್ಲಿ ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುಲು ಬೆಂಗಳೂರು ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ದಿಟ್ಟ ಹೆಜ್ಜೆಯನ್ನಟ್ಟಿದೆ. ಈ ಹಿಂದೆ 600 ರಿಂದ 1,200 ಲೀಟರ್​ ವಾಟರ್​ ಟ್ಯಾಂಕರ್​ಗಳಿಗೆ ಮಾತ್ರ ದರ ನಿಗದಿ ಮಾಡಿದ್ದ ಜಲಮಂಡಳಿ ಇದೀಗ 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ ಮಾಡಿದೆ.

Bengaluru Water Crisis: 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ
ವಾಟರ್​ ಟ್ಯಾಂಕರ್​
TV9 Web
| Edited By: |

Updated on: Mar 23, 2024 | 9:36 PM

Share

ಬೆಂಗಳೂರು, ಮಾರ್ಚ್​​ 23: ಬೆಂಗಳೂರು ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೆ (Water Tanker) ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ 200 ವಾಟರ್ ಟ್ಯಾಂಕರ್​​ಗಳನ್ನು ಮೂರು ತಿಂಗಳ ಅವಧಿಗೆ ಬಾಡಿಗೆಗೆ ಪಡೆದಿದೆ. ಸಾರ್ವಜನಿಕರು ಈ ವಾಟರ್​ ಟ್ಯಾಂಕರ್​ಗಳನ್ನು ಉಪಯೋಗಿಸಕೊಳ್ಳಬಹುದಾಗಿದೆ.

24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳ ದರ

  • 16 ಸಾವಿರ ಲೀಟರ್ ಟ್ಯಾಂಕರ್​ಗೆ 12,100 ರೂಪಾಯಿ
  • 23 ಸಾವಿರ ಲೀಟರ್ ಸಾಮರ್ಥ್ಯದ ಟ್ಯಾಂಕರ್​ಗೆ 15400 ರೂಪಾಯಿ
  • 30 ಸಾವಿರ ಲೀಟರ್ ಖಾಲಿ ಟ್ಯಾಂಕರ್​ಗೆ 17,900 ರೂಪಾಯಿ ನಿಗದಿ ಮಾಡಿದೆ.

600 ರಿಂದ 1,200 ಲೀಟರ್​ ವಾಟರ್​ ಟ್ಯಾಂಕರ್​ಗಳ ದರ

  • 6 ಸಾವಿರ ಲೀಟರ್ ಟ್ಯಾಂಕರ್​ಗೆ 600 ರೂ. ದರ ನಿಗದಿ. ಇದು 5 ಕಿಲೋ ಮೀಟರ್ ಒಳಗಡೆಗೆ ಮಾತ್ರ ಅನ್ವಯವಾಗಲಿದೆ.
  • 6 ಸಾವಿರ ಲೀಟರ್ ಟ್ಯಾಂಕರ್ ಗೆ 750 ರೂ. ದರ ನಿಗದಿ. ಇದು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ.
  • 8 ಸಾವಿರ ಲೀಟರ್ ಟ್ಯಾಂಕರ್​ಗೆ 700 ರೂ. ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿಲೋ ಮೀಟರ್ ಒಳಗೆ ಅನ್ವಯವಾಗಲಿದೆ.
  • 8 ಸಾವಿರ ಲೀಟರ್​ಗೆ 850 ರೂ. ದರ ನಿಗದಿ ಮಾಡಲಾಗಿದ್ದು, 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ದರ ಪಡೆಯಬಹುದಾಗಿದೆ.
  • 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ 1000 ರೂ. ದರ ನಿಗದಿ ಮಾಡಲಾಗಿದೆ.
  • 1200 ಲೀಟರ್ ಟ್ಯಾಂಕರ್​​​ಗೆ 1200 ರೂ. ದರ ಫಿಕ್ಸ್ ಮಾಡಲಾಗಿದ್ದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.

ಇದನ್ನೂ ಓದಿ: ಹೋಳಿ ಹಬ್ಬಕ್ಕೆ ಕಾವೇರಿ ನೀರು ಬಳಸದಂತೆ ಸೂಚನೆ ನೀಡಿದ ಜಲಮಂಡಳಿ

ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ 510 ರೂ. ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ 650 ರೂ. ದರ ಫಿಕ್ಸ್ ಮಾಡಲಾಗಿದೆ. ಜಲಮಂಡಳಿ ಈ ಹಿಂದೆ 600 ರಿಂದ 1,200 ಲೀಟರ್​ ವಾಟರ್​ ಟ್ಯಾಂಕರ್​ಗಳಿಗೂ ಮಾತ್ರ ದರ ನಿಗದಿ ಮಾಡಿತ್ತು. ಇದೀಗ 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೆ ದರ ನಿಗದಿ ಮಾಡಿದೆ. ಜಿಎಸ್​​ಟಿ ಸೇರಿಸಿ ಈ ದರ ನಿಗದಿ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುವ ಸಂಬಂಧ ಇತ್ತೀಚೆಗಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ, ನೀರಿನ ಟ್ಯಾಂಕರ್‌ಗಳ ಮಾಲೀಕರು ಮಾರ್ಚ್​ 7ರ ಗಡುವಿನ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ದರ ನಿಗದಿ ಸಂಬಂಧ ಈ ಸೂಚನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!