AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Water Crisis: ಬೆಂಗಳೂರು, ಉಚಿತ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು

ಬೆಂಗಳೂರು ನಗರವು ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಕಾರಣ ನೀರಿನ ದುರ್ಬಳಕೆ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಠಿಣ ಕ್ರಮಕ್ಕೆ ಮುಂದಾಗಿದೆ. ಜಲ ಮಂಡಳಿಯು ಉಚಿತವಾಗಿ ಸರಬರಾಜು ಮಾಡುವ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

Bangalore Water Crisis: ಬೆಂಗಳೂರು, ಉಚಿತ ನೀರನ್ನು ಮಾರಾಟ ಮಾಡಿದ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 26, 2024 | 9:08 AM

ಬೆಂಗಳೂರು, ಮಾರ್ಚ್​ 26: ಉಚಿತವಾಗಿ ಪೂರೈಸಬೇಕಾದ ನೀರನ್ನು ದುರ್ಬಳಕೆ ಮಾಡಿದ ಆರೋಪದಲ್ಲಿ ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದೆ. ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಉಚಿತವಾಗಿ ನೀರು ಪೂರೈಸುವುದಕ್ಕಾಗಿ ಮಂಡಳಿಯು ಖಾಸಗಿ ಟ್ಯಾಂಕರ್ (Private Tanker) ಅನ್ನು ತಾತ್ಕಾಲಿಕವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು. ಅದರಂತೆ ನೀರು ಪೂರೈಸಲು ಚಾಲಕನಿಗೆ ಸೂಚಿಸಲಾಗಿತ್ತು ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.

ವಾರ್ಡ್​ ಸಂಖ್ಯೆ 130ರಲ್ಲಿ ನೀರಿನ ತೀವ್ರ ಅಭಾವ ಇರುವುದು ಗೊತ್ತಾಗಿತ್ತು. ಆ ವಾರ್ಡ್‌ಗೆ ಚಾಲಕ ನೀರು ಸರಬರಾಜು ಮಾಡಬೇಕಾಗಿತ್ತು. ಸೂಚನೆಯನ್ನು ಪಾಲಿಸುವ ಬದಲು ಚಾಲಕ ವಾಣಿಜ್ಯ ಉದ್ದೇಶಕ್ಕಾಗಿ ವಾರ್ಡ್ ಸಂಖ್ಯೆ 14 ರಲ್ಲಿನ ಸಂಸ್ಥೆಗೆ ನೀರನ್ನು ಮಾರಾಟ ಮಾಡಿದ್ದಾರೆ. ಆದ್ದರಿಂದ, ನಾವು ಅವರ ವಿರುದ್ಧ ದೂರು ನೀಡಿದ್ದೇವೆ ಎಂದು ಮಂಡಳಿ ತಿಳಿಸಿದೆ.

ನಗರದಲ್ಲಿನ ನೀರಿನ ಕೊರತೆ ನೀಗಿಸಲು ಹಲವು ಖಾಸಗಿ ಟ್ಯಾಂಕರ್‌ಗಳನ್ನು ನಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ. ಖಾಸಗಿ ಟ್ಯಾಂಕರ್​​ಗಳು ನೀರಿನ ದುರ್ಬಳಕೆಯನ್ನು ಮಾಡಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನೀರಿನ ದುರುಪಯೋಗದ ವಿರುದ್ಧ ಎಲ್ಲಾ ಖಾಸಗಿ ಟ್ಯಾಂಕರ್ ಮಾಲೀಕರಿಗೆ ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ, ಅಂತರ್ಜಲ ಮಟ್ಟವನ್ನು ಸುಧಾರಿಸುವುದಕ್ಕಾಗಿ ಕೆಂಗೇರಿ ಸೇರಿದಂತೆ ನಗರದ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಜಲ ಮಂಡಳಿ ಭರ್ತಿ ಮಾಡುತ್ತಿದೆ. ಹೀಗಾಗಿ ಈ ಕೆರೆಗಳ ನೀರನ್ನು ನೇರವಾಗಿ ಬಳಸದಂತೆ ನಾಗರಿಕರಿಗೆ ಜಲ ಮಂಡಳಿ ಎಚ್ಚರಿಕೆ ನೀಡಿದೆ.

ಕೆರೆಗಳನ್ನು ಸಂಸ್ಕರಿಸಿದ ನೀರಿನಿಂದ ತುಂಬಿಸುತ್ತಿರುವಾಗ, ಅದನ್ನು ನೇರ ಬಳಕೆ ಅಥವಾ ಬಳಕೆಗೆ ಬಳಸಲಾಗುವುದಿಲ್ಲ. ಆದ್ದರಿಂದ, ಜನರು ಇದನ್ನು ಬಳಸದಂತೆ ವಿನಂತಿಸಲಾಗಿದೆ ಮಂಡಳಿಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ

ನೀರಿನ ದುರುಪಯೋಗದ ಮೇಲೆ ಜಲಮಂಡಳಿ ನಗರದಾದ್ಯಂತ ತೀವ್ರ ನಿಗಾ ಇರಿಸಿದೆ. ನಿಯಮ ಉಲ್ಲಂಘಿಸಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ. ನಗರದಲ್ಲಿ ಒಂದೆರಡು ಹೋಟೆಲ್‌ಗಳು ಪೂಲ್ ಪಾರ್ಟಿಗಳು ಮತ್ತು ರೈನ್ ಡ್ಯಾನ್ಸ್‌ಗಳನ್ನು ಯೋಜಿಸಿ ಪ್ರಕಟಣೆ ಹೊರಡಿಸಿದ್ದವು. ಆದರೆ, ಜಲ ಮಂಡಳಿಯ ಸೂಚನೆಯ ನಂತರ ಪ್ರಕಟಣೆಯನ್ನು ಹಿಂತೆಗೆದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ