AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹೇಳಿದ್ದೇನು?

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ರಾಜ್ಯ ಸರ್ಕಾರ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ನಡುವೆ ತುರ್ತು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ನೀರು ಸರಬರಾಜು ಮಂಡಳಿ ಅಧ್ಯಕ್ಷರು ಹೇಳಿದ್ದೇನು?
ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ: ಯಾವುದೇ ಆತಂಕ ಬೇಡ ಎಂದ BWSSB ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್
TV9 Web
| Edited By: Rakesh Nayak Manchi|

Updated on:Mar 09, 2024 | 6:09 PM

Share

ಬೆಂಗಳೂರು, ಮಾ.9: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ಬಹುತೇಕ ಭಾಗಗಳಲ್ಲಿ ನೀರಿಗೆ (Water Problem) ಹಾಹಾಕಾರ ಎದ್ದಿದೆ. ರಾಜ್ಯ ಸರ್ಕಾರ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ನಡುವೆ ತುರ್ತು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ಹೇಳಿದ್ದಾರೆ.

ನಮ್ಮ ಬಳಿ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಹೀಗಾಗಿ ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ ಎಂದು ರಾಮ್ ಪ್ರಸಾದ್ ಮನವಿ ಮಾಡಿದರು. 1470 ಎಂಎಲ್‌ಡಿ ನೀರು ಪಂಪ್‌ ಮಾಡಲು ಅವಕಾಶವಿದೆ. ನಮ್ಮ ಕೆಪಾಸಿಟಿಗಿಂತ 20 ಟಿಎಂಸಿ ನೀರು ಪಂಪ್ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಬೆಂಗಳೂರು ಹೊರ ವಲಯದ ನೀರಿನ ಅಭಾವ ತಪ್ಪಿಸಲು ಜಲಮಂಡಳಿಯಿಂದ ಹೊಸ ಪ್ಲ್ಯಾನ್​​

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರು ಅವಲಂಬಿಸಿಲ್ಲ. ಬೋರ್‌ವೆಲ್‌ನಲ್ಲಿ ಅಂತರ್ಜಲ ಕುಸಿತದಿಂದ ಕಾವೇರಿ ನೀರು ಅವಲಂಬನೆ ಮಾಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಹೊರವಲಯದಲ್ಲಿ ಸಮಸ್ಯೆ ಆಗುತ್ತಿದೆ. ಅಂತರ್ಜಲ ಹೆಚ್ಚಿಸಲು ಈಗಾಗಲೇ ತಜ್ಞರ ಜೊತೆ ಚರ್ಚಿಸಿದ್ದೇವೆ ಎಂದರು.

ಬೆಂಗಳೂರಿನಲ್ಲಿ ನೀರಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಟುತ್ತಿವೆ. ನೀರಿಲ್ಲಾ.. ನೀರಿಲ್ಲಾ.. ಎಂದು ಟ್ರೋಲ್​ಗಳನ್ನು ಮಾಡಲಾಗುತ್ತಿದೆ. ಆದರೆ, ಇದು ಸುಳ್ಳು. ಕೆಲವು ಅಪಾರ್ಟ್​​ಮೆಂಟ್​ಗಳಲ್ಲಿ ನೀರಿಗೆ ಕೊರತೆಯಾಗಿದೆ. ಇನ್ನುಳಿದಂತೆ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ. ಅಪಾರ್ಟ್​​ಮೆಂಟ್​ಗಳಲ್ಲಿ ಬೋರ್​ವೆಲ್​ಗಳಲ್ಲಿ ನೀರು ಬತ್ತಿದ ಹಿನ್ನೆಲೆ ಕಾವೇರಿ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಸದ್ಯ, 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದ್ದು, ಪ್ರತಿ ತಿಂಗಳಿಗೆ 1.54 ಟಿಎಂಸಿ ನೀರು ಅವಶ್ಯಕತೆಯಿದೆ ಎಂದರು. 1992 ರಿಂದ ಕಾವೇರಿ ನೀರು ತರಲು 4 ಹಂತದ ಪ್ರಾಜೆಕ್ಟ್ ಮಾಡಿದ್ದೇವೆ. ಈಗ ಐದನೇ ಪ್ರಾಜೆಕ್ಟ್ ಆರಂಭಿಸಲಾಗಿದೆ ಎಂದರು.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Sat, 9 March 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?