AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Crisis: ಬೆಂಗಳೂರು ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳಿಗೆ ಹೆಚ್ಚಿದ ಬೇಡಿಕೆ

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತೀವ್ರಗೊಂಡಿರುವ ಕಾರಣ ವರ್ಕ್ ಫ್ರಂ ಹೋಂ ಮತ್ತು ಆನ್ಲೈನ್ ತರಗತಿಗಳಿಗೆ ಬೇಡಿಕೆ ಹೆಚ್ಚಾಗಿದೆ. ನೀರನ್ನು ಉಳಿಸುವ ನಿಟ್ಟಿನಲ್ಲಿ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಐಟಿ ಕ್ಷೇತ್ರದ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನೀಡಬೇಕು ಎಂದು ಅನೇಕರು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.

Bengaluru Water Crisis: ಬೆಂಗಳೂರು ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳಿಗೆ ಹೆಚ್ಚಿದ ಬೇಡಿಕೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Mar 11, 2024 | 7:22 AM

ಬೆಂಗಳೂರು, ಮಾರ್ಚ್ 11: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿರುವುದರ ಮಧ್ಯೆ ಮಳೆಗಾಲ ಆರಂಭವಾಗುವ ವರೆಗೆ ವರ್ಕ್ ಫ್ರಂ ಹೋಮ್ (Work From Home) ಹಾಗೂ ಆನ್​ಲೈನ್ ತರಗತಿಗಳ (Online Classes) ಆಯ್ಕೆ ನೀಡುವಂತೆ ನಗರದ ನಿವಾಸಿಗಳಿಂದ ಆಗ್ರಹ ವ್ಯಕ್ತವಾಗಿದೆ. ಕಳೆದ ಎರಡು ವಾರಗಳಿಂದ ತೀವ್ರ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ ತಾಪಮಾನ ಏರಿಕೆಯಾಗುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ನೀರನ್ನು ಉಳಿಸುವುದರ ಜತೆಗೆ ನೌಕರರು ಮತ್ತು ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಆನ್‌ಲೈನ್ ತರಗತಿಗಳನ್ನು ಮುಂದುವರಿಸಲು, ಮನೆಯಿಂದಲೇ ಕೆಲಸದ ಅವಕಾಶ ನೀಡುವಂತೆ ಐಟಿ ಕ್ಷೇತ್ರದ ಉದ್ಯೋಗಿಗಳು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಏತನ್ಮಧ್ಯೆ, ಐಟಿ ಕಂಪನಿಗಳಿಗೆ ಮನೆಯಿಂದ ಕೆಲಸವನ್ನು ಕಡ್ಡಾಯಗೊಳಿಸುವಂತೆ ಮತ್ತು ಶಾಲೆಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಸೂಚನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಅನೇಕ ಮನವಿಗಳು ಸಲ್ಲಿಕೆಯಾಗಿವೆ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಮಾಡಿದಂತೆಯೇ ನೀರಿನ ಬಿಕ್ಕಟ್ಟಿನ ಸಮಯದಲ್ಲಿಯೂ ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳು ಸೂಕ್ತ ಎಂದು ಬೆಂಗಳೂರಿಗರು ಅಭಿಪ್ರಾಯಪಟ್ಟಿದ್ದಾರೆ.

2023 ರ ಮುಂಗಾರಿನಲ್ಲಿ ಮಳೆ ಕೊರತೆಯ ಕಾರಣ ಕರ್ನಾಟಕದಲ್ಲಿ, ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಉಲ್ಬಣಗೊಂಡಿದೆ.

ಈ ಮಧ್ಯೆ ಮಳೆ ಕೊರತೆಗೆ ಎಲ್ ನಿನೋ ಪರಿಣಾಮ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಈ ವರ್ಷ ಬೇಸಿಗೆ ಹೆಚ್ಚು ತೀವ್ರವಾಗಿರುವ ಸಾಧ್ಯತೆ ಇದೆ ಎಂದು ಇಲಾಖೆ ಅಂದಾಜಿಸಿದೆ. ಫೆಬ್ರವರಿ 10 ರವರೆಗೆ ರಾಜ್ಯ ಸರ್ಕಾರವು ಮಾಡಿದ ಮೌಲ್ಯಮಾಪನದ ಪ್ರಕಾರ, ಮುಂಬರುವ ತಿಂಗಳುಗಳಲ್ಲಿ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ ಕರ್ನಾಟಕದಾದ್ಯಂತ ಸುಮಾರು 7,082 ಗ್ರಾಮಗಳು ಮತ್ತು 1,193 ವಾರ್ಡ್‌ಗಳು ಕುಡಿಯುವ ನೀರಿನ ಸಮಸ್ಯೆಗೆ ಗುರಿಯಾಗಲಿವೆ.

ಸುಮಾರು 50 ಪ್ರತಿಶತದಷ್ಟು ಬೋರ್‌ವೆಲ್‌ಗಳು ಬತ್ತಿ ಹೋಗಿರುವ ನಗರದ ಅಂತರ್ಜಲ ಮೂಲಗಳನ್ನು ಮರುಪೂರಣಗೊಳಿಸಲು ಬೆಂಗಳೂರಿನ ಅಧಿಕಾರಿಗಳು ಒಣಗುತ್ತಿರುವ ಕೆರೆಗಳಿಗೆ ದಿನಕ್ಕೆ 1,300 ಮಿಲಿಯನ್ ಲೀಟರ್ ಶುದ್ಧೀಕರಿಸಿದ ನೀರನ್ನು ಮರುಪೂರಣಗೊಳಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್

ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟಿನಲ್ಲಿ ಬೇಸಿಗೆಯ ಕಾರಣ ಸಮರ್ಪಕ ನೀರು ಇಲ್ಲದ ಕಾರಣ ಪರಿಸ್ಥಿತಿ ಈ ವರ್ಷ ಭೀಕರವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ