AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Crisis: ಬೇಸಗೆಯಲ್ಲಿ ಬೆಂಗಳೂರಿನಲ್ಲಿ ನೀರು ಮಿತ ಬಳಕೆಗೆ ಏನೇನು ಮಾಡಬಹುದು? ಇಲ್ಲಿದೆ ಸಲಹೆ

ಬೆಂಗಳೂರಿನಲ್ಲಿ ಬೇಸಗೆ ಆರಂಭದ ಸಂದರ್ಭದಲ್ಲೇ ಈ ವರ್ಷ ನೀರಿನ ಬಿಕ್ಕಟ್ಟು ತೀವ್ರಗೊಂಡಿದೆ. ಕುಡಿಯುವ ನೀರಿಗೂ ತತ್ವಾರ ಎದುರಾಗುವ ಆತಂಕ ಹೆಚ್ಚಾಗಿದೆ. ಹೀಗಾಗಿ ಈಗಲೇ ಎಚ್ಚೆತ್ತುಕೊಂಡು ನೀರಿನ ಮಿತ ಬಳಕೆ ಮಾಡುವುದೊಳಿತು. ಬೇಸಗೆ ಸಂದರ್ಭದಲ್ಲಿ ಹೇಗೆಲ್ಲ ನೀರು ಉಳಿಸಬಹುದು? ಕೆಲವೊಂದು ಸಲಹೆ ಇಲ್ಲಿವೆ.

Bengaluru Water Crisis: ಬೇಸಗೆಯಲ್ಲಿ ಬೆಂಗಳೂರಿನಲ್ಲಿ ನೀರು ಮಿತ ಬಳಕೆಗೆ ಏನೇನು ಮಾಡಬಹುದು? ಇಲ್ಲಿದೆ ಸಲಹೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Mar 07, 2024 | 11:40 AM

Share

ಬೆಂಗಳೂರು, ಮಾರ್ಚ್​ 7: ಬೇಸಗೆ ಬರುತ್ತಿದ್ದಂತೆಯೇ ಬೆಂಗಳೂರಿನಲ್ಲಿ (Bengaluru) ನೀರಿನ ಬಿಕ್ಕಟ್ಟು ಮತ್ತೆ (Water Crisis) ಸೃಷ್ಟಿಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ನೀರಿನ ಸಮಸ್ಯೆ ಎದುರಾಗಿದೆ. ಆದರೆ, ಬರ ಪರಿಸ್ಥಿತಿಯಿಂದಾಗಿ ಈ ವರ್ಷ ಬೇಸಗೆ ಆರಂಭದ ಸಂದರ್ಭದಲ್ಲೇ ರಾಜ್ಯ ರಾಜಧಾನಿಯ ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಹಲವೆಡೆ ನೀರಿನ ಸರಬರಾಜಿನಲ್ಲಿಯೂ ವ್ಯತ್ಯಯವಾಗಿದೆ. ಪರಿಸ್ಥಿತಿ ಹೀಗಿರುವಾಗ, ನೀರಿನ ಮಿತ ಬಳಕೆಯ ಬಗ್ಗೆಯೂ ಗಮನ ಹರಿಸಬೇಕಿದೆ.

  1. ಮಿತವಾಗಿ ನೀರನ್ನು ಬಳಕೆ ಮಾಡುವುದು, ಮಳೆಗಾಲದಲ್ಲಿ ಮಳೆ ನೀರಿನ ಸಂಗ್ರಹ, ಮಳೆ ನೀರು ಕೊಯ್ಲಿನಂಥ ವಿಧಾನಗಳನ್ನು ಅನುಸರಿಸುವ ಮೂಲಕವೂ ಪ್ರತಿ ವರ್ಷ ಎದುರಾಗುವ ನೀರಿನ ಸಮಸ್ಯೆ ಬಗೆಹರಿಸಲು ಯತ್ನಿಸಬಹುದು. ಆದರೆ, ಈ ಬೇಸಗೆಯ ಸಂದರ್ಭದಲ್ಲಿ ನೀರಿನ ಉಳಿಕೆಗೆ ನಾವೇನು ಮಾಡಬಹುದು ಎಂಬ ಒಂದಷ್ಟು ಸಲಹೆಗಳು ಇಲ್ಲಿವೆ.
  2. ಪ್ರತಿಯೊಂದು ಮನೆಯವರೂ ಸಹ ಓವರ್‌ಹೆಡ್ ಟ್ಯಾಂಕ್ ತುಂಬಿ ಹರಿಯದಂತೆ ನೋಡಿಕೊಳ್ಳಬೇಕಾಗಿದೆ. ಈ ಮೂಲಕ ನೀರು ಪೋಲಾಗುವುದನ್ನು ತಪ್ಪಿಸಬೇಕು.
  3. ನಿಮ್ಮ ಕಾರು ಅಥವಾ ಇತರ ವಾಹನಗಳನ್ನು ಹೊರಾಂಗಣದಲ್ಲಿ ಪಾರ್ಕ್ ಮಾಡುವುದಿದ್ದರೆ ಕವರ್ ಹಾಕಿ ಮುಚ್ಚಿಡಬಹುದು. ಇದರಿಂದ ಅದನ್ನು ಪ್ರತಿದಿನ ತೊಳೆಯಲು ನೀರು ವ್ಯಯಿಸುವ ಅಗತ್ಯವಿರುವುದಿಲ್ಲ.
  4. ಮನೆಯಲ್ಲಿರುವ ಸೋರುವ ನೀರಿನ ಟ್ಯಾಪ್‌ಗಳನ್ನು ತಕ್ಷಣವೇ ಸರಿಪಡಿಸಿ. ಇದರಿಂದ ನೀರು ಪೋಲಾಗುವುದನ್ನು ತಡೆಗಟ್ಟಬಹುದು.
  5. ವಾಟರ್ ಪ್ಯೂರಿಫೈಯರ್ ಅಥವಾ ಆರ್​​ಒ ದಿಂದ ಹೊರಹೋಗುವ ಹೆಚ್ಚುವರಿ ನೀರನ್ನು ಒಂದು ಪಾತ್ರೆಯಲ್ಲಿ ಸಂಗ್ರಹಿಸಿಟ್ಟುಕೊಂಡು ಪಾತ್ರೆ ತೊಳೆಯುವಂಥ ಕೆಲಸಗಳಿಗೆ ಬಳಸಿಕೊಳ್ಳಬಹುದು.
  6. ಸಿಂಕ್​ನಲ್ಲಿ ಪಾತ್ರೆ ತೊಳೆಯುವಾಗ ಟ್ಯಾಪ್ ನೀರು ಬಿಟ್ಟುಕೊಂಡೇ ಇರುವ ಅಭ್ಯಾಸ ಅನಕರಿಗೆ ಇರುತ್ತದೆ. ಅದನ್ನು ತಪ್ಪಿಸಿ. ಎಷ್ಟು ಬೇಕೋ ಅಷ್ಟೇ ನೀರನ್ನು ಬಳಸಿ.
  7. ಉದ್ಯಾನಗಳಲ್ಲಿ ಅಥವಾ ಮನೆಯ ಕೈತೋಟಗಳಿಗೆ ನೀರುಣಿಸುವಾಗ ಮುಂಜಾನೆ ಅಥವಾ ಸಂಜೆ ವೇಳೆಗೆ ಹೆಚ್ಚು ಆದ್ಯತೆ ನೀಡಿ. ಈ ವೇಳೆಯಲ್ಲಿ ಸಸ್ಯಗಳಿಗೆ ನೀರು ಹಾಕುವುದರಿಂದ ಹೆಚ್ಚು ನೀರು ಆವಿಯಾಗಿ ನಷ್ಟವಾಗುವುದನ್ನು ಕಡಿಮೆ ಮಾಡಬಹುದು.
  8. ಕಚೇರಿಗಳಲ್ಲಿ ಇರುವ ಸಂದರ್ಭದಲ್ಲಿ ವೃಥಾ ನೀರು ಪೋಲು ಮಾಡಬೇಡಿ. ಮುಖ ತೊಳೆಯುವಂಥ ಸಂದರ್ಭಗಳಲ್ಲಿ ಟ್ಯಾಪ್​ನಲ್ಲಿ ನೀರನ್ನು ಬಿಟ್ಟುಕೊಂಡೇ ಇರಬೇಡಿ. ಬೇಕಿದ್ದಷ್ಟೇ ನೀರು ಬಳಸಿಕೊಂಡು ಟ್ಯಾಪ್ ಬಂದ್ ಮಾಡಿ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಂಡು ಕೇಳರಿಯದ ನೀರಿನ ಬಿಕ್ಕಟ್ಟು, ಇಲ್ಲಿವೆ ಪ್ರಮುಖ ಕಾರಣಗಳು

ಇದಿನ್ನೂ ಬೇಸಗೆಯ ಆರಂಭದ ಸಂದರ್ಭ. ಈಗಲೇ ನೀರಿನ ಬಿಕ್ಕಟ್ಟು ತೀವ್ರಗೊಂಡಿದ ಕಾರಣ ನೀರನ್ನು ಮಿತ ಬಳಕೆ ಮಾಡುವ ಮೂಲಕ ಮುಂದಿನ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿರುವುದು ಉತ್ತಮ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!