AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಲಮಂಡಳಿಯ ಬೋರ್‌ವೆಲ್‌ಗಳ ನಿರ್ವಹಣೆಗೆ ರೋಬೋಟಿಕ್ ತಂತ್ರಜ್ಞಾನ

ಬೆಂಗಳೂರಿನ ಕೆಲವು ಬೋರ್‌ವೆಲ್‌ಗಳು ನಿರ್ವಹಣೆ ಕೊರತೆ ಹಾಗೂ ತಾಂತ್ರಿಕ ದೋಷದಿಂದ ಕೆಲಸ ಮಾಡುವುದನ್ನು ನಿಲ್ಲಿಸಿವೆ. ನೀರು ಸಿಗದಿದ್ದಾಗ ಬೋರ್‌ವೆಲ್‌ಗಳನ್ನು ಆನ್ ಮಾಡಿ ಪಂಪ್‌ಸೆಟ್‌ಗಳನ್ನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸಮಯ ಓಡಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಕಾರ್ಯ ಸ್ಥಗಿತಗೊಂಡಿವೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ವಿ ತಿಳಿಸಿದರು.

ಬೆಂಗಳೂರು ಜಲಮಂಡಳಿಯ ಬೋರ್‌ವೆಲ್‌ಗಳ ನಿರ್ವಹಣೆಗೆ ರೋಬೋಟಿಕ್ ತಂತ್ರಜ್ಞಾನ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ವಿವೇಕ ಬಿರಾದಾರ
|

Updated on: Mar 19, 2024 | 7:37 AM

Share

ಬೆಂಗಳೂರು, ಮಾರ್ಚ್​ 19: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಯು ತನ್ನ 11,000 ಬೋರ್‌ವೆಲ್‌ಗಳ (Borewells) ನಿರ್ವಹಣೆಗಾಗಿ ರೋಬೋಟಿಕ್ ತಂತ್ರಜ್ಞಾನವನ್ನು (Robotic technology) ಅಳವಡಿಸಿಕೊಂಡಿದೆ. ಈ ರೋಬೋಟಿಕ್​ ತಂತ್ರಜ್ಞಾನದ ಮೂಲಕ ಬೋರ್‌ವೆಲ್‌ಗಳ ಕಾರ್ಯ ನಿರ್ವಹಣೆಯನ್ನು ತಿಳಿಯಬಹುದು. ಜೊತೆ ಅವುಗಳ ಕಾರ್ಯ ನಿರ್ವಹಣೆಯ ಸಾಮರ್ಥ್ಯವನ್ನು ಕೂಡ ಹೆಚ್ಚಿಸಬಹುದು. ಅಲ್ಲದೆ ಈ ರೋಬೋಟಿಕ್​ ತಂತ್ರಜ್ಞಾನದ ಮೂಲಕ ಬೋರ್​ವೆಲ್​ಗಳ ತಾಂತ್ರಿಕ ವೈಫಲ್ಯಗಳನ್ನು ಕಡಿಮೆ ಮಾಡಬಹುದು.

ನಗರದ ಕೆಲವು ಬೋರ್‌ವೆಲ್‌ಗಳು ನಿರ್ವಹಣೆ ಕೊರತೆ ಹಾಗೂ ತಾಂತ್ರಿಕ ದೋಷದಿಂದ ಕೆಲಸ ಮಾಡುವುದನ್ನು ನಿಲ್ಲಿಸಿವೆ. ನೀರು ಸಿಗದಿದ್ದಾಗ ಬೋರ್‌ವೆಲ್‌ಗಳನ್ನು ಆನ್ ಮಾಡಿ ಪಂಪ್‌ಸೆಟ್‌ಗಳನ್ನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸಮಯ ಓಡಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಕಾರ್ಯ ಸ್ಥಗಿತಗೊಂಡಿವೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ವಿ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿಗೆ ದಿನಕ್ಕೆಷ್ಟು ಬೇಕು ನೀರು, ಎಷ್ಟಿದೆ ಕೊರತೆ: ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ರೊಬೊಟಿಕ್ ತಂತ್ರಜ್ಞಾನವು BWSSB ಪಂಪ್ ಸೆಟ್‌ನ ಸ್ಥಿತಿ ತಿಳಿಯುತ್ತದೆ. ಮತ್ತು ಅಧಿಕಾರಿಗಳು ಕೂತ ಜಾಗದಿಂದಲೇ ಬೋರ್​ವೆಲ್​ಗಳನ್ನು ಆನ್ ಮತ್ತು ಆಫ್ ಸಹ ಮಾಡಬಹುದು. ನಿರಂತರ ಮೇಲ್ವಿಚಾರಣೆಯಿಂದ ಬೋರ್‌ವೆಲ್‌ಗಳು ಪದೇ ಪದೇ ಹಾಳಾಗುವುದನ್ನು ತಡೆಯಬಹುದು. ಮತ್ತು ನಾಗರಿಕರಿಗೆ ಉಂಟಾಗುವ ಅನಾನುಕೂಲತೆಯನ್ನು ಕಡಿಮೆ ಮಾಡಬಹದು. ನಗರದಲ್ಲಿನ ಬೋರ್‌ವೆಲ್‌ಗಳ ಸ್ಥಿತಿಯ ಬಗ್ಗೆ ಸಮೀಕ್ಷೆ ನಡೆಸಿ, ನಿಷ್ಕ್ರಿಯಗೊಂಡವುಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿಷ್ಕ್ರಿಯ ಬೋರ್‌ವೆಲ್‌ಗಳನ್ನು ಮಳೆನೀರು ಕೊಯ್ಲು (RWH) ರಚನೆಗಳಾಗಿ ಪರಿವರ್ತಿಸುವ ಬಗ್ಗೆ ಯೋಚಿಸಲಾಗುತ್ತಿದೆ. ಬೋರ್‌ವೆಲ್‌ನಿಂದ ನೀರು ಬರುತ್ತಿರದಿದ್ದರೇ ಮತ್ತು ಅವುಗಳನ್ನು ಪುನರುಜ್ಜೀವನಗೊಳಿಸಲು ನಮಗೆ ಸಾಧ್ಯವಾಗದಿದ್ದರೆ, ಅವುಗಳನ್ನು ಮಳೆನೀರು ಕೊಯ್ಲಿಗೆ ಪರಿವರ್ತಿಸಬಹುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್