AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಲಮಂಡಳಿಯ ಬೋರ್‌ವೆಲ್‌ಗಳ ನಿರ್ವಹಣೆಗೆ ರೋಬೋಟಿಕ್ ತಂತ್ರಜ್ಞಾನ

ಬೆಂಗಳೂರಿನ ಕೆಲವು ಬೋರ್‌ವೆಲ್‌ಗಳು ನಿರ್ವಹಣೆ ಕೊರತೆ ಹಾಗೂ ತಾಂತ್ರಿಕ ದೋಷದಿಂದ ಕೆಲಸ ಮಾಡುವುದನ್ನು ನಿಲ್ಲಿಸಿವೆ. ನೀರು ಸಿಗದಿದ್ದಾಗ ಬೋರ್‌ವೆಲ್‌ಗಳನ್ನು ಆನ್ ಮಾಡಿ ಪಂಪ್‌ಸೆಟ್‌ಗಳನ್ನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸಮಯ ಓಡಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಕಾರ್ಯ ಸ್ಥಗಿತಗೊಂಡಿವೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ವಿ ತಿಳಿಸಿದರು.

ಬೆಂಗಳೂರು ಜಲಮಂಡಳಿಯ ಬೋರ್‌ವೆಲ್‌ಗಳ ನಿರ್ವಹಣೆಗೆ ರೋಬೋಟಿಕ್ ತಂತ್ರಜ್ಞಾನ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 19, 2024 | 7:37 AM

Share

ಬೆಂಗಳೂರು, ಮಾರ್ಚ್​ 19: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಯು ತನ್ನ 11,000 ಬೋರ್‌ವೆಲ್‌ಗಳ (Borewells) ನಿರ್ವಹಣೆಗಾಗಿ ರೋಬೋಟಿಕ್ ತಂತ್ರಜ್ಞಾನವನ್ನು (Robotic technology) ಅಳವಡಿಸಿಕೊಂಡಿದೆ. ಈ ರೋಬೋಟಿಕ್​ ತಂತ್ರಜ್ಞಾನದ ಮೂಲಕ ಬೋರ್‌ವೆಲ್‌ಗಳ ಕಾರ್ಯ ನಿರ್ವಹಣೆಯನ್ನು ತಿಳಿಯಬಹುದು. ಜೊತೆ ಅವುಗಳ ಕಾರ್ಯ ನಿರ್ವಹಣೆಯ ಸಾಮರ್ಥ್ಯವನ್ನು ಕೂಡ ಹೆಚ್ಚಿಸಬಹುದು. ಅಲ್ಲದೆ ಈ ರೋಬೋಟಿಕ್​ ತಂತ್ರಜ್ಞಾನದ ಮೂಲಕ ಬೋರ್​ವೆಲ್​ಗಳ ತಾಂತ್ರಿಕ ವೈಫಲ್ಯಗಳನ್ನು ಕಡಿಮೆ ಮಾಡಬಹುದು.

ನಗರದ ಕೆಲವು ಬೋರ್‌ವೆಲ್‌ಗಳು ನಿರ್ವಹಣೆ ಕೊರತೆ ಹಾಗೂ ತಾಂತ್ರಿಕ ದೋಷದಿಂದ ಕೆಲಸ ಮಾಡುವುದನ್ನು ನಿಲ್ಲಿಸಿವೆ. ನೀರು ಸಿಗದಿದ್ದಾಗ ಬೋರ್‌ವೆಲ್‌ಗಳನ್ನು ಆನ್ ಮಾಡಿ ಪಂಪ್‌ಸೆಟ್‌ಗಳನ್ನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸಮಯ ಓಡಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಕಾರ್ಯ ಸ್ಥಗಿತಗೊಂಡಿವೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ವಿ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿಗೆ ದಿನಕ್ಕೆಷ್ಟು ಬೇಕು ನೀರು, ಎಷ್ಟಿದೆ ಕೊರತೆ: ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ರೊಬೊಟಿಕ್ ತಂತ್ರಜ್ಞಾನವು BWSSB ಪಂಪ್ ಸೆಟ್‌ನ ಸ್ಥಿತಿ ತಿಳಿಯುತ್ತದೆ. ಮತ್ತು ಅಧಿಕಾರಿಗಳು ಕೂತ ಜಾಗದಿಂದಲೇ ಬೋರ್​ವೆಲ್​ಗಳನ್ನು ಆನ್ ಮತ್ತು ಆಫ್ ಸಹ ಮಾಡಬಹುದು. ನಿರಂತರ ಮೇಲ್ವಿಚಾರಣೆಯಿಂದ ಬೋರ್‌ವೆಲ್‌ಗಳು ಪದೇ ಪದೇ ಹಾಳಾಗುವುದನ್ನು ತಡೆಯಬಹುದು. ಮತ್ತು ನಾಗರಿಕರಿಗೆ ಉಂಟಾಗುವ ಅನಾನುಕೂಲತೆಯನ್ನು ಕಡಿಮೆ ಮಾಡಬಹದು. ನಗರದಲ್ಲಿನ ಬೋರ್‌ವೆಲ್‌ಗಳ ಸ್ಥಿತಿಯ ಬಗ್ಗೆ ಸಮೀಕ್ಷೆ ನಡೆಸಿ, ನಿಷ್ಕ್ರಿಯಗೊಂಡವುಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿಷ್ಕ್ರಿಯ ಬೋರ್‌ವೆಲ್‌ಗಳನ್ನು ಮಳೆನೀರು ಕೊಯ್ಲು (RWH) ರಚನೆಗಳಾಗಿ ಪರಿವರ್ತಿಸುವ ಬಗ್ಗೆ ಯೋಚಿಸಲಾಗುತ್ತಿದೆ. ಬೋರ್‌ವೆಲ್‌ನಿಂದ ನೀರು ಬರುತ್ತಿರದಿದ್ದರೇ ಮತ್ತು ಅವುಗಳನ್ನು ಪುನರುಜ್ಜೀವನಗೊಳಿಸಲು ನಮಗೆ ಸಾಧ್ಯವಾಗದಿದ್ದರೆ, ಅವುಗಳನ್ನು ಮಳೆನೀರು ಕೊಯ್ಲಿಗೆ ಪರಿವರ್ತಿಸಬಹುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?