Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಲಮಂಡಳಿಯ ಬೋರ್‌ವೆಲ್‌ಗಳ ನಿರ್ವಹಣೆಗೆ ರೋಬೋಟಿಕ್ ತಂತ್ರಜ್ಞಾನ

ಬೆಂಗಳೂರಿನ ಕೆಲವು ಬೋರ್‌ವೆಲ್‌ಗಳು ನಿರ್ವಹಣೆ ಕೊರತೆ ಹಾಗೂ ತಾಂತ್ರಿಕ ದೋಷದಿಂದ ಕೆಲಸ ಮಾಡುವುದನ್ನು ನಿಲ್ಲಿಸಿವೆ. ನೀರು ಸಿಗದಿದ್ದಾಗ ಬೋರ್‌ವೆಲ್‌ಗಳನ್ನು ಆನ್ ಮಾಡಿ ಪಂಪ್‌ಸೆಟ್‌ಗಳನ್ನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸಮಯ ಓಡಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಕಾರ್ಯ ಸ್ಥಗಿತಗೊಂಡಿವೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ವಿ ತಿಳಿಸಿದರು.

ಬೆಂಗಳೂರು ಜಲಮಂಡಳಿಯ ಬೋರ್‌ವೆಲ್‌ಗಳ ನಿರ್ವಹಣೆಗೆ ರೋಬೋಟಿಕ್ ತಂತ್ರಜ್ಞಾನ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
Follow us
ವಿವೇಕ ಬಿರಾದಾರ
|

Updated on: Mar 19, 2024 | 7:37 AM

ಬೆಂಗಳೂರು, ಮಾರ್ಚ್​ 19: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಯು ತನ್ನ 11,000 ಬೋರ್‌ವೆಲ್‌ಗಳ (Borewells) ನಿರ್ವಹಣೆಗಾಗಿ ರೋಬೋಟಿಕ್ ತಂತ್ರಜ್ಞಾನವನ್ನು (Robotic technology) ಅಳವಡಿಸಿಕೊಂಡಿದೆ. ಈ ರೋಬೋಟಿಕ್​ ತಂತ್ರಜ್ಞಾನದ ಮೂಲಕ ಬೋರ್‌ವೆಲ್‌ಗಳ ಕಾರ್ಯ ನಿರ್ವಹಣೆಯನ್ನು ತಿಳಿಯಬಹುದು. ಜೊತೆ ಅವುಗಳ ಕಾರ್ಯ ನಿರ್ವಹಣೆಯ ಸಾಮರ್ಥ್ಯವನ್ನು ಕೂಡ ಹೆಚ್ಚಿಸಬಹುದು. ಅಲ್ಲದೆ ಈ ರೋಬೋಟಿಕ್​ ತಂತ್ರಜ್ಞಾನದ ಮೂಲಕ ಬೋರ್​ವೆಲ್​ಗಳ ತಾಂತ್ರಿಕ ವೈಫಲ್ಯಗಳನ್ನು ಕಡಿಮೆ ಮಾಡಬಹುದು.

ನಗರದ ಕೆಲವು ಬೋರ್‌ವೆಲ್‌ಗಳು ನಿರ್ವಹಣೆ ಕೊರತೆ ಹಾಗೂ ತಾಂತ್ರಿಕ ದೋಷದಿಂದ ಕೆಲಸ ಮಾಡುವುದನ್ನು ನಿಲ್ಲಿಸಿವೆ. ನೀರು ಸಿಗದಿದ್ದಾಗ ಬೋರ್‌ವೆಲ್‌ಗಳನ್ನು ಆನ್ ಮಾಡಿ ಪಂಪ್‌ಸೆಟ್‌ಗಳನ್ನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಸಮಯ ಓಡಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಕಾರ್ಯ ಸ್ಥಗಿತಗೊಂಡಿವೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ಡಾ. ರಾಮಪ್ರಸಾತ್ ಮನೋಹರ್ ವಿ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿಗೆ ದಿನಕ್ಕೆಷ್ಟು ಬೇಕು ನೀರು, ಎಷ್ಟಿದೆ ಕೊರತೆ: ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ರೊಬೊಟಿಕ್ ತಂತ್ರಜ್ಞಾನವು BWSSB ಪಂಪ್ ಸೆಟ್‌ನ ಸ್ಥಿತಿ ತಿಳಿಯುತ್ತದೆ. ಮತ್ತು ಅಧಿಕಾರಿಗಳು ಕೂತ ಜಾಗದಿಂದಲೇ ಬೋರ್​ವೆಲ್​ಗಳನ್ನು ಆನ್ ಮತ್ತು ಆಫ್ ಸಹ ಮಾಡಬಹುದು. ನಿರಂತರ ಮೇಲ್ವಿಚಾರಣೆಯಿಂದ ಬೋರ್‌ವೆಲ್‌ಗಳು ಪದೇ ಪದೇ ಹಾಳಾಗುವುದನ್ನು ತಡೆಯಬಹುದು. ಮತ್ತು ನಾಗರಿಕರಿಗೆ ಉಂಟಾಗುವ ಅನಾನುಕೂಲತೆಯನ್ನು ಕಡಿಮೆ ಮಾಡಬಹದು. ನಗರದಲ್ಲಿನ ಬೋರ್‌ವೆಲ್‌ಗಳ ಸ್ಥಿತಿಯ ಬಗ್ಗೆ ಸಮೀಕ್ಷೆ ನಡೆಸಿ, ನಿಷ್ಕ್ರಿಯಗೊಂಡವುಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿಷ್ಕ್ರಿಯ ಬೋರ್‌ವೆಲ್‌ಗಳನ್ನು ಮಳೆನೀರು ಕೊಯ್ಲು (RWH) ರಚನೆಗಳಾಗಿ ಪರಿವರ್ತಿಸುವ ಬಗ್ಗೆ ಯೋಚಿಸಲಾಗುತ್ತಿದೆ. ಬೋರ್‌ವೆಲ್‌ನಿಂದ ನೀರು ಬರುತ್ತಿರದಿದ್ದರೇ ಮತ್ತು ಅವುಗಳನ್ನು ಪುನರುಜ್ಜೀವನಗೊಳಿಸಲು ನಮಗೆ ಸಾಧ್ಯವಾಗದಿದ್ದರೆ, ಅವುಗಳನ್ನು ಮಳೆನೀರು ಕೊಯ್ಲಿಗೆ ಪರಿವರ್ತಿಸಬಹುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ