AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Water Crisis: ನೀರು ಉಳಿಸಲು ಜನಾಂದೋಲನ, ವಿಶೇಷ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

Save Water Campaign: ನೀರಿನ ಬಿಕ್ಕಟ್ಟನ್ನು ಎದುರಿಸುವ ಸಲುವಾಗಿ ಮತ್ತು ನೀರು ಉಳಿಸುವುದಕ್ಕಾಗಿ ಸರ್ಕಾರವು ಜನಾಂದೋಲನ ಹಮ್ಮಿಕೊಂಡಿದೆ.ಇದರ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಹಿತಿ ನೀಡಿದೆ. ನೀರು ಉಳಿಸುವ ವಿಶೇಷ ಕ್ರಮಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

Bangalore Water Crisis: ನೀರು ಉಳಿಸಲು ಜನಾಂದೋಲನ, ವಿಶೇಷ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Vinayak Hanamant Gurav
| Edited By: |

Updated on: Mar 21, 2024 | 2:21 PM

Share

ಬೆಂಗಳೂರು, ಮಾರ್ಚ್​ 21: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿರುವ ಕಾರಣ ನೀರಿನ ಬಳಕೆ ಕಡಿಮೆ ಮಾಡಲು ಮತ್ತು ಉಳಿಸುವುದಕ್ಕಾಗಿ ಸರ್ಕಾರ ಜನಾಂದೋಲನ (Save Water Campaign) ಹಮ್ಮಿಕೊಂಡಿದೆ. ಈ ಜನಾಂದೋಲನದ ಅಡಿಯಲ್ಲಿ ಕೈಗೊಳ್ಳಲಾಗಿರುವ ವಿಶೇಷ ಕ್ರಮಗಳ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾಹಿತಿ ನೀಡಿದೆ. ನೀರು ಉಳಿಸುವುದಕ್ಕಾಗಿ ಜನಾಂದೋಲನ ಮಾಡಲಾಗುತ್ತಿದೆ.ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಆಂದೋಲನ ನಡೆಸಲಾಗುತ್ತಿದ್ದು, ಇದರಡಿಯಲ್ಲಿ ವಿಶೇಷವಾಗಿ ಮೂರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.

ಜನಾಂದೋಲದ ಅಡಿಯಲ್ಲಿ ಕೈಗೊಳ್ಳಲಾಗಿರುವ ಪ್ರಮುಖ ಮೂರು ಕ್ರಮಗಳ ಮಾಹಿತಿ ಹೀಗಿದೆ;

  1. ಕಾವೇರಿ ನೀರಿನ ಬಳಕೆಗೆ ಹೆಚ್ಚು ಆದ್ಯತೆ ನೀಡಿ ಬೋರ್​ವೆಲ್ ನೀರು ಉಳಿತಾಯ ಮಾಡುವುದು. ಇದರಿಂದ ಶೇ 30-40 ರಷ್ಟು ನೀರಿನ ಕೊರತೆ ಕಡಿಮೆ ಮಾಡಬಹುದು ಎಂದು ಮಂಡಳಿ ತಿಳಿಸಿದೆ.
  2. ಸಂಸ್ಕರಿಸಿದ ನೀರು ಬಳಕೆ ಮಾಡುವುದು. ಸದ್ಯ 1350 ಎಮ್‌ಎಲ್​​ಡಿ (ಮಿಲಿಯನ್ ಲೀಟರ್ ಪರ್ ಡೇ) ಕಾವೇರಿ ನೀರು ಬೆಂಗಳೂರಿಗೆ ಸರಬರಾಜು ಆಗುತ್ತದೆ. 1300 ಎಮ್‌ಎಲ್​​ಡಿ ನೀರು ಎಸ್‌ಟಿಪಿ ಮೂಲಕ ಸಂಸ್ಕರಿಸಲಾಗುತ್ತದೆ. ಈ ನೀರನ್ನ ವಾಣಿಜ್ಯ ಉದ್ದೇಶಗಳಿಗೆ, ಕೈಗಾರಿಕೆಗಳಿಗೆ ಉಪಯೋಗ ಮಾಡಬಹುದು. ಬೆಂಗಳೂರಿನ ಐಪಿಎಲ್ ಮ್ಯಾಚ್‌ಗೆ ಪರಿಸರಸ್ನೇಹಿ (ಸಂಸ್ಕರಿಸಿದ) ನೀರು ಉಪಯೋಗ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನೀರಿನ ಅಭಾವದಿಂದ ಹೊರಬರಲು ಸಂಸ್ಕರಿಸಿದ ನೀರು ನೆರವಾಗಲಿದೆ. ಈಗಾಗಲೇ 49 ಸಂಸ್ಥೆಗಳು ಸಂಸ್ಕರಿಸಿದ ನೀರಿಗಾಗಿ ಮುಂದೆ ಬಂದಿವೆ. ಈ ಮೂಲಕ ಕುಡಿಯುವ ನೀರಿನ ಒತ್ತಡ ಕಡಿಮೆ ಮಾಡಬಹುದು.
  3. ಮರು ಬಳಕೆ ನೀರನ್ನು ಕೆರೆಗಳಿಗೆ ತುಂಬಿಸಿ ಅಂತರ್ಜಲ ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಶೇ 60 ರಷ್ಟು ಕಾವೇರಿಯಿಂದ ಹಾಗೂ ಶೇ 40 ಭೂಮಿಯಿಂದ ತಗೆದುಕೊಳ್ಳುತ್ತೇವೆ. ಭೂಮಿ ತಾಯಿಗೆ ನೀರನ್ನು ಮತ್ತೆ ಕೊಡಬೇಕು ಹೀಗಾಗಿ ಮಳೆ ನೀರು ಭೂಮಿಗೆ ವಾಪಸ್ ಕೊಡಬೇಕು. ಬೋರ್‌ವೆಲ್ ರಿಚಾರ್ಜ್ ಮಾಡಬೇಕು. ಒಂದು ಬೋರ್ ವೆಲ್ ಕೊರದರೆ ಎರಡು ಇಂಗು ಗುಂಡಿ ಕಡ್ಡಾಯ ಮಾಡಲಾಗಿದೆ ಎಂದು ಜಲ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಐಪಿಎಲ್ ಸ್ಥಳಾಂತರ ಇಲ್ಲ, ಚಿನ್ನಸ್ವಾಮಿ ಸ್ಟೇಡಿಯಂಗೆ ಸಂಸ್ಕರಿಸಿದ ನೀರು: ಜಲ ಮಂಡಳಿ ಭರವಸೆ

ಐಪಿಎಲ್ ಪಂದ್ಯಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಪಂದ್ಯದ ವೇಳೆ 75,000 ಲೀಟರ್ ಸಂಸ್ಕರಿಸಿದ ನೀರನ್ನು ಪೂರೈಸುವ ಭರವಸೆಯನ್ನು ಬಿಡಬ್ಲ್ಯುಎಸ್‌ಎಸ್‌ಬಿ ಈಗಾಗಲೇ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?