Bangalore Water Crisis: ನೀರು ಉಳಿಸಲು ಜನಾಂದೋಲನ, ವಿಶೇಷ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

Save Water Campaign: ನೀರಿನ ಬಿಕ್ಕಟ್ಟನ್ನು ಎದುರಿಸುವ ಸಲುವಾಗಿ ಮತ್ತು ನೀರು ಉಳಿಸುವುದಕ್ಕಾಗಿ ಸರ್ಕಾರವು ಜನಾಂದೋಲನ ಹಮ್ಮಿಕೊಂಡಿದೆ.ಇದರ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಹಿತಿ ನೀಡಿದೆ. ನೀರು ಉಳಿಸುವ ವಿಶೇಷ ಕ್ರಮಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

Bangalore Water Crisis: ನೀರು ಉಳಿಸಲು ಜನಾಂದೋಲನ, ವಿಶೇಷ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Mar 21, 2024 | 2:21 PM

ಬೆಂಗಳೂರು, ಮಾರ್ಚ್​ 21: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿರುವ ಕಾರಣ ನೀರಿನ ಬಳಕೆ ಕಡಿಮೆ ಮಾಡಲು ಮತ್ತು ಉಳಿಸುವುದಕ್ಕಾಗಿ ಸರ್ಕಾರ ಜನಾಂದೋಲನ (Save Water Campaign) ಹಮ್ಮಿಕೊಂಡಿದೆ. ಈ ಜನಾಂದೋಲನದ ಅಡಿಯಲ್ಲಿ ಕೈಗೊಳ್ಳಲಾಗಿರುವ ವಿಶೇಷ ಕ್ರಮಗಳ ಬಗ್ಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮಾಹಿತಿ ನೀಡಿದೆ. ನೀರು ಉಳಿಸುವುದಕ್ಕಾಗಿ ಜನಾಂದೋಲನ ಮಾಡಲಾಗುತ್ತಿದೆ.ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಆಂದೋಲನ ನಡೆಸಲಾಗುತ್ತಿದ್ದು, ಇದರಡಿಯಲ್ಲಿ ವಿಶೇಷವಾಗಿ ಮೂರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.

ಜನಾಂದೋಲದ ಅಡಿಯಲ್ಲಿ ಕೈಗೊಳ್ಳಲಾಗಿರುವ ಪ್ರಮುಖ ಮೂರು ಕ್ರಮಗಳ ಮಾಹಿತಿ ಹೀಗಿದೆ;

  1. ಕಾವೇರಿ ನೀರಿನ ಬಳಕೆಗೆ ಹೆಚ್ಚು ಆದ್ಯತೆ ನೀಡಿ ಬೋರ್​ವೆಲ್ ನೀರು ಉಳಿತಾಯ ಮಾಡುವುದು. ಇದರಿಂದ ಶೇ 30-40 ರಷ್ಟು ನೀರಿನ ಕೊರತೆ ಕಡಿಮೆ ಮಾಡಬಹುದು ಎಂದು ಮಂಡಳಿ ತಿಳಿಸಿದೆ.
  2. ಸಂಸ್ಕರಿಸಿದ ನೀರು ಬಳಕೆ ಮಾಡುವುದು. ಸದ್ಯ 1350 ಎಮ್‌ಎಲ್​​ಡಿ (ಮಿಲಿಯನ್ ಲೀಟರ್ ಪರ್ ಡೇ) ಕಾವೇರಿ ನೀರು ಬೆಂಗಳೂರಿಗೆ ಸರಬರಾಜು ಆಗುತ್ತದೆ. 1300 ಎಮ್‌ಎಲ್​​ಡಿ ನೀರು ಎಸ್‌ಟಿಪಿ ಮೂಲಕ ಸಂಸ್ಕರಿಸಲಾಗುತ್ತದೆ. ಈ ನೀರನ್ನ ವಾಣಿಜ್ಯ ಉದ್ದೇಶಗಳಿಗೆ, ಕೈಗಾರಿಕೆಗಳಿಗೆ ಉಪಯೋಗ ಮಾಡಬಹುದು. ಬೆಂಗಳೂರಿನ ಐಪಿಎಲ್ ಮ್ಯಾಚ್‌ಗೆ ಪರಿಸರಸ್ನೇಹಿ (ಸಂಸ್ಕರಿಸಿದ) ನೀರು ಉಪಯೋಗ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನೀರಿನ ಅಭಾವದಿಂದ ಹೊರಬರಲು ಸಂಸ್ಕರಿಸಿದ ನೀರು ನೆರವಾಗಲಿದೆ. ಈಗಾಗಲೇ 49 ಸಂಸ್ಥೆಗಳು ಸಂಸ್ಕರಿಸಿದ ನೀರಿಗಾಗಿ ಮುಂದೆ ಬಂದಿವೆ. ಈ ಮೂಲಕ ಕುಡಿಯುವ ನೀರಿನ ಒತ್ತಡ ಕಡಿಮೆ ಮಾಡಬಹುದು.
  3. ಮರು ಬಳಕೆ ನೀರನ್ನು ಕೆರೆಗಳಿಗೆ ತುಂಬಿಸಿ ಅಂತರ್ಜಲ ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಶೇ 60 ರಷ್ಟು ಕಾವೇರಿಯಿಂದ ಹಾಗೂ ಶೇ 40 ಭೂಮಿಯಿಂದ ತಗೆದುಕೊಳ್ಳುತ್ತೇವೆ. ಭೂಮಿ ತಾಯಿಗೆ ನೀರನ್ನು ಮತ್ತೆ ಕೊಡಬೇಕು ಹೀಗಾಗಿ ಮಳೆ ನೀರು ಭೂಮಿಗೆ ವಾಪಸ್ ಕೊಡಬೇಕು. ಬೋರ್‌ವೆಲ್ ರಿಚಾರ್ಜ್ ಮಾಡಬೇಕು. ಒಂದು ಬೋರ್ ವೆಲ್ ಕೊರದರೆ ಎರಡು ಇಂಗು ಗುಂಡಿ ಕಡ್ಡಾಯ ಮಾಡಲಾಗಿದೆ ಎಂದು ಜಲ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಐಪಿಎಲ್ ಸ್ಥಳಾಂತರ ಇಲ್ಲ, ಚಿನ್ನಸ್ವಾಮಿ ಸ್ಟೇಡಿಯಂಗೆ ಸಂಸ್ಕರಿಸಿದ ನೀರು: ಜಲ ಮಂಡಳಿ ಭರವಸೆ

ಐಪಿಎಲ್ ಪಂದ್ಯಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಪಂದ್ಯದ ವೇಳೆ 75,000 ಲೀಟರ್ ಸಂಸ್ಕರಿಸಿದ ನೀರನ್ನು ಪೂರೈಸುವ ಭರವಸೆಯನ್ನು ಬಿಡಬ್ಲ್ಯುಎಸ್‌ಎಸ್‌ಬಿ ಈಗಾಗಲೇ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!