Bengaluru Water Crisis: ಬೆಂಗಳೂರಿನಲ್ಲಿ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್, ಕೊನೆಗೂ ಟ್ಯಾಂಕರ್ ನೀರಿಗೆ ದರ ಫಿಕ್ಸ್: ಇಲ್ಲಿದೆ ದರ ವಿವರ

Tanker Water Rate in Bengaluru: ಬೆಂಗಳೂರು ನೀರಿನ ಬಿಕ್ಕಟ್ಟು ತೀವ್ರಗೊಂಡಿರುವ ಸಂದರ್ಭದಲ್ಲಿ ಟ್ಯಾಂಕರ್ ಮಾಫಿಯಾಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಪ್ರತಿ ಟ್ಯಾಂಕರ್ ನೀರಿಗೆ ಸರಬರಾಜು ಮಾಡಲಿರುವ ದೂರದ ಆಧಾರದಲ್ಲಿ ದರ ನಿಗದಿಪಡಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಟ್ಯಾಂಕರ್​ ನೀರಿನ ದರ ವಿವರ ಇಲ್ಲಿದೆ.

Bengaluru Water Crisis: ಬೆಂಗಳೂರಿನಲ್ಲಿ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್, ಕೊನೆಗೂ ಟ್ಯಾಂಕರ್ ನೀರಿಗೆ ದರ ಫಿಕ್ಸ್: ಇಲ್ಲಿದೆ ದರ ವಿವರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Mar 07, 2024 | 12:46 PM

ಬೆಂಗಳೂರು, ಮಾರ್ಚ್​ 7: ಬೆಂಗಳೂರು ನಗರದಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ತೀವ್ರಗೊಂಡಿರುವ ಮಧ್ಯೆಯೇ ಟ್ಯಾಂಕರ್​ಗಳು (Water Tanker) ದುಬಾರಿ ದರ ವಸೂಲಿ ಮಾಡುತ್ತಿರುವ ಬಗ್ಗೆಯೂ ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಇತ್ತೀಚೆಗೆ ನೀರಿನ ಸಮಸ್ಯೆಗೆ ಸಂಬಂಧಿಸಿ ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಸಹ ಟ್ಯಾಂಕರ್ ಮಾಫಿಯಾ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದರು. ಇದೀಗ ಕೊನೆಗೂ ಟ್ಯಾಂಕರ್ ನೀರಿಗೆ ದರ ನಿಗದಿಪಡಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಟ್ಯಾಂಕರ್ ಮಾಲೀಕರ ಜೊತೆ ಮೂರ್ನಾಲ್ಕು ಬಾರಿ ಸಭೆ ನಡೆಸಿದ ನಂತರ ಜಿಲ್ಲಾಡಳಿತ ಬೆಲೆ ನಿಗದಿ ಮಾಡಿ ಆದೇಶ ಹೊರಡಿಸಿದೆ.

ಟ್ಯಾಂಕರ್ ನೀರಿನ ದರ ವಿವರ ಇಲ್ಲಿದೆ

  • 6 ಸಾವಿರ ಲೀಟರ್ ಟ್ಯಾಂಕರ್​ಗೆ 600 ರೂ. ದರ ನಿಗದಿ. ಇದು 5 ಕಿಲೋ ಮೀಟರ್ ಒಳಗಡೆಗೆ ಮಾತ್ರ ಅನ್ವಯವಾಗಲಿದೆ.
  • 6 ಸಾವಿರ ಲೀಟರ್ ಟ್ಯಾಂಕರ್ ಗೆ 750 ರೂ. ದರ ನಿಗದಿ. ಇದು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ.
  • 8 ಸಾವಿರ ಲೀಟರ್ ಟ್ಯಾಂಕರ್​ಗೆ 700 ರೂ. ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿಲೋ ಮೀಟರ್ ಒಳಗೆ ಅನ್ವಯವಾಗಲಿದೆ.
  • 8 ಸಾವಿರ ಲೀಟರ್​ಗೆ 850 ರೂ. ದರ ನಿಗದಿ ಮಾಡಲಾಗಿದ್ದು, 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ದರ ಪಡೆಯಬಹುದಾಗಿದೆ.
  • 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ 1000 ರೂ. ದರ ನಿಗದಿ ಮಾಡಲಾಗಿದೆ.
  • 1200 ಲೀಟರ್ ಟ್ಯಾಂಕರ್​​​ಗೆ 1200 ರೂ. ದರ ಫಿಕ್ಸ್ ಮಾಡಲಾಗಿದ್ದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.

ಜಿಎಸ್​​ಟಿ ಸೇರಿಸಿ ಈ ದರ ಫಿಕ್ಸ್ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ 510 ರೂ. ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ 650 ರೂ. ದರ ಫಿಕ್ಸ್ ಮಾಡಲಾಗಿದೆ.

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುವ ಸಂಬಂಧ ಇತ್ತೀಚೆಗಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ, ನೀರಿನ ಟ್ಯಾಂಕರ್‌ಗಳ ಮಾಲೀಕರು ಇಂದಿನ (ಮಾರ್ಚ್​ 7) ಗಡುವಿನ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ದರ ನಿಗದಿ ಸಂಬಂಧ ಈ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಂಡು ಕೇಳರಿಯದ ನೀರಿನ ಬಿಕ್ಕಟ್ಟು, ಇಲ್ಲಿವೆ ಪ್ರಮುಖ ಕಾರಣಗಳು

ಬೆಂಗಳೂರು ನಗರದಲ್ಲಿ ಒಟ್ಟು 3,500 ನೀರಿನ ಟ್ಯಾಂಕರ್‌ಗಳ ಪೈಕಿ ಶೇ 10ರಷ್ಟು ಅಂದರೆ 219 ಟ್ಯಾಂಕರ್‌ಗಳು ಮಾತ್ರ ನೋಂದಣಿಯಾಗಿವೆ. ಗಡುವಿನೊಳಗೆ ನೋಂದಣಿ ಮಾಡದಿದ್ದರೆ ಸರ್ಕಾರ ಅವುಗಳನ್ನು ವಶಪಡಿಸಿಕೊಳ್ಳಲಿದೆ. ನೀರು ಯಾವುದೇ ವ್ಯಕ್ತಿಯ ಸ್ವತ್ತಲ್ಲ, ಅದು ಸರ್ಕಾರಕ್ಕೆ ಸೇರಿದ ಸಂಪನ್ಮೂಲವಾಗಿದೆ. ಜಲಮೂಲಗಳ ಮೇಲೆ ಹಿಡಿತ ಸಾಧಿಸುವ ಹಕ್ಕು ಸರ್ಕಾರಕ್ಕಿದೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Thu, 7 March 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್