AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Cut: ಇಂದಿನಿಂದ ಮೂರು ದಿನ ಕಾವೇರಿ ನೀರು ಪೂರೈಕೆ ಸ್ಥಗಿತ

ಕಾವೇರಿ ನೀರು ಪೂರೈಕೆ ಬಂದ್: ಕಾವೇರಿ ನೀರು ಕನ್ನಡ ನಾಡಿನ ಜೀವನದಿ ಮಾತ್ರವಲ್ಲ, ಬೆಂಗಳೂರಿಗರ ಜೀವನಾಡಿಯೂ ಹೌದು. ಒಂದು ದಿನ ಕಾವೇರಿ ನೀರು ಬರಲ್ಲ ಅಂದರೆ ಪರದಾಟ ಹೇಳಲು ಸಾಧ್ಯವಿಲ್ಲ. ಇದೀಗ ಬೆಂಗಳೂರು ಜಲಮಂಡಳಿ ಜನರಿಗೆ ಬಿಗ್ ಶಾಕ್ ಕೊಟ್ಟಿದೆ. ಇಂದಿನಿಂದ ಮೂರು ದಿನ ಕಾವೇರಿ ನೀರು ಪೂರೈಕೆ ಬಂದ್ ಆಗುತ್ತಿದೆ. ಆದರೆ, ಇದಕ್ಕೆ ಕಾರಣವಿದೆ. ಮಾಹಿತಿ ಇಲ್ಲಿದೆ.

Bengaluru Water Cut: ಇಂದಿನಿಂದ ಮೂರು ದಿನ ಕಾವೇರಿ ನೀರು ಪೂರೈಕೆ ಸ್ಥಗಿತ
ಸಾಂದರ್ಭಿಕ ಚಿತ್ರ
ಶಾಂತಮೂರ್ತಿ
| Edited By: |

Updated on: Sep 15, 2025 | 6:51 AM

Share

ಬೆಂಗಳೂರು, ಸೆಪ್ಟೆಂಬರ್ 15: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಕಾವೇರಿ ನೀರು (Cauvery Water) ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ಕಾವೇರಿ ನೀರು ಸರಬರಾಜು ಮಾಡುವ ಪಂಪಿಂಗ್ ಸ್ಟೇಷನ್​ನಲ್ಲಿ ಕಾಮಗಾರಿ ನಡೆಯಲಿದೆ. ಹೀಗಾಗಿ, ಸೆಪ್ಟೆಂಬರ್ 17 ರ ವರೆಗೆ, ಅಂದರೆ ಮೂರು ದಿನ ಬೆಂಗಳೂರಿನ ಹಲವೆಡೆ ಕಾವೇರಿ ನೀರಿನ ಸರಬರಾಜಾಗುವುದಿಲ್ಲ. ಕಾವೇರಿ 5ನೇ ಹಂತದ ನಿರ್ವಹಣೆಗಾಗಿ ಕಾವೇರಿ ನೀರು ಬಂದ್ ಆಗಲಿದೆ. ಜನರು ಇಂದೇ ನೀರು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿ (BWSSB) ಸಲಹೆ ನೀಡಿದೆ.

ನೀರು ಪೂರೈಕೆ ಸ್ಥಗಿತದ ಸಮಯ

ಸೆಪ್ಟೆಂಬರ್ 15, 16 ಹಾಗೂ 17 ರಂದು ಕಾವೇರಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಕಾವೇರಿ 5ನೇ ಹಂತದ ಪಂಪಿಂಗ್ ಸ್ಟೇಷನ್​ನಿಂದ ನೀರು ಪೂರೈಕೆ ಬಂದ್ ಆಗಲಿದೆ. ಸೆ. 15ರ ಮಧ್ಯರಾತ್ರಿ 1ರಿಂದ ಸೆ. 17ರ ಮಧ್ಯಾಹ್ನ 1 ಗಂಟೆವರೆಗೆ ಕಾವೇರಿ 5ನೇ ಹಂತದಲ್ಲಿ 60 ಗಂಟೆ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ . ಕಾವೇರಿ 1, 2, 3, 4ನೇ ಹಂತದಲ್ಲಿ 24 ಗಂಟೆ ನೀರು ಪೂರೈಕೆ ಸ್ಥಗಿತವಾಗಲಿದ್ದು, ಅಗತ್ಯ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಜಲಮಂಡಳಿ ಮನವಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಒಂದು ತಿಂಗಳ ವಾಟರ್​​ ಬಿಲ್​ ಇಷ್ಟೊಂದಾ? ರೊಚ್ಚಿಗೆದ್ದ ಬಾಡಿಗೆದಾರ, ಪೋಸ್ಟ್‌ ವೈರಲ್​​

ಸಾರ್ವಜನಿಕರಿಂದ ಆಕ್ರೋಶ

ದಿಢೀರ್ ಆಗಿ 3 ದಿನ ಕಾವೇರಿ ನೀರು ಬಂದ್ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಮೂರು ದಿನ ನಗರವಾಸಿಗಳಿಗೆ ನೀರಿನ ಅಭಾವ ಎದುರಾಗಲಿದೆ. ಇದನ್ನೇ ವಾಟರ್ ಟ್ಯಾಂಕ್​ನನವರು ಅಸ್ತ್ರವಾಗಿಸಿಕೊಂಡು, ಡಬಲ್ ವಸೂಲಿ ಮಾಡುವ ಭೀತಿಯೂ ಜನರನ್ನು ಕಾಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್