AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು

ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
TV9 Web
| Edited By: |

Updated on: Feb 25, 2024 | 10:37 AM

Share

ಬೆಂಗಳೂರು, ಫೆ.25: ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು (Bengaluru) ನಗರದಲ್ಲಿ ನೀರಿಗೆ ಹಾಹಾಕಾರ (Water Problem) ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ (RR Nagar) ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಆರ್.ಆರ್.ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲಿ ಜಲ ದಾಹ ಶುರುವಾಗಿದ್ದು, 192 ಮನೆಗಳ ನಿವಾಸಿಗಳು ನೀರಿಲ್ಲದೇ ಹೈರಾಣಾಗಿದ್ದಾರೆ. 10 ವರ್ಷಗಳಿಂದ ಅಪಾರ್ಟ್​ಮೆಂಟ್ ದಾಹ ತಣಿಸುತ್ತಿದ್ದ ಏಕೈಕ ಬೋರ್​ವೆಲ್​ನಲ್ಲಿ ನೀರು ಬತ್ತಿದೆ. ವಿಧಿ ಇಲ್ಲದೆ ನಿವಾಸಿಗಳು ಟ್ಯಾಂಕರ್ ನೀರು ಮೊರೆಹೋಗಿದ್ದಾರೆ.

ಇದನ್ನೂ ಓದಿ: ನೀರಿನ ಹಾಹಾಕಾರ, ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು- ಸಂಸದ ತೇಜಸ್ವಿ ಸೂರ್ಯ

ಮನೆ ಬಾಡಿಗೆ ಜೊತೆ ನೀರಿನ ಹಣ ಹೆಚ್ಚುವರಿ ಹೊರೆ

ಬೇಸಿಗೆಗೂ ಮೊದಲೇ ಕಳೆದ 3 ತಿಂಗಳಿನಿಂದ ನಗರದ ಕೆಲವೆಡೆ ನೀರಿನ ಬರ ಎದುರಾಗಿದ್ದು, ಅಂತಹ ಪ್ರದೇಶದಲ್ಲಿನ ನಿವಾಸಿಗಳು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಟ್ಯಾಂಕರ್ ಮಾಲೀಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದಾಗಿ ಬಾಡಿಗೆ ಜೊತೆಗೆ ನೀರಿಗೂ ಹಣ ಕಟ್ಟಿ ಜನರು ಹೈರಾಣಾಗಿದ್ದಾರೆ.

ಅಪಾರ್ಟ್​ಮೆಂಟ್ ತೊರೆದ ಜನರು

ಪ್ರತಿ ತಿಂಗಳು 3 ರಿಂದ 4 ಲಕ್ಷ ಹಣ ನೀರಿಗಾಗಿ ಕಟ್ಟಬೇಕು ಎಂದು ನೀರು ಕೊಡದ ಬಿಡಿಎ, ಜಲಮಂಡಳಿ ವಿರುದ್ಧ ನಿವಾಸಿಗಳು ಕಿಡಿಕಾರಿದ್ದಾರೆ. ಅಲ್ಲದೆ, ನೀರಿಲ್ಲ ಎಂದು ಒಂದಷ್ಟು ಬಾಡಿಗೆದಾರರು ಫ್ಲಾಟ್ ಖಾಲಿ ಮಾಡಿದ್ದಾರೆ. ನಮಗೆ ಏನು ಬೇಡ ನೀರು ಕೊಡಿ ಅಂತ ಜನರು ಒತ್ತಾಯಿಸುತ್ತಿದ್ದಾರೆ.

ವರದಿ; ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?