AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು

ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
TV9 Web
| Edited By: Rakesh Nayak Manchi|

Updated on: Feb 25, 2024 | 10:37 AM

Share

ಬೆಂಗಳೂರು, ಫೆ.25: ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು (Bengaluru) ನಗರದಲ್ಲಿ ನೀರಿಗೆ ಹಾಹಾಕಾರ (Water Problem) ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ (RR Nagar) ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಆರ್.ಆರ್.ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲಿ ಜಲ ದಾಹ ಶುರುವಾಗಿದ್ದು, 192 ಮನೆಗಳ ನಿವಾಸಿಗಳು ನೀರಿಲ್ಲದೇ ಹೈರಾಣಾಗಿದ್ದಾರೆ. 10 ವರ್ಷಗಳಿಂದ ಅಪಾರ್ಟ್​ಮೆಂಟ್ ದಾಹ ತಣಿಸುತ್ತಿದ್ದ ಏಕೈಕ ಬೋರ್​ವೆಲ್​ನಲ್ಲಿ ನೀರು ಬತ್ತಿದೆ. ವಿಧಿ ಇಲ್ಲದೆ ನಿವಾಸಿಗಳು ಟ್ಯಾಂಕರ್ ನೀರು ಮೊರೆಹೋಗಿದ್ದಾರೆ.

ಇದನ್ನೂ ಓದಿ: ನೀರಿನ ಹಾಹಾಕಾರ, ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು- ಸಂಸದ ತೇಜಸ್ವಿ ಸೂರ್ಯ

ಮನೆ ಬಾಡಿಗೆ ಜೊತೆ ನೀರಿನ ಹಣ ಹೆಚ್ಚುವರಿ ಹೊರೆ

ಬೇಸಿಗೆಗೂ ಮೊದಲೇ ಕಳೆದ 3 ತಿಂಗಳಿನಿಂದ ನಗರದ ಕೆಲವೆಡೆ ನೀರಿನ ಬರ ಎದುರಾಗಿದ್ದು, ಅಂತಹ ಪ್ರದೇಶದಲ್ಲಿನ ನಿವಾಸಿಗಳು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಟ್ಯಾಂಕರ್ ಮಾಲೀಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದಾಗಿ ಬಾಡಿಗೆ ಜೊತೆಗೆ ನೀರಿಗೂ ಹಣ ಕಟ್ಟಿ ಜನರು ಹೈರಾಣಾಗಿದ್ದಾರೆ.

ಅಪಾರ್ಟ್​ಮೆಂಟ್ ತೊರೆದ ಜನರು

ಪ್ರತಿ ತಿಂಗಳು 3 ರಿಂದ 4 ಲಕ್ಷ ಹಣ ನೀರಿಗಾಗಿ ಕಟ್ಟಬೇಕು ಎಂದು ನೀರು ಕೊಡದ ಬಿಡಿಎ, ಜಲಮಂಡಳಿ ವಿರುದ್ಧ ನಿವಾಸಿಗಳು ಕಿಡಿಕಾರಿದ್ದಾರೆ. ಅಲ್ಲದೆ, ನೀರಿಲ್ಲ ಎಂದು ಒಂದಷ್ಟು ಬಾಡಿಗೆದಾರರು ಫ್ಲಾಟ್ ಖಾಲಿ ಮಾಡಿದ್ದಾರೆ. ನಮಗೆ ಏನು ಬೇಡ ನೀರು ಕೊಡಿ ಅಂತ ಜನರು ಒತ್ತಾಯಿಸುತ್ತಿದ್ದಾರೆ.

ವರದಿ; ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ