AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು

ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
TV9 Web
| Edited By: Rakesh Nayak Manchi|

Updated on: Feb 25, 2024 | 10:37 AM

Share

ಬೆಂಗಳೂರು, ಫೆ.25: ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು (Bengaluru) ನಗರದಲ್ಲಿ ನೀರಿಗೆ ಹಾಹಾಕಾರ (Water Problem) ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ (RR Nagar) ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಆರ್.ಆರ್.ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲಿ ಜಲ ದಾಹ ಶುರುವಾಗಿದ್ದು, 192 ಮನೆಗಳ ನಿವಾಸಿಗಳು ನೀರಿಲ್ಲದೇ ಹೈರಾಣಾಗಿದ್ದಾರೆ. 10 ವರ್ಷಗಳಿಂದ ಅಪಾರ್ಟ್​ಮೆಂಟ್ ದಾಹ ತಣಿಸುತ್ತಿದ್ದ ಏಕೈಕ ಬೋರ್​ವೆಲ್​ನಲ್ಲಿ ನೀರು ಬತ್ತಿದೆ. ವಿಧಿ ಇಲ್ಲದೆ ನಿವಾಸಿಗಳು ಟ್ಯಾಂಕರ್ ನೀರು ಮೊರೆಹೋಗಿದ್ದಾರೆ.

ಇದನ್ನೂ ಓದಿ: ನೀರಿನ ಹಾಹಾಕಾರ, ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು- ಸಂಸದ ತೇಜಸ್ವಿ ಸೂರ್ಯ

ಮನೆ ಬಾಡಿಗೆ ಜೊತೆ ನೀರಿನ ಹಣ ಹೆಚ್ಚುವರಿ ಹೊರೆ

ಬೇಸಿಗೆಗೂ ಮೊದಲೇ ಕಳೆದ 3 ತಿಂಗಳಿನಿಂದ ನಗರದ ಕೆಲವೆಡೆ ನೀರಿನ ಬರ ಎದುರಾಗಿದ್ದು, ಅಂತಹ ಪ್ರದೇಶದಲ್ಲಿನ ನಿವಾಸಿಗಳು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಟ್ಯಾಂಕರ್ ಮಾಲೀಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದಾಗಿ ಬಾಡಿಗೆ ಜೊತೆಗೆ ನೀರಿಗೂ ಹಣ ಕಟ್ಟಿ ಜನರು ಹೈರಾಣಾಗಿದ್ದಾರೆ.

ಅಪಾರ್ಟ್​ಮೆಂಟ್ ತೊರೆದ ಜನರು

ಪ್ರತಿ ತಿಂಗಳು 3 ರಿಂದ 4 ಲಕ್ಷ ಹಣ ನೀರಿಗಾಗಿ ಕಟ್ಟಬೇಕು ಎಂದು ನೀರು ಕೊಡದ ಬಿಡಿಎ, ಜಲಮಂಡಳಿ ವಿರುದ್ಧ ನಿವಾಸಿಗಳು ಕಿಡಿಕಾರಿದ್ದಾರೆ. ಅಲ್ಲದೆ, ನೀರಿಲ್ಲ ಎಂದು ಒಂದಷ್ಟು ಬಾಡಿಗೆದಾರರು ಫ್ಲಾಟ್ ಖಾಲಿ ಮಾಡಿದ್ದಾರೆ. ನಮಗೆ ಏನು ಬೇಡ ನೀರು ಕೊಡಿ ಅಂತ ಜನರು ಒತ್ತಾಯಿಸುತ್ತಿದ್ದಾರೆ.

ವರದಿ; ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ