ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು

ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
Follow us
| Updated By: Rakesh Nayak Manchi

Updated on: Feb 25, 2024 | 10:37 AM

ಬೆಂಗಳೂರು, ಫೆ.25: ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು (Bengaluru) ನಗರದಲ್ಲಿ ನೀರಿಗೆ ಹಾಹಾಕಾರ (Water Problem) ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ (RR Nagar) ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಆರ್.ಆರ್.ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲಿ ಜಲ ದಾಹ ಶುರುವಾಗಿದ್ದು, 192 ಮನೆಗಳ ನಿವಾಸಿಗಳು ನೀರಿಲ್ಲದೇ ಹೈರಾಣಾಗಿದ್ದಾರೆ. 10 ವರ್ಷಗಳಿಂದ ಅಪಾರ್ಟ್​ಮೆಂಟ್ ದಾಹ ತಣಿಸುತ್ತಿದ್ದ ಏಕೈಕ ಬೋರ್​ವೆಲ್​ನಲ್ಲಿ ನೀರು ಬತ್ತಿದೆ. ವಿಧಿ ಇಲ್ಲದೆ ನಿವಾಸಿಗಳು ಟ್ಯಾಂಕರ್ ನೀರು ಮೊರೆಹೋಗಿದ್ದಾರೆ.

ಇದನ್ನೂ ಓದಿ: ನೀರಿನ ಹಾಹಾಕಾರ, ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು- ಸಂಸದ ತೇಜಸ್ವಿ ಸೂರ್ಯ

ಮನೆ ಬಾಡಿಗೆ ಜೊತೆ ನೀರಿನ ಹಣ ಹೆಚ್ಚುವರಿ ಹೊರೆ

ಬೇಸಿಗೆಗೂ ಮೊದಲೇ ಕಳೆದ 3 ತಿಂಗಳಿನಿಂದ ನಗರದ ಕೆಲವೆಡೆ ನೀರಿನ ಬರ ಎದುರಾಗಿದ್ದು, ಅಂತಹ ಪ್ರದೇಶದಲ್ಲಿನ ನಿವಾಸಿಗಳು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಟ್ಯಾಂಕರ್ ಮಾಲೀಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದಾಗಿ ಬಾಡಿಗೆ ಜೊತೆಗೆ ನೀರಿಗೂ ಹಣ ಕಟ್ಟಿ ಜನರು ಹೈರಾಣಾಗಿದ್ದಾರೆ.

ಅಪಾರ್ಟ್​ಮೆಂಟ್ ತೊರೆದ ಜನರು

ಪ್ರತಿ ತಿಂಗಳು 3 ರಿಂದ 4 ಲಕ್ಷ ಹಣ ನೀರಿಗಾಗಿ ಕಟ್ಟಬೇಕು ಎಂದು ನೀರು ಕೊಡದ ಬಿಡಿಎ, ಜಲಮಂಡಳಿ ವಿರುದ್ಧ ನಿವಾಸಿಗಳು ಕಿಡಿಕಾರಿದ್ದಾರೆ. ಅಲ್ಲದೆ, ನೀರಿಲ್ಲ ಎಂದು ಒಂದಷ್ಟು ಬಾಡಿಗೆದಾರರು ಫ್ಲಾಟ್ ಖಾಲಿ ಮಾಡಿದ್ದಾರೆ. ನಮಗೆ ಏನು ಬೇಡ ನೀರು ಕೊಡಿ ಅಂತ ಜನರು ಒತ್ತಾಯಿಸುತ್ತಿದ್ದಾರೆ.

ವರದಿ; ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​