AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು

ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು ನಗರದಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
ಬೆಂಗಳೂರಿಗೆ ಜಲ ಕಂಟಕ: ಆರ್​​ಆರ್​ ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲೂ ನೀರಿಲ್ಲ, ಟ್ಯಾಂಕರ್ ಮೊರೆಹೋದ ನಿವಾಸಿಗಳು
TV9 Web
| Edited By: |

Updated on: Feb 25, 2024 | 10:37 AM

Share

ಬೆಂಗಳೂರು, ಫೆ.25: ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಬೆಂಗಳೂರು (Bengaluru) ನಗರದಲ್ಲಿ ನೀರಿಗೆ ಹಾಹಾಕಾರ (Water Problem) ಎದ್ದಿದೆ. ಬೋರ್​ವೆಲ್​ಗಳಲ್ಲಿ ನೀರಿಲ್ಲದೆ ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ ನೀರಿನ ಬೆಲೆಯಲ್ಲೂ ದುಪ್ಪಟ್ಟಾಗಿದೆ. ಈ ನಡುವೆ, ಆರ್.ಆರ್.ನಗರ (RR Nagar) ಬಿಡಿಎ ಅಪಾರ್ಟ್​​ಮೆಂಟ್​ನಲ್ಲೂ ಜಲ ದಾಹ ಎದುರಾಗಿದೆ.

ಆರ್.ಆರ್.ನಗರ ಬಿಡಿಎ ಅಪಾರ್ಟ್ ಮೆಂಟ್​ನಲ್ಲಿ ಜಲ ದಾಹ ಶುರುವಾಗಿದ್ದು, 192 ಮನೆಗಳ ನಿವಾಸಿಗಳು ನೀರಿಲ್ಲದೇ ಹೈರಾಣಾಗಿದ್ದಾರೆ. 10 ವರ್ಷಗಳಿಂದ ಅಪಾರ್ಟ್​ಮೆಂಟ್ ದಾಹ ತಣಿಸುತ್ತಿದ್ದ ಏಕೈಕ ಬೋರ್​ವೆಲ್​ನಲ್ಲಿ ನೀರು ಬತ್ತಿದೆ. ವಿಧಿ ಇಲ್ಲದೆ ನಿವಾಸಿಗಳು ಟ್ಯಾಂಕರ್ ನೀರು ಮೊರೆಹೋಗಿದ್ದಾರೆ.

ಇದನ್ನೂ ಓದಿ: ನೀರಿನ ಹಾಹಾಕಾರ, ಖಾಸಗಿ ಟ್ಯಾಂಕರ್​ಗಳ ದಂಧೆಗೆ ಕಡಿವಾಣ ಹಾಕಬೇಕು- ಸಂಸದ ತೇಜಸ್ವಿ ಸೂರ್ಯ

ಮನೆ ಬಾಡಿಗೆ ಜೊತೆ ನೀರಿನ ಹಣ ಹೆಚ್ಚುವರಿ ಹೊರೆ

ಬೇಸಿಗೆಗೂ ಮೊದಲೇ ಕಳೆದ 3 ತಿಂಗಳಿನಿಂದ ನಗರದ ಕೆಲವೆಡೆ ನೀರಿನ ಬರ ಎದುರಾಗಿದ್ದು, ಅಂತಹ ಪ್ರದೇಶದಲ್ಲಿನ ನಿವಾಸಿಗಳು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಟ್ಯಾಂಕರ್ ಮಾಲೀಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದಾಗಿ ಬಾಡಿಗೆ ಜೊತೆಗೆ ನೀರಿಗೂ ಹಣ ಕಟ್ಟಿ ಜನರು ಹೈರಾಣಾಗಿದ್ದಾರೆ.

ಅಪಾರ್ಟ್​ಮೆಂಟ್ ತೊರೆದ ಜನರು

ಪ್ರತಿ ತಿಂಗಳು 3 ರಿಂದ 4 ಲಕ್ಷ ಹಣ ನೀರಿಗಾಗಿ ಕಟ್ಟಬೇಕು ಎಂದು ನೀರು ಕೊಡದ ಬಿಡಿಎ, ಜಲಮಂಡಳಿ ವಿರುದ್ಧ ನಿವಾಸಿಗಳು ಕಿಡಿಕಾರಿದ್ದಾರೆ. ಅಲ್ಲದೆ, ನೀರಿಲ್ಲ ಎಂದು ಒಂದಷ್ಟು ಬಾಡಿಗೆದಾರರು ಫ್ಲಾಟ್ ಖಾಲಿ ಮಾಡಿದ್ದಾರೆ. ನಮಗೆ ಏನು ಬೇಡ ನೀರು ಕೊಡಿ ಅಂತ ಜನರು ಒತ್ತಾಯಿಸುತ್ತಿದ್ದಾರೆ.

ವರದಿ; ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ