AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ಪೂರೈಕೆ ಮೇಲ್ವಿಚಾರಣೆಗೆ ಬರಲಿದೆ ಎಐ, ರೋಬೋಟ್​ಗಳು!

ಕತ್ರಿಗುಪ್ಪೆ, ಯಲಹಂಕದ ಕೆಲವು ಪ್ರದೇಶ ಸೇರಿದಂತೆ ಬೆಂಗಳೂರಿನ ಕೆಲವು ಕಡೆಗಳಲ್ಲಿ ಕಾವೇರಿ ನೀರು ಕಲುಷಿತಗೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಅಂಥ ಸಮಸ್ಯೆಗೆ ಬ್ರೇಕ್ ಹಾಕಲು, ನೀರು ಪೂರೈಕೆ ನಿರ್ವಹಣೆ ಮಾಡಲು ಕೃತಕಬುದ್ಧಿಮತ್ತೆ (ಎಐ) ಹಾಗೂ ರೋಬೋಟ್ ತಂತ್ರಜ್ಞಾನ ಬಳಸಲು ಬೆಂಗಳೂರು ಜಲಮಂಡಳಿ ಮುಂದಾಗಿದೆ.

ಕಾವೇರಿ ನೀರು ಪೂರೈಕೆ ಮೇಲ್ವಿಚಾರಣೆಗೆ ಬರಲಿದೆ ಎಐ, ರೋಬೋಟ್​ಗಳು!
ಇತ್ತೀಚೆಗೆ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಪೂರೈಕೆಯಾಗಿದ್ದ ಕಲುಷಿತ ನೀರುImage Credit source: tv9
ಗಣಪತಿ ಶರ್ಮಾ
|

Updated on: Jul 30, 2026 | 8:24 AM

Share

ಮುಖ್ಯಾಂಶಗಳು

  • AI ಮೂಲಕ ನೀರು ಸೋರಿಕೆ, ಕಲುಷಿತಗೊಳ್ಳುವಿಕೆ ಪತ್ತೆ
  • ರೋಬೋಟ್‌ಗಳಿಂದ ಪೈಪ್‌ಲೈನ್ ಪರಿಶೀಲನೆ
  • ಖಾಸಗಿ ಕಂಪನಿಗಳ ಸಹಯೋಗದಲ್ಲಿ ಯೋಜನೆ

ಬೆಂಗಳೂರು, ಜುಲೈ 30: ಬೆಂಗಳೂರಿನ (Bengaluru) ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರು ಕಲುಷಿತಗೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕತ್ರಿಗುಪ್ಪೆ ಮತ್ತು ಯಲಹಂಕದ ಕೆಲವು ಪ್ರದೇಶಗಳಲ್ಲಿ ಕಾವೇರಿ ನೀರಿನಲ್ಲಿ ಕೊಳಚೆ ನೀರು ಸೇರಿಕೊಂಡು ಜನರು ತೊಂದರೆ ಅನುಭವಿಸುವಂತಾಗಿತ್ತು. ಇದೀಗ ಇಂತಹ ಸಮಸ್ಯೆಗಳಿಗೆಲ್ಲ ಬ್ರೇಕ್ ಹಾಕಲು ಬೆಂಗಳೂರು ಜಲ ಮಂಡಳಿ (BWSSB) ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ. ನಗರದ ನೀರು ಪೂರೈಕೆ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹೊಸ ತಂತ್ರಜ್ಞಾನ ಪ್ರಯೋಗಕ್ಕೆ ಮುಂದಾಗಿದೆ. ನೀರಿನ ಪೈಪ್‌ಲೈನ್‌ಗಳ ಸೋರಿಕೆ, ಹಾನಿ ಹಾಗೂ ನೀರು ಕಲುಷಿತಗೊಳ್ಳುವ ಸಾಧ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ (AI) ಮತ್ತು ರೋಬೋಟಿಕ್ಸ್ ತಂತ್ರಜ್ಞಾನವನ್ನು ಬಳಸುವ ಪ್ರಾಯೋಗಿಕ ಯೋಜನೆ ಆರಂಭವಾಗಲಿದೆ.

18 ತಿಂಗಳ ಈ ಪ್ರಾಯೋಗಿಕ ಯೋಜನೆಯನ್ನು ಬೆಂಗಳೂರಿನ ದಕ್ಷಿಣ ವಿಭಾಗದಲ್ಲಿ ಜಾರಿಗೊಳಿಸಲಾಗುತ್ತಿದೆ. ಅಂಡರ್​ಗ್ರೌಂಡ್ ನೀರು ಪೂರೈಕೆ ಪೈಪ್‌ಲೈನ್‌ಗಳನ್ನು ಪರಿಶೀಲಿಸಲು ಸುಧಾರಿತ ರೋಬೋಟಿಕ್ ಉಪಕರಣಗಳನ್ನು ಬಳಸಲಾಗುತ್ತದೆ.

ಹೇಗೆ ಕೆಲಸ ಮಾಡಲಿದೆ ರೋಬೋಟಿಕ್ ತಂತ್ರಜ್ಞಾನ?

ಪೈಪ್‌ಲೈನ್‌ನಲ್ಲಿ ಸೋರಿಕೆ, ಹಾನಿ ಅಥವಾ ನೀರು ಕಲುಷಿತಗೊಂಡಿರುವುದನ್ನು ರೋಬೋಟಿಕ್ ತಂತ್ರಜ್ಞಾನ ಪತ್ತೆಹಚ್ಚಲಿದೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ತಂತ್ರಜ್ಞಾನದ ಮೂಲಕ ಎಚ್ಚರಿಕೆ ರವಾನಿಸಲಿದೆ. ಇದರಿಂದ ಸಮಸ್ಯೆಯನ್ನು ಆರಂಭದಲ್ಲೇ ಗುರುತಿಸಿ ತ್ವರಿತ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ನೀರು ಪೋಲಾಗುವುದು ಹಾಗೂ ಆದಾಯದ ಮೇಲೆ ಉಂಟಾಗುವ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಹೊಸ ಕ್ರಮದ ಬಗ್ಗೆ ಜಲಮಂಡಳಿ ಹೇಳುವುದೇನು?

ಹೊಸ ತಂತ್ರಜ್ಞಾನದಿಂದ ನೀರು ಸೋರಿಕೆ, ಪೈಪ್‌ಲೈನ್ ದೋಷ, ನೀರಿನ ಕಲುಷಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಸಾಧ್ಯವಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷೆ ಮಂಜುಳಾ ಎನ್. ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿಗೆ ಸೇರ್ತಿದೆ ಮೈಸೂರಿನ ಕೊಳಚೆ ನೀರು; ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜೀವನದಿ ಕಲುಷಿತ

ಈ ಯೋಜನೆಯನ್ನು ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಟೈಟಾನ್ ಕಂಪನಿ ಲಿಮಿಟೆಡ್​ನ ‘Design Impact Award’ ಅನುದಾನ ಕಾರ್ಯಕ್ರಮದಡಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಇದಕ್ಕಾಗಿ ಜಲಮಂಡಳಿ ಮೇಲೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆ ಬೀಳುವುದಿಲ್ಲ ಎಂದು ಮಂಡಳಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk