AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather: ಜಿಟಿಜಿಟಿ ಮಳೆ ಮೈಕೊರೆಯುವ ಚಳಿ ತಾಪಮಾನ ಇಳಿಕೆ

ಶಾಲೆ, ಕಾಲೇಜು ಮತ್ತು ಕಚೇರಿ ಕೆಲಸಗಳಿಗೆ ಮನೆಯಿಂದ ಹೊರಡಬೇಕಾಗಿರುವವರು ಚಳಿಗೆ ಅಕ್ಷರಶಃ ನಡುಗುತ್ತಿದ್ದಾರೆ.

Bengaluru Weather: ಜಿಟಿಜಿಟಿ ಮಳೆ ಮೈಕೊರೆಯುವ ಚಳಿ ತಾಪಮಾನ ಇಳಿಕೆ
ಬೆಂಗಳೂರು ಹವಾಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Nov 12, 2021 | 10:16 AM

Share

ಬೆಂಗಳೂರು: ನಗರ ಸೇರಿದಂತೆ ಕರ್ನಾಟಕದ ವಿವಿಧೆಡೆ ಗುರುವಾರದಿಂದ ಜುಮುರು ಮಳೆ ಸುರಿಯುತ್ತಿದ್ದು, ಚಳಿ ಹೆಚ್ಚಾಗಿದೆ. ಬೆಂಗಳೂರಿನ ತಾಪಮಾನ ಇಳಿಕೆಯಾಗಿದ್ದು, ಕನಿಷ್ಠ 18 ಡಿಗ್ರಿ, ಗರಿಷ್ಠ 19 ಡಿಗ್ರಿ ಸೆಲ್ಷಿಯಸ್​ಗೆ ಬಂದಿದೆ. ರಸ್ತೆಗಳಲ್ಲಿ ಸಂಚಾರ ವಿರಳವಾಗಿದ್ದು, ಎಲ್ಲೆಡೆ ಸ್ವೆಟರ್ ಧಾರಿಗಳೇ ಕಂಡುಬರುತ್ತಿದ್ದಾರೆ. ಶಾಲೆ, ಕಾಲೇಜು ಮತ್ತು ಕಚೇರಿ ಕೆಲಸಗಳಿಗೆ ಮನೆಯಿಂದ ಹೊರಡಬೇಕಾಗಿರುವವರು ಚಳಿಗೆ ಅಕ್ಷರಶಃ ನಡುಗುತ್ತಿದ್ದಾರೆ.

ಕೆಲವರಿಗೆ ಈ ಚಳಿಗಾಲವು ಹಳೆಯ ನೆನಪುಗಳನ್ನು ಮೊಗೆದುಕೊಟ್ಟಿದೆ. ಎಂಥ ಬೇಸಿಗೆಯಲ್ಲೂ ಬೆಂಗಳೂರು ಬಿಸಿಯಾಗುತ್ತಿರುತ್ತಿರಲಿಲ್ಲ. ಆದರೆ ಈ ಬಾರಿ ಚಳಿಗಾಲದ ಆರಂಭದಲ್ಲಿಯೇ ಇಂಥ ಹವಾಮಾನ ರೂಪುಗೊಂಡಿರುವುದು ಕೆಲವರಿಗೆ ಖುಷಿಕೊಟ್ಟಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇದೇ ವಾತಾವರಣ ಮುಂದಿನ ಕೆಲ ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಗರವನ್ನು ಆವರಿಸಿರುವ ಮೋಡ ಚೆದುರುವವರೆಗೆ ಉಷ್ಣಾಂಶ ಏರಿಕೆಯಾಗದು.

ಇನ್ನೂ ಕೆಲ ದಿನಗಳವರೆಗೆ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣದೊಂದಿಗೆ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಮುರುಮಳೆಯಿಂದಾಗಿ ಮಂಜುಮುಸುಕಿದ ವಾತಾವರಣ ನಿರ್ಮಾಣಗೊಂಡಿದ್ದರಿಂದ ಟ್ರಾಫಿಕ್ ನಿಧಾನಗತಿಯಲ್ಲಿ ಸಂಚರಿಸುವಂತಾಗಿದೆ. ಮಂಜು ಸುರಿಯುತ್ತಿರುವುದರಿಂದ ವಾಹನ ಸವಾರರು ಹೆಡ್​ಲೈಟ್ ಆನ್ ಮಾಡಿಕೊಂಡೇ ಸಂಚರಿಸಬೇಕಾಯಿತು. ಮಾರತ್ತಹಳ್ಳಿ ಮತ್ತು ಮಲ್ಲೇಶ್ವರಂ ಬಡಾವಣೆಗಳಲ್ಲಿ ಮರಗಳು ಉರುಳಿ, ಸಂಚಾರಕ್ಕೆ ಸಮಸ್ಯೆಯಾಯಿತು.

ತಮಿಳುನಾಡು ಮತ್ತು ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಾಯುಭಾರ ಕುಸಿತ ಹಿನ್ನಲೆ ಮಳೆಯೊಂದಿಗೆ ಚಳಿಯೂ ಹೆಚ್ಚಾಗಿದ್ದು, ಹೂ, ಹಣ್ಣು, ತರಕಾರಿ, ರಾಗಿ, ನೆಲಗಡಲೆ ಬೆಳೆಗಳು ಹಾಳಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಚಿಕ್ಕಮಗಳೂರು ಸೇರಿ 10 ಜಿಲ್ಲೆಗಳಲ್ಲಿ 4 ದಿನ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಇದನ್ನೂ ಓದಿ: Karnataka Rain: ಬೆಂಗಳೂರು, ಚಿಕ್ಕಮಗಳೂರು ಸೇರಿ 10 ಜಿಲ್ಲೆಗಳಲ್ಲಿ 4 ದಿನ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Published On - 9:38 am, Fri, 12 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ