AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather: ಜಿಟಿಜಿಟಿ ಮಳೆ ಮೈಕೊರೆಯುವ ಚಳಿ ತಾಪಮಾನ ಇಳಿಕೆ

ಶಾಲೆ, ಕಾಲೇಜು ಮತ್ತು ಕಚೇರಿ ಕೆಲಸಗಳಿಗೆ ಮನೆಯಿಂದ ಹೊರಡಬೇಕಾಗಿರುವವರು ಚಳಿಗೆ ಅಕ್ಷರಶಃ ನಡುಗುತ್ತಿದ್ದಾರೆ.

Bengaluru Weather: ಜಿಟಿಜಿಟಿ ಮಳೆ ಮೈಕೊರೆಯುವ ಚಳಿ ತಾಪಮಾನ ಇಳಿಕೆ
ಬೆಂಗಳೂರು ಹವಾಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Nov 12, 2021 | 10:16 AM

Share

ಬೆಂಗಳೂರು: ನಗರ ಸೇರಿದಂತೆ ಕರ್ನಾಟಕದ ವಿವಿಧೆಡೆ ಗುರುವಾರದಿಂದ ಜುಮುರು ಮಳೆ ಸುರಿಯುತ್ತಿದ್ದು, ಚಳಿ ಹೆಚ್ಚಾಗಿದೆ. ಬೆಂಗಳೂರಿನ ತಾಪಮಾನ ಇಳಿಕೆಯಾಗಿದ್ದು, ಕನಿಷ್ಠ 18 ಡಿಗ್ರಿ, ಗರಿಷ್ಠ 19 ಡಿಗ್ರಿ ಸೆಲ್ಷಿಯಸ್​ಗೆ ಬಂದಿದೆ. ರಸ್ತೆಗಳಲ್ಲಿ ಸಂಚಾರ ವಿರಳವಾಗಿದ್ದು, ಎಲ್ಲೆಡೆ ಸ್ವೆಟರ್ ಧಾರಿಗಳೇ ಕಂಡುಬರುತ್ತಿದ್ದಾರೆ. ಶಾಲೆ, ಕಾಲೇಜು ಮತ್ತು ಕಚೇರಿ ಕೆಲಸಗಳಿಗೆ ಮನೆಯಿಂದ ಹೊರಡಬೇಕಾಗಿರುವವರು ಚಳಿಗೆ ಅಕ್ಷರಶಃ ನಡುಗುತ್ತಿದ್ದಾರೆ.

ಕೆಲವರಿಗೆ ಈ ಚಳಿಗಾಲವು ಹಳೆಯ ನೆನಪುಗಳನ್ನು ಮೊಗೆದುಕೊಟ್ಟಿದೆ. ಎಂಥ ಬೇಸಿಗೆಯಲ್ಲೂ ಬೆಂಗಳೂರು ಬಿಸಿಯಾಗುತ್ತಿರುತ್ತಿರಲಿಲ್ಲ. ಆದರೆ ಈ ಬಾರಿ ಚಳಿಗಾಲದ ಆರಂಭದಲ್ಲಿಯೇ ಇಂಥ ಹವಾಮಾನ ರೂಪುಗೊಂಡಿರುವುದು ಕೆಲವರಿಗೆ ಖುಷಿಕೊಟ್ಟಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇದೇ ವಾತಾವರಣ ಮುಂದಿನ ಕೆಲ ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಗರವನ್ನು ಆವರಿಸಿರುವ ಮೋಡ ಚೆದುರುವವರೆಗೆ ಉಷ್ಣಾಂಶ ಏರಿಕೆಯಾಗದು.

ಇನ್ನೂ ಕೆಲ ದಿನಗಳವರೆಗೆ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣದೊಂದಿಗೆ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಮುರುಮಳೆಯಿಂದಾಗಿ ಮಂಜುಮುಸುಕಿದ ವಾತಾವರಣ ನಿರ್ಮಾಣಗೊಂಡಿದ್ದರಿಂದ ಟ್ರಾಫಿಕ್ ನಿಧಾನಗತಿಯಲ್ಲಿ ಸಂಚರಿಸುವಂತಾಗಿದೆ. ಮಂಜು ಸುರಿಯುತ್ತಿರುವುದರಿಂದ ವಾಹನ ಸವಾರರು ಹೆಡ್​ಲೈಟ್ ಆನ್ ಮಾಡಿಕೊಂಡೇ ಸಂಚರಿಸಬೇಕಾಯಿತು. ಮಾರತ್ತಹಳ್ಳಿ ಮತ್ತು ಮಲ್ಲೇಶ್ವರಂ ಬಡಾವಣೆಗಳಲ್ಲಿ ಮರಗಳು ಉರುಳಿ, ಸಂಚಾರಕ್ಕೆ ಸಮಸ್ಯೆಯಾಯಿತು.

ತಮಿಳುನಾಡು ಮತ್ತು ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಾಯುಭಾರ ಕುಸಿತ ಹಿನ್ನಲೆ ಮಳೆಯೊಂದಿಗೆ ಚಳಿಯೂ ಹೆಚ್ಚಾಗಿದ್ದು, ಹೂ, ಹಣ್ಣು, ತರಕಾರಿ, ರಾಗಿ, ನೆಲಗಡಲೆ ಬೆಳೆಗಳು ಹಾಳಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಚಿಕ್ಕಮಗಳೂರು ಸೇರಿ 10 ಜಿಲ್ಲೆಗಳಲ್ಲಿ 4 ದಿನ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಇದನ್ನೂ ಓದಿ: Karnataka Rain: ಬೆಂಗಳೂರು, ಚಿಕ್ಕಮಗಳೂರು ಸೇರಿ 10 ಜಿಲ್ಲೆಗಳಲ್ಲಿ 4 ದಿನ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Published On - 9:38 am, Fri, 12 November 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್