AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather: ಬೆಂಗಳೂರಿನಲ್ಲಿ ತುಂತುರು ಮಳೆಯ ಜೊತೆಗೆ ಕೊರೆಯುವ ಚಳಿ

ಸತತ ಮೋಡಕವಿದ ವಾತಾವರಣ ಜೊತೆಗೆ ತುಂತುರು ಮಳೆಯಿಂದ ಉಷ್ಣಾಂಶ ಕಡಿಮೆಯಾಗಿದ್ದು, ಚಳಿಗಾಲದ ಅನುಭವ ತಂದುಕೊಡುತ್ತಿದೆ.

Bengaluru Weather: ಬೆಂಗಳೂರಿನಲ್ಲಿ ತುಂತುರು ಮಳೆಯ ಜೊತೆಗೆ ಕೊರೆಯುವ ಚಳಿ
ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ (ಸಂಗ್ರಹ ಚಿತ್ರ)Image Credit source: Deccan Herald
TV9 Web
| Edited By: |

Updated on:Jul 08, 2022 | 11:15 AM

Share

ಬೆಂಗಳೂರು: ನಗರದಲ್ಲಿ ಹಗಲಿರುಳು ತುಂತುರು ಮಳೆ ಸುರಿಯುತ್ತಿದ್ದು ಉಷ್ಣಾಂಶ ಕುಸಿದಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವಷ್ಟು ಭರ್ಜರಿ ಮಳೆ ಉದ್ಯಾನನಗರಿಯಲ್ಲಿ ಬೀಳುತ್ತಿಲ್ಲ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ಸೂರ್ಯನೇ ಕಾಣಿಸುತ್ತಿಲ್ಲ. ಸತತ ಮೋಡಕವಿದ ವಾತಾವರಣ ಜೊತೆಗೆ ತುಂತುರು ಮಳೆಯಿಂದ ಉಷ್ಣಾಂಶ ಕಡಿಮೆಯಾಗಿದ್ದು, ಚಳಿಗಾಲದ ಅನುಭವ ತಂದುಕೊಡುತ್ತಿದೆ. ಜೂನ್ ಅಂತ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್​ನಷ್ಟಿದ್ದ ನಗರದ ಗರಿಷ್ಠ ಉಷ್ಣಾಂಶ ಈಗ 25 ಡಿಗ್ರಿ ಸೆಲ್ಸಿಯಸ್ ಆಸುಪಾಸಿಗೆ ಬಂದಿದೆ. ಕನಿಷ್ಠ ಉಷ್ಣಾಂಶ ಪ್ರಮಾಣವು 18 ಡಿಗ್ರಿಗೆ ಇಳಿದಿದೆ. ನಗರದಲ್ಲಿ ಇನ್ನೂ ಎರಡು ದಿನಗಳ ಕಾಲ ತಂಪಾದ ವಾತಾವರಣ ಇರಲಿದ್ದು, ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನವು 24 ಡಿಗ್ರಿಗೆ ಸೆಲ್ಸಿಯಸ್​ಗೆ ಬರಬಹುದು ಎಂದು ಅಂದಾಜಿಸಲಾಗಿದೆ.

ಚಳಿಗಾಲದ ಹವಾಮಾನವೇ ನಗರದಲ್ಲಿ ಕಂಡು ಬರುತ್ತಿದೆ. ನಿನ್ನೆಯ (ಜುಲೈ) ಗರಿಷ್ಠ ಉಷ್ಣಾಂಶ 23.7 ಡಿಗ್ರಿ ಸೆಲ್ಸಿಯಸ್ ಇತ್ತು. ಚಳಿಗಾಲದಲ್ಲಿಯೂ ನಗರದಲ್ಲಿ ಉಷ್ಣಾಂಶ ಈ ಮಟ್ಟಕ್ಕೆ ಕುಸಿಯುವುದು ಅಪರೂಪ. ಇಡೀ ದಿನ ನಗರದ ಹಲವೆಡೆ ಜುಮುರು ಮಳೆ ಮುಂದುವರಿದಿತ್ತು. ನಗರದಲ್ಲಿ ಕಂಡುಬರುತ್ತಿರುವ ಚಳಿಗಾಲದ ಹವಾಮಾನಕ್ಕೆ ಮುಂಗಾರು ಮಾರುತಗಳೇ ಮುಖ್ಯ ಕಾರಣ. ಇದರ ಜೊತೆಗೆ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವುದೂ ನಗರದ ಉಷ್ಣಾಂಶದ ಪರಿಣಾಮ ಬೀರಿದೆ.

ಶಾಲಾ ಕಾಲೇಜುಗಳಿಗೆ ರಜೆ

ಕರ್ನಾಟಕದ ವಿವಿಧೆಡೆ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಮಲೆನಾಡು ಭಾಗವಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಬಿರುಸಾಗಿದೆ. ಕಾವೇರಿ, ತುಂಗಭದ್ರಾ, ಕೃಷ್ಣಾ ಸೇರಿದಂತೆ ಬಹುತೇಕ ಎಲ್ಲ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಶಾಲೆ, ಕಾಲೇಜು ಮತ್ತು ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಸುಳ್ಯ: ಕುಸಿದ ಗುಡ್ಡ, ದಿಕ್ಕಾಪಾಲಾಗಿ ಓಡಿದ ಜನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣದ ವಾಣಿಜ್ಯ ಸಮುಚ್ಚಯ ಸಮೀಪ ಗುಡ್ಡ ಕುಸಿದಿದೆ. ಕೊಡಗಿನಲ್ಲಿ ಇತ್ತೀಚೆಗೆ ಭೂಕಂಪವಾಗಿತ್ತು. ಅದಾದ ನಂತರ ಇಲ್ಲಿಯೂ ಮಣ್ಣು ಸಡಿಲವಾಗಿತ್ತು. ಹಠಾತ್ ಗುಡ್ಡ ಕುಸಿದಾಗ ಜನರು ಹೆದರಿ ಓಡಿದರು.

Published On - 11:14 am, Fri, 8 July 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು