AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather: ಶಿಮ್ಲಾಗಿಂತಲೂ ಬೆಂಗಳೂರೇ ಕೂಲ್!; ದಾಖಲೆಯ ಚಳಿಗೆ ನಡುಗಿದ ಸಿಲಿಕಾನ್ ಸಿಟಿ

Bangalore Temperature: ಹವಾಮಾನ ಬ್ಲಾಗರ್‌ಗಳ ಪ್ರಕಾರ, ಮಹಾಬಲೇಶ್ವರ ಮತ್ತು ಶಿಮ್ಲಾ ಸೇರಿದಂತೆ ಭಾರತದ ಅನೇಕ ಗಿರಿಧಾಮಗಳಿಗಿಂತ ಬೆಂಗಳೂರಿನ ವಾತಾವರಣ ತಂಪಾಗಿದೆ.

Bengaluru Weather: ಶಿಮ್ಲಾಗಿಂತಲೂ ಬೆಂಗಳೂರೇ ಕೂಲ್!; ದಾಖಲೆಯ ಚಳಿಗೆ ನಡುಗಿದ ಸಿಲಿಕಾನ್ ಸಿಟಿ
ಬೆಂಗಳೂರು ಹವಾಮಾನ
TV9 Web
| Edited By: |

Updated on:May 13, 2022 | 6:13 PM

Share

ಬೆಂಗಳೂರು: ಬೇಸಿಗೆಯ ಹಾಲಿ ಡೇ ಕಳೆಯಲೆಂದು ಎಲ್ಲರೂ ಹಿಲ್ ಸ್ಟೇಷನ್​ (Hill Stations), ಶಿಮ್ಲಾ (Shimla), ಕೊಡಗು, ಚಿಕ್ಕಮಗಳೂರು, ಕುಲು-ಮನಾಲಿ ಮುಂತಾದ ಸ್ಥಳಗಳಿಗೆ ಹೋಗುತ್ತಾರೆ. ಈ ಸೆಖೆಯನ್ನು ತಡೆಯಲಾರದೆ ವೀಕೆಂಡ್​ಗೆ ತಂಪಾದ ಸ್ಥಳಗಳಿಗೆ ಹೋಗುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಆದರೆ, ಬೆಂಗಳೂರು (Bengaluru Climate) ಈಗ ಯಾವ ಶಿಮ್ಲಾಗೂ ಕಡಿಮೆಯಿಲ್ಲ. ಎರಡು ದಿನಗಳಿಂದ ಬೆಂಗಳೂರಿನಲ್ಲಿ ತಾಪಮಾನ (Bangalore Weather) ಭಾರೀ ಕುಸಿತವಾಗಿದ್ದು, ಇಲ್ಲಿನ ವಾತಾವರಣ ಶಿಮ್ಲಾವನ್ನೂ ಮೀರಿಸುವಂತಿದೆ. ಬೆಂಗಳೂರಿನಲ್ಲಿ 23 ಡಿಗ್ರಿ ಸೆಲ್ಸಿಯಸ್​ಗಿಂತಲೂ ತಾಪಮಾನ ಕುಸಿತವಾಗಿದ್ದು, ಹಲವು ಹಿಲ್ ಸ್ಟೇಷನ್​ಗಳಿಗಿಂತಲೂ ಬೆಂಗಳೂರಿನಲ್ಲೇ ಕಡಿಮೆ ತಾಪಮಾನವಿದೆ. ಬೆಳಗ್ಗೆಯಿಂದ ರಾತ್ರಿವರೆಗೂ ಮೋಡ ಮುಸುಕಿದ ವಾತಾವರಣವಿದ್ದು, ಚುಮುಗುಡುವ ಚಳಿಗೆ ಬೆಂಗಳೂರಿಗರು ಗಡಗಡ ನಡುಗುತ್ತಿದ್ದಾರೆ.

ಗುರುವಾರ ತಾಪಮಾನವು 11 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿದಿದ್ದರಿಂದ ಕಳೆದ 50 ವರ್ಷಗಳಲ್ಲಿ ಮೇ ತಿಂಗಳಲ್ಲಿ ಬೆಂಗಳೂರು ಎರಡನೇ ಅತಿ ಚಳಿಯ ದಿನವನ್ನು ದಾಖಲಿಸಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‌ನಿಂದ 23 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ. 1972ರ ಮೇ 14ರಂದು ಬೆಂಗಳೂರಿನಲ್ಲಿ ಕೊನೆಯ ಬಾರಿಗೆ ತಂಪಾದ ದಿನವನ್ನು ದಾಖಲಿಸಿತ್ತು. ಇಲ್ಲಿನ ತಾಪಮಾನವು 22.2 ಡಿಗ್ರಿ ಸೆಲ್ಸಿಯಸ್ ಇತ್ತು.

ಇದನ್ನೂ ಓದಿ
Image
Karnataka Rain: ಅಸಾನಿ ಚಂಡಮಾರುತ ಎಫೆಕ್ಟ್: ಇನ್ನೆರಡು ದಿನ ಸಿಲಿಕಾನ್ ಸಿಟಿ ಫುಲ್ ಕೂಲ್ ಕೂಲ್
Image
Karnataka Rain: ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ
Image
Cyclone Asani: ಅಸಾನಿ ಚಂಡಮಾರುತದ ಅಬ್ಬರ; 22 ವರ್ಷಗಳಲ್ಲೇ ಅತ್ಯಂತ ಚಳಿಯ ದಿನ ದಾಖಲು

ಅಸಾನಿ ಚಂಡಮಾರುತ ಪರಿಣಾಮ: ಈಶಾನ್ಯ ಮತ್ತು ದಕ್ಷಿಣ ಕರ್ನಾಟಕದಲ್ಲಿ ಕಳೆದ 10 ದಿನಗಳಿಂದ ಭಾರೀ ಮಳೆಯಾಗುತ್ತಿತ್ತು. ಆದರೆ, ಇದೀಗ ಮಳೆ ಕಡಿಮೆಯಾಗಿದ್ದರೂ ಚಳಿಯ ವಾತಾವರಣ ಹೆಚ್ಚಾಗಿದೆ. ಈ ತಂಪಾದ ವಾತಾವರಣಕ್ಕೆ ಅಸಾನಿ ಚಂಡಮಾರುತ ಕಾರಣ ಎನ್ನಲಾಗಿದೆ. ಇಂದು ಬೆಳಿಗ್ಗೆ 8.30ಕ್ಕೆ 23 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ತಾಪಮಾನವನ್ನು ದಾಖಲಿಸಿದ ಬೆಂಗಳೂರು ಕಳೆದ 50 ವರ್ಷಗಳಲ್ಲಿ 2ನೇ ಅತಿ ಕಡಿಮೆ ವಾತಾವರಣ ದಾಖಲಿಸುವ ಮೂಲಕ ದಾಖಲೆ ನಿರ್ಮಿಸಿದೆ. ಹವಾಮಾನ ಬ್ಲಾಗರ್‌ಗಳ ಪ್ರಕಾರ, ಮಹಾಬಲೇಶ್ವರ ಮತ್ತು ಶಿಮ್ಲಾ ಸೇರಿದಂತೆ ಭಾರತದ ಅನೇಕ ಗಿರಿಧಾಮಗಳಿಗಿಂತ ಬೆಂಗಳೂರು ವಾತಾವರಣ ತಂಪಾಗಿದೆ.

ಗುರುವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24.3 ಡಿಗ್ರಿ ಸೆಲ್ಸಿಯಸ್ ಮತ್ತು ಶುಕ್ರವಾರ ಬೆಳಿಗ್ಗೆ 23 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಇದೇ ರೀತಿ ಮೋಡ ಕವಿದ ವಾತಾವರಣ ಇರಲಿದೆ ಎಂದು IMD ಮುನ್ಸೂಚನೆ ನೀಡಿರುವುದರಿಂದ ಚಳಿಯ ವಾತಾವರಣವು ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯದ ಇತರ ಭಾಗಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಗುರುವಾರ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ.

ಮುಂದಿನ 48 ಗಂಟೆಗಳಲ್ಲಿ, ಕರ್ನಾಟಕದ ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Fri, 13 May 22

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ