AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather Today: ಬೆಂಗಳೂರಿನಲ್ಲಿ ಇಂದು ಕೂಡ ವರುಣನ ಅಬ್ಬರ; ನಾಳೆಯಿಂದ ಮಳೆ ಕ್ಷೀಣ

Karnataka Rains: ಅಕ್ಟೋಬರ್ ಆರಂಭದಿಂದ ಬೆಂಗಳೂರಿನಲ್ಲಿ 457.2 ಮಿ.ಮೀ ಮಳೆಯಾಗಿದೆ. ಡಿಸೆಂಬರ್‌ನಲ್ಲಿ ನಗರದಲ್ಲಿ 80 ಮಿ.ಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಡಿಸೆಂಬರ್ 11ರಂದು ಅತಿ ಹೆಚ್ಚು (41 ಮಿ.ಮೀ) ಮಳೆಯಾಗಿದೆ.

Bengaluru Weather Today: ಬೆಂಗಳೂರಿನಲ್ಲಿ ಇಂದು ಕೂಡ ವರುಣನ ಅಬ್ಬರ; ನಾಳೆಯಿಂದ ಮಳೆ ಕ್ಷೀಣ
ಬೆಂಗಳೂರಿನಲ್ಲಿ ಮಳೆImage Credit source: Indian Express
TV9 Web
| Edited By: |

Updated on: Dec 14, 2022 | 6:03 AM

Share

Bangalore Rains: ತಮಿಳುನಾಡಿನಲ್ಲಿ (Tamil Nadu Rains) ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಚಳಿ, ಮಳೆ ಹೆಚ್ಚಾಗಿದೆ. ಇಂದು ಕೂಡ ಬೆಂಗಳೂರಿನ (Bengaluru Rain) ಹಲವೆಡೆ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಅಬ್ಬರ ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಶನಿವಾರ ಮುಂಜಾನೆ ತಮಿಳುನಾಡಿನ ಕರಾವಳಿಯನ್ನು ದಾಟಿದ ಮಾಂಡೌಸ್ ಚಂಡಮಾರುತದ (Cyclone Mandous) ಪ್ರಭಾವದಿಂದ ಬೆಂಗಳೂರು ನಗರದಲ್ಲಿ ಶೀತ ವಾತಾವರಣ ಮುಂದುವರೆದಿದೆ.

ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ 9.2 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಹವಾಮಾನ ಇಲಾಖೆಯು ಇಂದು ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ. ಅಕ್ಟೋಬರ್ ಆರಂಭದಿಂದ ಬೆಂಗಳೂರಿನಲ್ಲಿ 457.2 ಮಿ.ಮೀ ಮಳೆಯಾಗಿದೆ. ಡಿಸೆಂಬರ್‌ನಲ್ಲಿ ನಗರದಲ್ಲಿ 80 ಮಿ.ಮೀ ಗಿಂತ ಹೆಚ್ಚು ಮಳೆ ದಾಖಲಾಗಿದ್ದು, ಡಿಸೆಂಬರ್ 11ರಂದು ಅತಿ ಹೆಚ್ಚು (41 ಮಿ.ಮೀ) ಮಳೆಯಾಗಿದೆ.

ಬೆಂಗಳೂರು ಈಗಾಗಲೇ ಅಕ್ಟೋಬರ್ ವೇಳೆಗೆ ಅತಿ ಹೆಚ್ಚು ಮಳೆಯಾದ ವರ್ಷ ಎಂಬ ದಾಖಲೆಯನ್ನು ನಿರ್ಮಿಸಿದೆ. ಕಳೆದ ವಾರ ನವೆಂಬರ್ ವೇಳೆಗೆ ನಗರದಲ್ಲಿ ಸುಮಾರು 1,849 ಮಿಮೀ ಮಳೆಯಾಗಿದೆ. ಈಶಾನ್ಯ ಮಾನ್ಸೂನ್ ಋತುವಿನಲ್ಲಿ ಉತ್ತಮ ಮಳೆಯಾಗುವುದರಿಂದ ಡಿಸೆಂಬರ್ ಅಂತ್ಯದ ವೇಳೆಗೆ ಒಟ್ಟು ಮಳೆಯು 2,000 ಮಿಮೀ ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather Updates: ಡಿಸೆಂಬರ್ 16ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ತುಮಕೂರು, ಹಾಸನ ಮತ್ತು ದಾವಣಗೆರೆಯ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಇಂದು ‘ಹಳದಿ’ ಅಲರ್ಟ್​ ನೀಡಲಾಗಿದೆ. ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ. 16ರವರೆಗೂ ಮಳೆಯಾಗಲಿದೆ. ಮಾಂಡೌಸ್ ಚಂಡಮಾರುತ ದುರ್ಬಲವಾಗಿದ್ದರೂ ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ IMD ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯಾವುದೇ ಹಾನಿಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಹಲವೆಡೆ ಇನ್ನೂ 4 ದಿನ ಗುಡುಗು ಸಹಿತ ಮಳೆ; ಹಳದಿ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಮತ್ತು ಬಳ್ಳಾರಿಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇದರ ಜೊತೆಗೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್