AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ.

ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್
ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪಶ್ಚಿಮ ವಿಭಾಗದ ಪೊಲೀಸರಿಂದ ದಾಳಿ
TV9 Web
| Updated By: ಆಯೇಷಾ ಬಾನು|

Updated on:Nov 07, 2021 | 11:30 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳ ಮನೆಗಳ ಮೇಲೆ ಬೆಳಗ್ಗೆ ಐದು ಗಂಟೆಗೆ ಸುಮಾರು 600 ಪೊಲೀಸರು ದಾಳಿ ನಡೆಸಿದ್ದಾರೆ.

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ. ಬೆಂಗಳೂರಿನ ಕಾಟನ್‌ಪೇಟೆ, ಚಾಮರಾಜಪೇಟೆ ಠಾಣೆ, ಬ್ಯಾಟರಾಯನಪುರ, ಜೆಜೆನಗರ, ಕೆ.ಪಿ.ಅಗ್ರಹಾರ ಠಾಣೆ, ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ದಾಳಿ ನಡೆದಿದೆ.

ಇನ್ನು ಈ ದಾಳಿ ಬಗ್ಗೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಪಶ್ಚಿಮ ವಿಭಾಗದ 600 ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. 180 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. 123 ರೌಡಿಗಳು, ಡ್ರಗ್ಸ್ ಪೆಡ್ಲರ್ಸ್ ಠಾಣೆಗೆ ಕರೆತಂದು ವಾರ್ನ್ ಮಾಡಲಾಗಿದೆ. ಸಮನ್ಸ್ ನೀಡಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಹೀಗಾಗಿ ಆರೋಪಿಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿದ್ದೇವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌

Published On - 8:22 am, Sun, 7 November 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?