AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ.

ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್
ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪಶ್ಚಿಮ ವಿಭಾಗದ ಪೊಲೀಸರಿಂದ ದಾಳಿ
TV9 Web
| Edited By: |

Updated on:Nov 07, 2021 | 11:30 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳ ಮನೆಗಳ ಮೇಲೆ ಬೆಳಗ್ಗೆ ಐದು ಗಂಟೆಗೆ ಸುಮಾರು 600 ಪೊಲೀಸರು ದಾಳಿ ನಡೆಸಿದ್ದಾರೆ.

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ. ಬೆಂಗಳೂರಿನ ಕಾಟನ್‌ಪೇಟೆ, ಚಾಮರಾಜಪೇಟೆ ಠಾಣೆ, ಬ್ಯಾಟರಾಯನಪುರ, ಜೆಜೆನಗರ, ಕೆ.ಪಿ.ಅಗ್ರಹಾರ ಠಾಣೆ, ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ದಾಳಿ ನಡೆದಿದೆ.

ಇನ್ನು ಈ ದಾಳಿ ಬಗ್ಗೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಪಶ್ಚಿಮ ವಿಭಾಗದ 600 ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. 180 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. 123 ರೌಡಿಗಳು, ಡ್ರಗ್ಸ್ ಪೆಡ್ಲರ್ಸ್ ಠಾಣೆಗೆ ಕರೆತಂದು ವಾರ್ನ್ ಮಾಡಲಾಗಿದೆ. ಸಮನ್ಸ್ ನೀಡಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಹೀಗಾಗಿ ಆರೋಪಿಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿದ್ದೇವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌

Published On - 8:22 am, Sun, 7 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!