AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ.

ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್
ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪಶ್ಚಿಮ ವಿಭಾಗದ ಪೊಲೀಸರಿಂದ ದಾಳಿ
TV9 Web
| Edited By: ಆಯೇಷಾ ಬಾನು|

Updated on:Nov 07, 2021 | 11:30 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳ ಮನೆಗಳ ಮೇಲೆ ಬೆಳಗ್ಗೆ ಐದು ಗಂಟೆಗೆ ಸುಮಾರು 600 ಪೊಲೀಸರು ದಾಳಿ ನಡೆಸಿದ್ದಾರೆ.

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ. ಬೆಂಗಳೂರಿನ ಕಾಟನ್‌ಪೇಟೆ, ಚಾಮರಾಜಪೇಟೆ ಠಾಣೆ, ಬ್ಯಾಟರಾಯನಪುರ, ಜೆಜೆನಗರ, ಕೆ.ಪಿ.ಅಗ್ರಹಾರ ಠಾಣೆ, ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ದಾಳಿ ನಡೆದಿದೆ.

ಇನ್ನು ಈ ದಾಳಿ ಬಗ್ಗೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಪಶ್ಚಿಮ ವಿಭಾಗದ 600 ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. 180 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. 123 ರೌಡಿಗಳು, ಡ್ರಗ್ಸ್ ಪೆಡ್ಲರ್ಸ್ ಠಾಣೆಗೆ ಕರೆತಂದು ವಾರ್ನ್ ಮಾಡಲಾಗಿದೆ. ಸಮನ್ಸ್ ನೀಡಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಹೀಗಾಗಿ ಆರೋಪಿಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿದ್ದೇವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌

Published On - 8:22 am, Sun, 7 November 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!