AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ನಾಳೆ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ

ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ವೀಲ್‌ಚೇರ್ ಸ್ನೇಹಿ ಶೌಚಾಲಯವನ್ನು ಜುಲೈ 26ರಂದು ಉದ್ಘಾಟಿಸಲಾಗುತ್ತಿದೆ. ಭಾರತದ ಆಸ್ಟ್ರೇಲಿಯಾ ಹೈಕಮಿಷನ್ ಮತ್ತು ಕರ್ನಾಟಕ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರ‍್ಯಾಂಪ್ ಮೈ ಸಿಟಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಸಂಸದ ತೇಜಸ್ವಿ ಸೂರ್ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ನಾಳೆ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ
ಲಾಲ್‌ಬಾಗ್‌
ಗಂಗಾಧರ​ ಬ. ಸಾಬೋಜಿ
|

Updated on:Jul 25, 2025 | 12:27 PM

Share

ಬೆಂಗಳೂರು, ಜುಲೈ 25 ಸಿಲಿಕಾನ್​ ಸಿಟಿ ಜನರ ನೆಚ್ಚಿನ ತಾಣಗಳಲ್ಲಿ ಲಾಲ್‌ಬಾಗ್‌ (Lalbagh) ಕೂಡ ಒಂದು. ನಿತ್ಯ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಸದ್ಯ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ನಿರ್ಮಿಸಲಾಗಿರುವ ವೀಲ್‌ಚೇರ್​​ ಸ್ನೇಹಿ ಶೌಚಾಲಯವನ್ನು ಶನಿವಾರ (ಜುಲೈ 26)ದಂದು ಉದ್ಘಾಟನೆಗೊಳ್ಳಲಿದೆ. ಸಂಸದ ತೇಜಸ್ವಿ ಸೂರ್ಯ (Tejasvi Surya) ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ವೀಲ್‌ಚೇರ್​​ ಸ್ನೇಹಿ ಶೌಚಾಲಯವನ್ನು ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ ವೆಸ್ಟ್ ಗೇಟ್ ಬಳಿಯ ಪ್ರಮುಖ ಸ್ಥಳದಲ್ಲಿ ನಿರ್ಮಿಸಲಾಗಿದೆ. ಭಾರತದಲ್ಲಿರುವ ಆಸ್ಟ್ರೇಲಿಯಾ ಹೈಕಮಿಷರ್​ ಮತ್ತು ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ರ‍್ಯಾಂಪ್​ ಮೈ ಸಿಟಿ ಎಂಬ ಸರ್ಕಾರೇತರ ಸಂಸ್ಥೆಯು ನಿರ್ಮಿಸಿದೆ. ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್​​ಗೆ ಭೇಟಿ ನೀಡುವ ದಿವ್ಯಾಂಗರಿಗೆ ಈ ವೀಲ್‌ಚೇರ್ ಸ್ನೇಹಿ ಶೌಚಾಲಯವು ಅನುಕೂಲವಾಗಲಿದೆ.

ಇದನ್ನೂ ಓದಿ: ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ

ಇದನ್ನೂ ಓದಿ
Image
ಕರ್ನಾಟಕದ ಕರಾವಳಿಗೆ ರೆಡ್ ಅಲರ್ಟ್​, 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
Image
ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ವಿತರಣೆಗೆ ಬಮೂಲ್ ಪ್ರಸ್ತಾಪ
Image
ಇಡೀ ಬೆಂಗಳೂರಿನಲ್ಲಿ 3% ಮಾತ್ರ ಹಸಿರು ಪರಿಸರ: ಐಐಎಸ್ಸಿ ತಜ್ಞರ ವರದಿ ಬಹಿರಂಗ
Image
ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಲಿದ್ದು, ಭಾರತದಲ್ಲಿರುವ ಆಸ್ಟ್ರೇಲಿಯಾ ಹೈಕಮಿಷರ್​​ ಫಿಲಿಪ್ ಗ್ರೀನ್, ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ರಾಯಭಾರಿಯ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗ್ರೀಚಿ ಮತ್ತು ರ‍್ಯಾಂಪ್​​ ಮೈ ಸಿಟಿ ಸಂಸ್ಥಾಪಕ ಪ್ರತೀಕ್ ಖಂಡೇಲ್ವಾಲ್ ಅವರು ಉಪಸ್ಥಿತರಿರಲಿದ್ದಾರೆ.

ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಫಲಪುಷ್ಪ ಪ್ರದರ್ಶನ

ಇನ್ನು ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ತೋಟಗಾರಿಕೆ ಇಲಾಖೆ ಬೆಂಗಳೂರಿನ ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತಿದೆ. ಇದೇ ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದೆ. ಈ ಬಾರಿ 218ನೇ ಫ್ಲವರ್​ ಶೋನಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಪ್ರದರ್ಶನ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:25 pm, Fri, 25 July 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ