AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ನಾಳೆ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ

ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ವೀಲ್‌ಚೇರ್ ಸ್ನೇಹಿ ಶೌಚಾಲಯವನ್ನು ಜುಲೈ 26ರಂದು ಉದ್ಘಾಟಿಸಲಾಗುತ್ತಿದೆ. ಭಾರತದ ಆಸ್ಟ್ರೇಲಿಯಾ ಹೈಕಮಿಷನ್ ಮತ್ತು ಕರ್ನಾಟಕ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರ‍್ಯಾಂಪ್ ಮೈ ಸಿಟಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಸಂಸದ ತೇಜಸ್ವಿ ಸೂರ್ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ನಾಳೆ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ
ಲಾಲ್‌ಬಾಗ್‌
ಗಂಗಾಧರ​ ಬ. ಸಾಬೋಜಿ
|

Updated on:Jul 25, 2025 | 12:27 PM

Share

ಬೆಂಗಳೂರು, ಜುಲೈ 25 ಸಿಲಿಕಾನ್​ ಸಿಟಿ ಜನರ ನೆಚ್ಚಿನ ತಾಣಗಳಲ್ಲಿ ಲಾಲ್‌ಬಾಗ್‌ (Lalbagh) ಕೂಡ ಒಂದು. ನಿತ್ಯ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಸದ್ಯ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ನಿರ್ಮಿಸಲಾಗಿರುವ ವೀಲ್‌ಚೇರ್​​ ಸ್ನೇಹಿ ಶೌಚಾಲಯವನ್ನು ಶನಿವಾರ (ಜುಲೈ 26)ದಂದು ಉದ್ಘಾಟನೆಗೊಳ್ಳಲಿದೆ. ಸಂಸದ ತೇಜಸ್ವಿ ಸೂರ್ಯ (Tejasvi Surya) ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ವೀಲ್‌ಚೇರ್​​ ಸ್ನೇಹಿ ಶೌಚಾಲಯವನ್ನು ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ ವೆಸ್ಟ್ ಗೇಟ್ ಬಳಿಯ ಪ್ರಮುಖ ಸ್ಥಳದಲ್ಲಿ ನಿರ್ಮಿಸಲಾಗಿದೆ. ಭಾರತದಲ್ಲಿರುವ ಆಸ್ಟ್ರೇಲಿಯಾ ಹೈಕಮಿಷರ್​ ಮತ್ತು ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ರ‍್ಯಾಂಪ್​ ಮೈ ಸಿಟಿ ಎಂಬ ಸರ್ಕಾರೇತರ ಸಂಸ್ಥೆಯು ನಿರ್ಮಿಸಿದೆ. ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್​​ಗೆ ಭೇಟಿ ನೀಡುವ ದಿವ್ಯಾಂಗರಿಗೆ ಈ ವೀಲ್‌ಚೇರ್ ಸ್ನೇಹಿ ಶೌಚಾಲಯವು ಅನುಕೂಲವಾಗಲಿದೆ.

ಇದನ್ನೂ ಓದಿ: ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ

ಇದನ್ನೂ ಓದಿ
Image
ಕರ್ನಾಟಕದ ಕರಾವಳಿಗೆ ರೆಡ್ ಅಲರ್ಟ್​, 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ
Image
ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ವಿತರಣೆಗೆ ಬಮೂಲ್ ಪ್ರಸ್ತಾಪ
Image
ಇಡೀ ಬೆಂಗಳೂರಿನಲ್ಲಿ 3% ಮಾತ್ರ ಹಸಿರು ಪರಿಸರ: ಐಐಎಸ್ಸಿ ತಜ್ಞರ ವರದಿ ಬಹಿರಂಗ
Image
ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ: ಈ ಬಾರಿ ಚೆನ್ನಮ್ಮ, ರಾಯಣ್ಣ ದರ್ಶನ

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಲಿದ್ದು, ಭಾರತದಲ್ಲಿರುವ ಆಸ್ಟ್ರೇಲಿಯಾ ಹೈಕಮಿಷರ್​​ ಫಿಲಿಪ್ ಗ್ರೀನ್, ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ರಾಯಭಾರಿಯ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗ್ರೀಚಿ ಮತ್ತು ರ‍್ಯಾಂಪ್​​ ಮೈ ಸಿಟಿ ಸಂಸ್ಥಾಪಕ ಪ್ರತೀಕ್ ಖಂಡೇಲ್ವಾಲ್ ಅವರು ಉಪಸ್ಥಿತರಿರಲಿದ್ದಾರೆ.

ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಫಲಪುಷ್ಪ ಪ್ರದರ್ಶನ

ಇನ್ನು ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ತೋಟಗಾರಿಕೆ ಇಲಾಖೆ ಬೆಂಗಳೂರಿನ ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತಿದೆ. ಇದೇ ಆಗಸ್ಟ್ 7ರಿಂದ ಆಗಸ್ಟ್ 18ರ ವರೆಗೆ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದೆ. ಈ ಬಾರಿ 218ನೇ ಫ್ಲವರ್​ ಶೋನಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಪ್ರದರ್ಶನ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:25 pm, Fri, 25 July 25

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?