AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸೈರನ್ ಹಾಕಿದ್ರೂ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ ಮಾಡಿ ಪುಂಡಾಟಿಕೆ

ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಬೈಕ್ ಸವಾರರ ಅಪಾಯಕಾರಿ ವೀಲಿಂಗ್ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರೋಗಿಯೊಬ್ಬರನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್ ತಡೆದು, ಅಪಾಯಕಾರಿ ಸ್ಟಂಟ್ ಪ್ರದರ್ಶಿಸಿದ ಪುಂಡರ ಕೃತ್ಯ ಕೊಲೆ ಯತ್ನಕ್ಕೆ ಸಮಾನ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದು ರಸ್ತೆ ಸುರಕ್ಷತೆಯ ಗಂಭೀರ ಉಲ್ಲಂಘನೆಯಾಗಿದೆ.

ಬೆಂಗಳೂರಿನಲ್ಲಿ ಸೈರನ್ ಹಾಕಿದ್ರೂ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ ಮಾಡಿ ಪುಂಡಾಟಿಕೆ
ಬೆಂಗಳೂರು ವೀಲಿಂಗ್Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Jul 06, 2026 | 5:44 PM

Share

ಮುಖ್ಯಾಂಶಗಳು

  • ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಪುಂಡರ ವೀಲಿಂಗ್ ಘಟನೆ
  • ಆಂಬ್ಯುಲೆನ್ಸ್ ರೋಗಿಯೊಬ್ಬರನ್ನು ಹೊತ್ತು ವೇಗವಾಗಿ ಸಾಗುತ್ತಿತ್ತು
  • ಆಂಬ್ಯುಲೆನ್ಸ್​​​ಗೆ ದಾರಿ ನೀಡಿದೆ ಹುಚ್ಚಾಟ

ಬೆಂಗಳೂರು, ಜು. 6: “ಮಾನವನ ಜೀವ ರಸ್ತೆ ಬದಿಯ ಸ್ಟಂಟ್‌ಗಳಿಗಿಂತಲೂ ಅಗ್ಗವಾಗಿಬಿಟ್ಟಿದೆಯೇ?” – ಇಂತಹದ್ದೊಂದು ಗಂಭೀರ ಹಾಗೂ ಆತಂಕಕಾರಿ ಪ್ರಶ್ನೆ ಮೂಡುವಂತೆ ಮಾಡಿದೆ ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಪುಂಡರ ವೀಲಿಂಗ್ ಘಟನೆ. ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್‌ನ ಸೈರನ್ ಧ್ವನಿ ಜೋರಾಗಿ ಕೇಳಿಸುತ್ತಿದ್ದರೂ, ಅದಕ್ಕೆ ದಾರಿ ಬಿಡದೆ ರಸ್ತೆಯಲ್ಲೇ ಅಪಾಯಕಾರಿ ವೀಲಿಂಗ್ (Wheelies) ಪ್ರದರ್ಶನ ಮಾಡಿದ ಬೈಕ್ ಸವಾರರ ಅಮಾನವೀಯ ಕೃತ್ಯ ಸದ್ಯ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋವನ್ನು @Karnataka Portfolio ಎಂಬ ಎಕ್ಸ್​​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಮಾಹಿತಿಯ ಪ್ರಕಾರ, ಈ ಘಟನೆಯು ಜುಲೈ 4 ರಂದು ನಡುರಾತ್ರಿ ಸುಮಾರು 2:30 ರ ಸುಮಾರಿಗೆ ಬೆಂಗಳೂರಿನ ಗೊರಗುಂಟೆಪಾಳ್ಯ ಮತ್ತು ಯಶವಂತಪುರ ನಡುವಿನ ಹೆದ್ದಾರಿ ರಸ್ತೆಯಲ್ಲಿ ಸಂಭವಿಸಿದೆ. ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ರೋಗಿಯೊಬ್ಬರನ್ನು ಹೊತ್ತು ವೇಗವಾಗಿ ಸಾಗುತ್ತಿತ್ತು. ಈ ವೇಳೆ ರಸ್ತೆಯಲ್ಲಿದ್ದ ಬೈಕ್ ಸವಾರರ ಗುಂಪೊಂದು, ತುರ್ತು ವಾಹನಕ್ಕೆ ಸೈಡ್ ಕೊಡುವುದನ್ನು ಬಿಟ್ಟು, ಅದರ ಮುಂಭಾಗದಲ್ಲೇ ಅಪಾಯಕಾರಿ ಸ್ಟಂಟ್‌ಗಳನ್ನು ಮುಂದುವರಿಸಿದೆ. ಇದು ಆಂಬ್ಯುಲೆನ್ಸ್ ಒಳಗಿದ್ದ ರೋಗಿಯ ಜೀವದ ಜೊತೆ ಮಾತ್ರವಲ್ಲದೆ, ಸ್ವತಃ ಆ ಪುಂಡರ ಜೀವಕ್ಕೂ ಆಪತ್ತು ತರುವಂತಿತ್ತು.

ವಿಡಿಯೋ ಇಲ್ಲಿದೆ ನೋಡಿ:

ಇಂತಹ ಬೇಜವಾಬ್ದಾರಿ ವರ್ತನೆ ಕೇವಲ ರಸ್ತೆ ನಿಯಮದ ಉಲ್ಲಂಘನೆಯಷ್ಟೇ ಅಲ್ಲ, ಕೊಲೆ ಯತ್ನಕ್ಕೆ ಸಮಾನವಾಗಿದೆ. ಆಂಬ್ಯುಲೆನ್ಸ್‌ನಂತಹ ತುರ್ತು ವಾಹನಗಳನ್ನು ತಡೆಯುವುದರಿಂದ ಜೀವ ಉಳಿಸುವ ಚಿಕಿತ್ಸೆ ವಿಳಂಬವಾಗಿ ರೋಗಿ ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಸಾರ್ವಜನಿಕ ರಸ್ತೆಗಳು ಇಂತಹ ಸ್ಟಂಟ್‌ಗಳಿಗೆ ಇರುವ ಅಖಾಡಗಳಲ್ಲ. ಇಲ್ಲಿ ವೀಲಿಂಗ್ ಮಾಡುವುದರಿಂದ ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವಕ್ಕೂ ಗಂಡಾಂತರ ಎದುರಾಗುತ್ತದೆ ಎಂದು ನೆಟ್ಟಿಗರು ಗರಂ ಆಗಿದ್ದಾರೆ.

ಇದನ್ನೂ ಓದಿ: ಆಷಾಢ ಆರಂಭದಲ್ಲೇ ಮಾಂಸಪ್ರಿಯರಿಗೆ ಶಾಕ್: ಚಿಕನ್, ಮೊಟ್ಟೆ ಬೆಲೆಯಲ್ಲಿ ದಾಖಲೆಯ ಏರಿಕೆ

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಬೆಂಗಳೂರು ಸಂಚಾರಿ ಪೊಲೀಸರು, ವೀಲಿಂಗ್ ಪುಂಡರನ್ನು ಪತ್ತೆಹಚ್ಚಲು ಆ ರಸ್ತೆಯ ಸಿಸಿಟಿವಿ ದೃಶ್ಯಾವಳಿಗಳನ್ನು ತೀವ್ರವಾಗಿ ಜಾಲಾಡುತ್ತಿದ್ದಾರೆ. ಸಿಸಿಟಿವಿ ಆಧಾರದ ಮೇಲೆ ಬೈಕ್ ಸಂಖ್ಯೆಗಳನ್ನು ಪತ್ತೆಹಚ್ಚಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಎಫ್‌ಐಆರ್ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಸಾಮಾಜಿಕ ಜಾಲತಾಣಗಳ ರೀಲ್ಸ್ ಹಪಾಹಪಿತನ ಅಥವಾ ಸಾಹಸದ ಮೋಜು ಮತ್ತೊಬ್ಬರ ಜೀವಕ್ಕಿಂತ ದೊಡ್ಡದಲ್ಲ ಎಂದು ಕಠಿಣ ಶಿಕ್ಷೆ ವಿಧಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!