AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Wheeling: ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರೂ ಸೇರಿ 6 ಯುವಕರ ಸೆರೆ; 8 ಬೈಕ್ ವಶಕ್ಕೆ

ಪೊಲೀಸರು ವಶಪಡಿಸಿಕೊಂಡವರ ಪೈಕಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಅವರ ಬದಲಿಗೆ ಈ ಇಬ್ಬರು ಅಪ್ರಾಪ್ತರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

Bengaluru Wheeling: ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರೂ ಸೇರಿ  6 ಯುವಕರ ಸೆರೆ; 8 ಬೈಕ್ ವಶಕ್ಕೆ
ಬಂಧಿತರು
TV9 Web
| Edited By: |

Updated on:Aug 24, 2021 | 7:39 PM

Share

ಬೆಂಗಳೂರು: ಬೈಕ್ ವ್ಹೀಲಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದ ಬೆಂಗಳೂರು ನಗರ ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ 6 ಜನರನ್ನು ವಶಪಡಿಸಿಕೊಂಡಿದ್ದಾರೆ. ನಗರದ ಪುಲಕೇಶಿನಗರ, ಬಾಣಸವಾಡಿ, ಕೆ.ಆರ್. ಪುರಂ, ಬ್ಯಾಟರಾಯನಪುರ ಸೇರಿದಂತೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 16ರಿಂದ 22ರವರೆಗೆ ಈ ವಿಶೇಷ ಅಭಿಯಾನ ನಡೆಸಲಾಗಿತ್ತು. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 8 ಬೈಕ್​ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿ ಕ್ರಮ‌ ಕೈಗೊಳ್ಳಲಾಗುವುದು. ಮತ್ತು ವ್ಹೀಲಿಂಗ್ ಮಾಡುತ್ತಿದ್ದವರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ವಶಪಡಿಸಿಕೊಂಡವರ ಪೈಕಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಅವರ ಬದಲಿಗೆ ಈ ಇಬ್ಬರು ಅಪ್ರಾಪ್ತರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ಬೈಕ್ ವ್ಹೀಲಿಂಗ್ ಅಭಿಯಾನದಲ್ಲಿ ವಶಪಡಿಸಿಕೊಳ್ಳಲಾದವರ ಪೈಕಿ ಅಪ್ರಾಪ್ತರೇ ಹೆಚ್ಚಾಗಿ ಇದ್ದಾರೆ. ಹೀಗಾಗಿ ಅಪ್ರಾಪ್ತ ಯುವಕರ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ದಿನ ಪೋಷಕರಿಗೆ ಯಾವ ವಯಸ್ಸಿಗೆ ಮಕ್ಕಳಿಗೆ ವಾಹನ ನೀಡಬೇಕೆಂದು ಕೌನ್ಸೆಲಿಂಗ್ ನೀಡುತ್ತೇವೆ. ಬಳಿಕವೂ ಅಂತಹುದೇ ಘಟನೆ ಮುಂದುವರೆದಲ್ಲಿ 5-10 ಲಕ್ಷದ ಬಾಂಡ್ ಅಥವಾ ಜೈಲಿಗೆ ಕಳಿಸುತ್ತೇವೆ. ಅದೇ ರೀತಿ ಅಪ್ರಾಪ್ತರಲ್ಲದಿದ್ದರೂ ಅವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ಜತೆಗೆ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೂ ಕೌನ್ಸೆಲಿಂಗ್ ನಡೆಸುತ್ತೇವೆ. ವಾಹನಗಳ ಅಪಾಯಕಾರಿ ಚಾಲನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು.

ಇದನ್ನೂ ಓದಿ: 

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ

TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?

(Bengaluru Wheeling police arrest 6 youth detained 8 bikes)

Published On - 3:42 pm, Tue, 24 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!