AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಬೆಂಗಳೂರಿನ 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ರೈಡ್

ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಪೊಲೀಸರು ರಾಜಧಾನಿಯಲ್ಲಿ ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಪಿ ಸೈದುಲ್ಲಾ ಅಡಾವತ್ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಹಳೆಯ ಹಾಗೂ ಸಕ್ರಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ತಪಾಸಣೆ ಮಾಡಲಾಗಿದೆ. ಅಪರಾಧದಲ್ಲಿ ಭಾಗಿಯಾದವರಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ತಡರಾತ್ರಿ ಬೆಂಗಳೂರಿನ 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ರೈಡ್
ಬೆಂಗಳೂರು ರೌಡಿ
ಅಕ್ಷಯ್​ ಪಲ್ಲಮಜಲು​​
|

Updated on: Jul 18, 2026 | 2:45 PM

Share

ಬೆಂಗಳೂರು, ಜು.18: ರಾಜಧಾನಿಯಲ್ಲಿ ರೌಡಿ ಚಟುವಟಿಕೆಗಳು ಹಾಗೂ ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕಲು ವೈಟ್‌ಫೀಲ್ಡ್ ವಿಭಾಗದ ಪೊಲೀಸರು ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ವಿಭಾಗದ ಡಿಸಿಪಿ (DCP) ಸೈದುಲ್ಲಾ ಅಡಾವತ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 150ಕ್ಕೂ ಹೆಚ್ಚು ಹಳೆಯ ಹಾಗೂ ಸಕ್ರಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಲಾಗಿದೆ.

ನಗರದ ವೈಟ್‌ಫೀಲ್ಡ್, ವರ್ತೂರು, ಮಹದೇವಪುರ, ಕೆ.ಆರ್. ಪುರಂ ಹಾಗೂ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದೆ. ತಡರಾತ್ರಿ 12 ಗಂಟೆಯಿಂದ ಮುಂಜಾನೆ 3 ಗಂಟೆಯವರೆಗೆ ಪೊಲೀಸರು ರೌಡಿಗಳ ಮನೆಗಳನ್ನು ಜಾಲಾಡಿದ್ದಾರೆ. ಈ ಮೆಗಾ ರೈಡ್‌ಗಾಗಿ ಒಟ್ಟು 28 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಎಸಿಪಿ ಹಾಗೂ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಒಟ್ಟು 140ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಏಕಕಾಲಕ್ಕೆ ರೌಡಿಗಳ ಮನೆಗಳಿಗೆ ನುಗ್ಗಿದ್ದಾರೆ.

ಪೊಲೀಸ್ ತಂಡಗಳು ರೌಡಿಶೀಟರ್‌ಗಳ ಮನೆ, ಪ್ರಸ್ತುತ ವಿಳಾಸ ಹಾಗೂ ಅವರ ಪೂರ್ವಾಪರಗಳ ಬಗ್ಗೆ ತೀವ್ರ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಕೆಲವು ರೌಡಿಗಳನ್ನು ರಸ್ತೆಯಲ್ಲೇ ತಡೆದು ಅವರ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಸರಿಯಾದ ದಾಖಲೆ ಪತ್ರಗಳಿಲ್ಲದ ಒಟ್ಟು 13 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಮುಖಂಡನ ಕಾಲು ಮುರಿತ: 6 ಅಡಿ ಆಳದ ಚರಂಡಿಗೆ ಬಿದ್ದ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ

ದಾಳಿ ವೇಳೆ ರೌಡಿಶೀಟರ್‌ಗಳ ಮನೆಗಳಲ್ಲಿ ಯಾವುದೇ ಮಾರಕಾಸ್ತ್ರಗಳು ಅಥವಾ ಅಕ್ರಮ ವಸ್ತುಗಳು ಇವೆಯೇ ಎಂದು ತಪಾಸಣೆ ನಡೆಸಿದ ಪೊಲೀಸರು, ಎಲ್ಲರಿಗೂ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಶಾಂತಿ ಭಂಗ ಉಂಟುಮಾಡುವುದು, ಹಫ್ತಾ ವಸೂಲಿ ಅಥವಾ ಯಾವುದೇ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಜೈಲಿಗಟ್ಟಲಾಗುವುದು ಎಂದು ಖಾಕಿ ಪಡೆ ಖಡಕ್ ವಾರ್ನಿಂಗ್ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?