Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಸಂಚಾರ ಪೊಲೀಸರು ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಲಂಚ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಒಬ್ಬ ವಾಹನ ಸವಾರ, ಟ್ರಾಫಿಕ್ ನಿಯಮ ಉಲ್ಲಂಘನೆಗೆ 500 ರೂಪಾಯಿಗಳನ್ನು ಫೋನ್‌ಪೇ ಮೂಲಕ ಪೊಲೀಸರಿಗೆ ಪಾವತಿಸಲಾಗಿದೆ ಎಂದು ದೂರಿದ್ದು, ಎಸಿಪಿಗೆ ಮೇಲ್ ಮಾಡಿದ್ದಾರೆ. ಈ ಘಟನೆಯ ಬಗ್ಗೆ ಎಸಿಪಿ ತನಿಖೆಗೆ ಆದೇಶಿಸಿದ್ದಾರೆ.

ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: Ganapathi Sharma

Updated on: Feb 26, 2025 | 11:15 AM

ಬೆಂಗಳೂರು, ಫೆಬ್ರವರಿ 26: ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಲಂಚದ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಆದರೆ, ಈ ಬಾರಿ ಬೆಂಗಳೂರು ಟ್ರಾಫಿಕ್ ಪೊಲೀಸರ ವಿರುದ್ಧದ ಆರೋಪ ಕೇಳಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ! ಏಕೆಂದರೆ, ಫೋನ್ ಪೇ, ಗೂಗಲ್​ ಪೇಯಲ್ಲೇ ಅವರು ಲಂಚ ಪಡೆಯುತ್ತಿರುವುದು ಬಯಲಾಗಿದೆ.

ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ವಿಧಿಸುವ ನೆಪದಲ್ಲಿ ಬೆಂಗಳೂರಿನ ವೈಟ್​ಫೀಲ್ಡ್ ಸಂಚಾರ ಪೊಲೀಸರು ಪೋನ್ ಪೇ, ಗೂಗಲ್ ಪೇ ಮೂಲಕ ತಮ್ಮ ವೈಯಕ್ತಿಕ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಫೋನ್​ ಪೇ ಮೂಲಕ 500 ರೂ. ವರ್ಗಾಯಿಸಿಕೊಂಡಿದ್ದ ಕಾನ್ಸ್​ಟೇಬಲ್

ಫೆಬ್ರವರಿ 21 ರಂದು ವಾಹನ ಸವಾರರೊಬ್ಬರು ವರ್ತೂರು ಕರೆ ಬಳಿ ಓನ್ ವೇಯಲ್ಲಿ ಬಂದಿದ್ದರು. ರಾಚಮಲ್ಲ‌ ಎಂಬಾತ ಓನ್ ವೇಯಲ್ಲಿ ಬಂದು ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್ ಮಂಜುನಾಥ್ ವಾಹನವನ್ನು ಅಡ್ಡ ಹಾಕಿ ನಿಲ್ಲಿಸಿದರು. ವಾಹನ ಸವಾರ 1500 ರೂಪಾಯಿ ದಂಡ ಪಾವತಿಸಲು ಸಿದ್ಧರಾಗಿದ್ದರು. ಆದರೆ, ವಾಹನ ಸವಾರನಿಗೆ ದಂಡದ ರಸೀದಿ ನೀಡಲು ಮಂಜುನಾಥ್ ಸಿದ್ಧರಿರಲಿಲ್ಲ. ಕೊನೆಗೆ 500 ರೂಪಾಯಿ ಫೋನ್ ಪೇ ಮಾಡಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ.

ವೈಟ್ ಫೀಲ್ಡ್ ಸಂಚಾರಿ ಠಾಣೆಯಲ್ಲಿ ದೂರು ದಾಖಲು

ವೈಟ್​ಫೀಲ್ಡ್ ಸಂಚಾರ ಪೊಲೀಸರ ಲಂಚಾವಾತರದ ಬಗ್ಗೆ ವಾಹನ ಸವಾರ ರಾಚಮಲ್ಲ ಎಸಿಪಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ. ಕಾನ್ಸ್​ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಚಮಲ್ಲ ದೂರಿನಲ್ಲಿ ಆಗ್ರಹಿಸಿದ್ದಾರೆ. ಇ ಮೇಲ್ ಮೂಲಕ ಎಸಿಪಿ ರಮೇಶ್ ದೂರು ಸ್ವೀಕಾರ ಮಾಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ವೈಟ್ ಫೀಲ್ಡ್ ಸಂಚಾರಿ ಠಾಣೆ ಇನ್ಸ್​​ಪೆಕ್ಟರ್​​ಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಕೆಲವು ಪ್ರದೇಶಗಳಲ್ಲಿ ಸಂಚಾರ ಪೊಲೀಸರೂ ಅದರ ಲಾಭ ಪಡೆದು ಲಂಚ ಪಡೆಯುತ್ತಾರೆ.

ಇದನ್ನೂ ಓದಿ: ಬೆಂಗಳೂರಿನ ಟ್ರಾಫಿಕ್​ ನಿಯಂತ್ರಣಕ್ಕೆ AI ಆಧಾರಿತ ಸಿಗ್ನಲ್​: 125 ಜಂಕ್ಷನ್​ಗಳಲ್ಲಿ ಅಳವಡಿಕೆ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರಿಗೆ 1.6 ಲಕ್ಷ ರೂ. ದಂಡ ವಿಧಿಸಿದ ಬಗ್ಗೆ ಕೆಲವು ದಿನಗಳ ಹಿಂದೆ ಸುದ್ದಿಯಾಗಿತ್ತು. ಕೊನೆಗೆ ಅವರು ದಂಡದ ಮೊತ್ತ ವತಿಸಿದ್ದರು. ಸ್ಕೂಟರ್ ಚಾಲಕ ದಂಡದ ಮೊತ್ತವನ್ನು ಪಾವತಿಸಿದ ನಂತರ, ಪೊಲೀಸರು ವಶಪಡಿಸಿಕೊಂಡಿದ್ದ ವಾಹನವನ್ನು ಹಿಂದಿರುಗಿಸಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದರು. ದಂಡದ ಮೊತ್ತದ ರಶೀದಿ ಸುಮಾರ್ 20 ಮೀಟರ್‌ಗಳಷ್ಟು ಉದ್ದ ಇದ್ದು ಗಮನ ಸೆಳೆದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ