AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಸಂಚಾರ ಪೊಲೀಸರು ಫೋನ್‌ಪೇ ಮತ್ತು ಗೂಗಲ್‌ಪೇ ಮೂಲಕ ಲಂಚ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಒಬ್ಬ ವಾಹನ ಸವಾರ, ಟ್ರಾಫಿಕ್ ನಿಯಮ ಉಲ್ಲಂಘನೆಗೆ 500 ರೂಪಾಯಿಗಳನ್ನು ಫೋನ್‌ಪೇ ಮೂಲಕ ಪೊಲೀಸರಿಗೆ ಪಾವತಿಸಲಾಗಿದೆ ಎಂದು ದೂರಿದ್ದು, ಎಸಿಪಿಗೆ ಮೇಲ್ ಮಾಡಿದ್ದಾರೆ. ಈ ಘಟನೆಯ ಬಗ್ಗೆ ಎಸಿಪಿ ತನಿಖೆಗೆ ಆದೇಶಿಸಿದ್ದಾರೆ.

ಫೋನ್ ಪೇ, ಗೂಗಲ್​ ಪೇಯಲ್ಲೇ ಲಂಚ ತಗೊಳ್ತಾರೆ ಬೆಂಗಳೂರು ಟ್ರಾಫಿಕ್ ಪೊಲೀಸ್!
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 26, 2025 | 11:15 AM

Share

ಬೆಂಗಳೂರು, ಫೆಬ್ರವರಿ 26: ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಲಂಚದ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಆದರೆ, ಈ ಬಾರಿ ಬೆಂಗಳೂರು ಟ್ರಾಫಿಕ್ ಪೊಲೀಸರ ವಿರುದ್ಧದ ಆರೋಪ ಕೇಳಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ! ಏಕೆಂದರೆ, ಫೋನ್ ಪೇ, ಗೂಗಲ್​ ಪೇಯಲ್ಲೇ ಅವರು ಲಂಚ ಪಡೆಯುತ್ತಿರುವುದು ಬಯಲಾಗಿದೆ.

ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ವಿಧಿಸುವ ನೆಪದಲ್ಲಿ ಬೆಂಗಳೂರಿನ ವೈಟ್​ಫೀಲ್ಡ್ ಸಂಚಾರ ಪೊಲೀಸರು ಪೋನ್ ಪೇ, ಗೂಗಲ್ ಪೇ ಮೂಲಕ ತಮ್ಮ ವೈಯಕ್ತಿಕ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಫೋನ್​ ಪೇ ಮೂಲಕ 500 ರೂ. ವರ್ಗಾಯಿಸಿಕೊಂಡಿದ್ದ ಕಾನ್ಸ್​ಟೇಬಲ್

ಫೆಬ್ರವರಿ 21 ರಂದು ವಾಹನ ಸವಾರರೊಬ್ಬರು ವರ್ತೂರು ಕರೆ ಬಳಿ ಓನ್ ವೇಯಲ್ಲಿ ಬಂದಿದ್ದರು. ರಾಚಮಲ್ಲ‌ ಎಂಬಾತ ಓನ್ ವೇಯಲ್ಲಿ ಬಂದು ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್ ಮಂಜುನಾಥ್ ವಾಹನವನ್ನು ಅಡ್ಡ ಹಾಕಿ ನಿಲ್ಲಿಸಿದರು. ವಾಹನ ಸವಾರ 1500 ರೂಪಾಯಿ ದಂಡ ಪಾವತಿಸಲು ಸಿದ್ಧರಾಗಿದ್ದರು. ಆದರೆ, ವಾಹನ ಸವಾರನಿಗೆ ದಂಡದ ರಸೀದಿ ನೀಡಲು ಮಂಜುನಾಥ್ ಸಿದ್ಧರಿರಲಿಲ್ಲ. ಕೊನೆಗೆ 500 ರೂಪಾಯಿ ಫೋನ್ ಪೇ ಮಾಡಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ.

ವೈಟ್ ಫೀಲ್ಡ್ ಸಂಚಾರಿ ಠಾಣೆಯಲ್ಲಿ ದೂರು ದಾಖಲು

ವೈಟ್​ಫೀಲ್ಡ್ ಸಂಚಾರ ಪೊಲೀಸರ ಲಂಚಾವಾತರದ ಬಗ್ಗೆ ವಾಹನ ಸವಾರ ರಾಚಮಲ್ಲ ಎಸಿಪಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ. ಕಾನ್ಸ್​ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಚಮಲ್ಲ ದೂರಿನಲ್ಲಿ ಆಗ್ರಹಿಸಿದ್ದಾರೆ. ಇ ಮೇಲ್ ಮೂಲಕ ಎಸಿಪಿ ರಮೇಶ್ ದೂರು ಸ್ವೀಕಾರ ಮಾಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ವೈಟ್ ಫೀಲ್ಡ್ ಸಂಚಾರಿ ಠಾಣೆ ಇನ್ಸ್​​ಪೆಕ್ಟರ್​​ಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಕೆಲವು ಪ್ರದೇಶಗಳಲ್ಲಿ ಸಂಚಾರ ಪೊಲೀಸರೂ ಅದರ ಲಾಭ ಪಡೆದು ಲಂಚ ಪಡೆಯುತ್ತಾರೆ.

ಇದನ್ನೂ ಓದಿ: ಬೆಂಗಳೂರಿನ ಟ್ರಾಫಿಕ್​ ನಿಯಂತ್ರಣಕ್ಕೆ AI ಆಧಾರಿತ ಸಿಗ್ನಲ್​: 125 ಜಂಕ್ಷನ್​ಗಳಲ್ಲಿ ಅಳವಡಿಕೆ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರಿಗೆ 1.6 ಲಕ್ಷ ರೂ. ದಂಡ ವಿಧಿಸಿದ ಬಗ್ಗೆ ಕೆಲವು ದಿನಗಳ ಹಿಂದೆ ಸುದ್ದಿಯಾಗಿತ್ತು. ಕೊನೆಗೆ ಅವರು ದಂಡದ ಮೊತ್ತ ವತಿಸಿದ್ದರು. ಸ್ಕೂಟರ್ ಚಾಲಕ ದಂಡದ ಮೊತ್ತವನ್ನು ಪಾವತಿಸಿದ ನಂತರ, ಪೊಲೀಸರು ವಶಪಡಿಸಿಕೊಂಡಿದ್ದ ವಾಹನವನ್ನು ಹಿಂದಿರುಗಿಸಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದರು. ದಂಡದ ಮೊತ್ತದ ರಶೀದಿ ಸುಮಾರ್ 20 ಮೀಟರ್‌ಗಳಷ್ಟು ಉದ್ದ ಇದ್ದು ಗಮನ ಸೆಳೆದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ